ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತಿ ಮತ್ತು ಅತ್ತೆಯನ್ನು ಕೊಂದ ಮಹಿಳೆ, ತುಂಡರಿಸಿದ ಮೃತದೇಹಗಳನ್ನು ಮೇಘಾಲಯದಲ್ಲಿ ಎಸೆದ ಚಾಲಕಿ ಸುಂದರಿ!

Twitter
Facebook
LinkedIn
WhatsApp
ಪತಿ ಮತ್ತು ಅತ್ತೆಯನ್ನು ಕೊಂದ ಮಹಿಳೆ, ತುಂಡರಿಸಿದ ಮೃತದೇಹಗಳನ್ನು ಮೇಘಾಲಯದಲ್ಲಿ ಎಸೆದ ಚಾಲಕಿ ಸುಂದರಿ!

ಗುವಾಹಟಿ: ಗುವಾಹಟಿಯಲ್ಲಿ ಮಹಿಳೆಯೊಬ್ಬರು ಆಕೆಯ ಪತಿ ಮತ್ತು ಅತ್ತೆಯನ್ನು ಕೊಂದು, ಅವರ ದೇಹಗಳನ್ನು ಕತ್ತರಿಸಿ ಮೂರು ದಿನಗಳ ಕಾಲ ಮನೆಯಲ್ಲಿ ಫ್ರಿಡ್ಜ್‌ನಲ್ಲಿ ಇರಿಸಿದ ಪ್ರಕರಣ ವರದಿ ಆಗಿದೆ. ಮಹಿಳೆಯನ್ನು ಬಂಧಿಸಲಾಗಿದೆ. ತುಂಡರಿಸಿದ ಮೃತದೇಹಗಳನ್ನು ಆಕೆ ನೆರೆಯ ಮೇಘಾಲಯದಲ್ಲಿ ವಿಲೇವಾರಿ ಮಾಡಿರುವುದಾಗಿ ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಬಂದನಾ ಕಲಿತಾ ಎಂದು ಗುರುತಿಸಲಾದ ಮಹಿಳೆಯನ್ನು ಆಕೆ ಸಂಬಂಧದಲ್ಲಿದ್ದ ವ್ಯಕ್ತಿ ಧಂಜಿತ್ ದೇಕಾ ಮತ್ತು ಆಕೆಯ ಸ್ನೇಹಿತ ಅರೂಪ್ ದಾಸ್ ಅವರೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇಬ್ಬರ ಸಾವಿಗೆ ಕಾರಣವಾದ ಘಟನೆಗಳ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಸಿಕ್ಕಿಲ್ಲ.

ಅಮರೇಂದ್ರ ಡೇ ಮತ್ತು ಅವರ ತಾಯಿ ಶಂಕರಿ ಡೇ ಅವರು ಏಳು ತಿಂಗಳ ಹಿಂದೆ ಕೊಲ್ಲಲ್ಪಟ್ಟರು. “ನಾವು ಎಲ್ಲಾ ಮೂವರು ಆರೋಪಿಗಳನ್ನು ಬಂಧಿಸಿದ್ದೇವೆ ಮತ್ತು ಈಗ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ” ಎಂದು ಗುವಾಹಟಿ ಪೊಲೀಸ್ ಕಮಿಷನರ್ ದಿಗಂತ ಬರಾಹ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಪ್ರಮುಖ ಶಂಕಿತ ಆರೋಪಿ ಕೊಲೆ ಕೃತ್ಯವೆಸಗಿದ ನಂತರ ಗುವಾಹಟಿಯ ನೂನ್ಮತಿ ಪೊಲೀಸ್ ಠಾಣೆಯಲ್ಲಿ ತನ್ನ ಪತಿ ಮತ್ತು ಅವನ ತಾಯಿಯ ಬಗ್ಗೆ ಕಾಣೆಯಾದವರ ವರದಿಯನ್ನು ಸಲ್ಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣಲಿಲ್ಲ.

ಸ್ವಲ್ಪ ಸಮಯದ ನಂತರ, ಅಮರೇಂದ್ರ ಅವರ ಸೋದರಸಂಬಂಧಿ ಮತ್ತೊಂದು ಕಾಣೆಯಾದ ದೂರನ್ನು ದಾಖಲಿಸಿದರು, ಇದು ಹೆಂಡತಿಯ ಬಗ್ಗೆ ಅನುಮಾನವನ್ನು ಹುಟ್ಟುಹಾಕಿತು. ನಂತರ ನಾವು ನಮ್ಮ ತನಿಖೆಯನ್ನು ಪುನಃ ಪ್ರಾರಂಭಿಸಿದ್ದೇವೆ ಮತ್ತು ಕೊಲೆ ಪ್ರಕರಣ ಪತ್ತೆಹಚ್ಚಿದ್ದೇವೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ದಿಗಂತ ಕುಮಾರ್ ಚೌಧರಿ ಪಿಟಿಐಗೆ ತಿಳಿಸಿದ್ದಾರೆ.

ಶವಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ಪಾಲಿಥಿನ್ ಚೀಲಗಳಲ್ಲಿ ಪ್ಯಾಕ್ ಮಾಡಿ ಮತ್ತು ಚೀಲಗಳನ್ನು ಮೇಘಾಲಯಕ್ಕೆ ತೆಗೆದುಕೊಂಡು ಅಲ್ಲಿ ಅರಣ್ಯ ಪ್ರದೇಶದಲ್ಲಿ ಎಸೆಯಲಾಯಿತು ಎಂದು ಆರೋಪಿ ಹೇಳಿರುವುದಾಗಿ ಚೌಧರಿ ಹೇಳಿದರು. “ನಾವು ಮೃತದೇಹಗಳನ್ನು ಪತ್ತೆಹಚ್ಚಿದ್ದೇವೆ. ನಿನ್ನೆ ಮೇಘಾಲಯದಿಂದ ಕೆಲವು ಭಾಗಗಳನ್ನು ವಶಪಡಿಸಿಕೊಂಡಿದ್ದೇವೆ. ಮೃತ ಇಬ್ಬರ ದೇಹಗಳು ಅಥವಾ ದೇಹದ ಎಲ್ಲಾ ಭಾಗಗಳನ್ನು ಹುಡುಕಲು ನಮ್ಮ ಕಾರ್ಯಾಚರಣೆ ನಡೆಯುತ್ತಿದೆ ಎಂದಿದ್ದಾರೆ ಅವರು. ವಿಚಾರಣೆಗಾಗಿ ಫೆಬ್ರವರಿ 17 ರಂದು ಕಲಿಯಾ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ