ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪುಟ್ಟ ಹುಡುಗಿಯ ಬ್ಯಾಟಿಂಗ್ ಕೌಶಲ್ಯ; ಸಚಿನ್ ತೆಂಡೂಲ್ಕರ್, ಜಯ್ ಶಾ ಫಿದಾ! ವಿಡಿಯೋ ವೈರಲ್

Twitter
Facebook
LinkedIn
WhatsApp
ಪುಟ್ಟ ಹುಡುಗಿಯ ಬ್ಯಾಟಿಂಗ್ ಕೌಶಲ್ಯ; ಸಚಿನ್ ತೆಂಡೂಲ್ಕರ್, ಜಯ್ ಶಾ ಫಿದಾ!

ಜೈಪುರ: ರಾಜಸ್ಥಾನದ ರೈತರೊಬ್ಬರ ಮಗಳು ಅದ್ಭುತವಾಗಿ ಬ್ಯಾಟಿಂಗ್ ಮಾಡುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಗಮನ ಸೆಳೆದಿದ್ದು, ಬಾಲಕಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳಾ ಪ್ರೀಮಿಯರ್ ಲೀಗ್ ಹರಾಜು ನಡೆದ ದಿನದಂದೇ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಕನಾಸರ್ ಗ್ರಾಮದ ಬಡ ರೈತನ ಮಗಳು, 14 ವರ್ಷದ ಮುಮಲ್ ಮೆಹರ್ ಅವರು ಹುಡುಗರೊಂದಿಗೆ ಕ್ರಿಕೆಟ್ ಆಡುತ್ತಿರುವ ವೇಳೆ ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಬಾರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಈ ವೀಡಿಯೋ ಸಚಿನ್ ತೆಂಡೂಲ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಗಮನ ಸೆಳೆದಿದ್ದು, ಅವರು ವೀಡಿಯೋವನ್ನು ಟ್ವಿಟರ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.  “”ಹರಾಜು ನಿನ್ನೆಯಷ್ಟೇ ನಡೆಯಿತು ಮತ್ತು ಇಂದು ಪಂದ್ಯವೂ ಪ್ರಾರಂಭವಾಗಿದೆ? ಏನು ವಿಷಯ, ನಿಜವಾಗಿಯೂ ನಿಮ್ಮ ಬ್ಯಾಟಿಂಗ್ ಅನ್ನು ಆನಂದಿಸಿದೆ” ಎಂದು ಸಚಿನ್ ತೆಂಡೂಲ್ಕರ್ ಬರೆದಿದ್ದಾರೆ.

ಇನ್ನು “ಚಿಕ್ಕ ಹುಡುಗಿಯ ಕ್ರಿಕೆಟ್ ಕೌಶಲ್ಯ ಮತ್ತು ಆಟದ ಮೇಲಿನ ಉತ್ಸಾಹ ನೋಡುಗರನ್ನು ಆಶ್ಚರ್ಯ ಮೂಡಿಸಿದೆ. ಮಹಿಳಾ ಕ್ರಿಕೆಟ್‌ನ ಭವಿಷ್ಯ ಉತ್ತಮ ಕೈಯಲ್ಲಿದೆ ಎಂದು ನೋಡಲು ನನಗೆ ಸಂತೋಷವಾಗಿದೆ. ನಮ್ಮ ಯುವ ಅಥ್ಲೀಟ್‌ಗಳನ್ನು ಸಬಲೀಕರಣಗೊಳಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ, ಇದರಿಂದ ಅವರ ಭವಿಷ್ಯದ ಬದಲಾಯಿಸಬಹುದು” ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.

ರಾಜಸ್ಥಾನ ಬಿಜೆಪಿ ಅಧ್ಯಕ್ಷ ಪಿಎಲ್ ಪೂನಿಯಾ ಅವರು ಸಹ ಬಾಲಕಿಯ ಬ್ಯಾಟಿಂಗ್ ಅನ್ನು ಶ್ಲಾಘಿಸಿದ್ದು, ಬಾಲಕಿ ಸಂಪೂರ್ಣ ಕ್ರಿಕೆಟ್ ನಲ್ಲಿ ತೊಡಗಿಕೊಳ್ಳಲು ಕ್ರಿಕೆಟ್ ಕಿಟ್ ಕಾಣಿಕೆಯಾಗಿ ನೀಡಿದ್ದಾರೆ. ಮರುಭೂಮಿ ಜಿಲ್ಲೆಯ ಮರಳಿನ ದಿಬ್ಬಗಳಲ್ಲಿ ಬೂಟುಗಳಿಲ್ಲದೆ ಕ್ರಿಕೆಟ್ ಆಡುತ್ತಿದ್ದ ಬಾಲಕಿಗೆ ಇದು ಗಮನಾರ್ಹ ತಿರುವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist