ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉದ್ಧವ್ ಠಾಕ್ರೆಗೆ ತೀವ್ರ ಮುಖಭಂಗ; ಏಕನಾಥ್ ಶಿಂಧೆ ಬಣ ಪಾಲಾದ ಶಿವಸೇನೆಯ ‘ಬಿಲ್ಲು ಬಾಣ’ ಚಿಹ್ನೆ

Twitter
Facebook
LinkedIn
WhatsApp
ಉದ್ಧವ್ ಠಾಕ್ರೆಗೆ ತೀವ್ರ ಮುಖಭಂಗ; ಏಕನಾಥ್ ಶಿಂಧೆ ಬಣ ಪಾಲಾದ ಶಿವಸೇನೆಯ ‘ಬಿಲ್ಲು ಬಾಣ’ ಚಿಹ್ನೆ

ನವದೆಹಲಿ: ಶಿವಸೇನೆ ವರ್ಸಸ್ ಶಿವಸೇನೆ ನಡುವಿನ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಗೆಲುವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಮುಖಭಂಗವಾಗಿದೆ.

ಕೇಂದ್ರ ಚುನಾವಣಾ ಆಯೋಗ  ಶಿವಸೇನೆಯ ಮೂಲ ಚಿಹ್ನೆಯಾದ ‘ಬಿಲ್ಲು ಬಾಣ’ವನ್ನು ಶಿಂಧೆ ಬಣಕ್ಕೆ ನೀಡುವ ಮೂಲಕ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿದೆ.

ತಮ್ಮ ಬಣವವೇ ನಿಜವಾದ ಶಿವಸೇನಾ ಎಂದು ಪರಿಗಣಿಸಿ ಪಕ್ಷದ ಚುನಾವಣಾ ಚಿಹ್ನೆಯನ್ನು ನೀಡುವಂತೆ ಏಕನಾಥ ಶಿಂಧೆ ಬಣ ಹಾಗೂ ಉದ್ಧವ್ ಠಾಕ್ರೆ ಬಣ ಚುನಾವಣಾ ಆಯೋಗದ ಮೊರೆ ಹೋಗಿದ್ದವು. ಆಯೋಗ ಅಂತಿಮವಾಗಿ ಬಿಲ್ಲು ಬಾಣ’ ಚಿಹ್ನೆಯನ್ನು ಶಿಂಧೆ ಬಣಕ್ಕೆ ನೀಡಿದೆ.

ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಿದೆ. ಪಕ್ಷದ ಚಿಹ್ನೆ ವಿವಾದ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆ ನಡೆಯುತ್ತಿರುವಾಗಲೇ ಚುನಾವಣಾ ಆಯೋಗ ಆದೇಶ ನೀಡಿದೆ ಚುನಾವಣಾ ಆಯೋಗದ ಆದೇಶವನ್ನು ‘ಸುಪ್ರೀಂ ಕೋರ್ಟ್​’ನಲ್ಲಿ ಪ್ರಶ್ನಿಸುತ್ತೇವೆ ಎಂದು ಮಾಜಿ ಸಿಎಂ ಉದ್ಧವ್ ಬಣದ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಏಕನಾಥ್ ಶಿಂಧೆಗೆ ಚಿಹ್ನೆ ಒಲಿದ ಬಗ್ಗೆ ಉದ್ಧವ್ ಬಣದ ನಾಯಕ ಆನಂದ್ ದುಬೆ ಪ್ರತಿಕ್ರಿಯಿಸಿ, ಚುನಾವಣಾ ಆಯೋಗದ ಆದೇಶದ ಬಗ್ಗೆ ನಮಗೆ ಅನುಮಾನವಿತ್ತು. ನಾವು ಚುನಾವಣಾ ಆಯೋಗವನ್ನು ನಂಬುವುದಿಲ್ಲ. ಇದೇ ವಿಚಾರದ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ಈ ಮಧ್ಯೆ ಚುನಾವಣಾ ಆಯೋಗ ಆತುರದ ನಿರ್ಧಾರ ಮಾಡಿದೆ. ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡಿದೆ. ನಾವು ಆಯೋಗ ಕ್ರಮವನ್ನು ಖಂಡಿಸುತ್ತೇವೆ ಎಂದಿದ್ದಾರೆ.

ಈ ಹಿಂದೆ ಅಂಧೇರಿ ಪೂರ್ವ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಎರಡು ಬಣಗಳು ಶಿವಸೇನೆ ಚಿಹ್ನೆ ಬಳಸಬಾರದು ಎಂದು ಚುನಾವಣಾ ಆಯೋಗ ಹೇಳಿತ್ತು. ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಅಂದಿನ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಆಘಾಡಿ ಸರ್ಕಾರವನ್ನು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರು ಠಾಕ್ರೆ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದರು. ಬಳಿಕ ಏಕನಾಥ್ ಶಿಂಧೆ ಬಿಜೆಪಿ ಜೊತೆ ಸೇರಿಕೊಂಡು ಸರ್ಕಾರ ರಚಿಸಿದ್ದರು. ಬಳಿಕ ಚಿಹ್ನೆಗಾಗಿ ಎರಡು ಬಣಗಳ ನಡುವೆ ಗುದ್ದಾಟ ಶುರುವಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist