ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೆ. 22ರಿಂದ ಮಂಗಳೂರು-ಪಣಜಿಗೆ ರಾಜಹಂಸ ಬಸ್ ಸೇವೆ ಪ್ರಾರಂಭ

Twitter
Facebook
LinkedIn
WhatsApp
50862492627 e9599caf18 b

ಮಂಗಳೂರು, ಫೆ 21 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಮಂಗಳೂರಿನಿಂದ ಉಡುಪಿ ಕುಂದಾಪುರ ಬೈಂದೂರು, ಭಟ್ಕಳ, ಹೊನ್ನಾವರ ಕುಮಟಾ, ಅಂಕೋಲಾ, ಕಾರವಾರ, ಪೊಲೆಂಕಾನಕೋನ, ಮಡಗಾಂವ್, ಪೋಂಡ, ಮಂಗೇಶಿ, ಪಣಜಿ ಹಾಗೂ ಬರುವ ಮಾರ್ಗದಲ್ಲಿ ಪಣಜಿ, ಕೊರ್ಟಾಲಿಂ, ಮಡಗಾಂವ್, ಕಾನಕೋನ, ಪೊಲೆಂ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಬೈಂದೂರು, ಕುಂದಾಪುರ, ಮಣಿಪಾಲ, ಉಡುಪಿ ಮಾರ್ಗವಾಗಿ ರಾಜಹಂಸ ಹೊಸ ಸಾರಿಗೆಯನ್ನು ಇದೇ ಫೆ.22ರಿಂದ ಪ್ರಾರಂಭಿಸಲಿದೆ.

ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ರಾತ್ರಿ 9 ಗಂಟೆಗೆ ಹೊರಟು ಉಡುಪಿಯಲ್ಲಿ 10.15 ರಿಂದ 10.30ರ ವರೆಗೆ, ಕುಂದಾಪುರಕ್ಕೆ 11.15ಕ್ಕೆ ತಲುಪುವುದು. ನಂತರ ಭಟ್ಕಳ 12.15ಕ್ಕೆ ಹೊರಟು ಹೊನ್ನಾವರ 12.45, ಅಂಕೋಲಾಕ್ಕೆ ರಾತ್ರಿ 2ಗೆ ತಲುಪುವುದು. ನಂತರ ಕಾರವಾರದಲ್ಲಿ 2.30 ರಿಂದ 2.45ರ ವೆರಗೆ, ಪಣಜಿಗೆ ಮುಂಜಾನೆ 5.30ಗಂಟೆಗೆ ತಲುಪುವುದು.

ಮರು ಪ್ರಯಾಣದಲ್ಲಿ ಪಣಜಿಯಿಂದ ರಾತ್ರಿ 8 ಗಂಟೆಗೆ ಹೊರಟು ಮಡಗಾಂವ್ 8.45, ಕಾರವಾರ 9.45, ಕುಮಟಾ 11.45, ಭಟ್ಕಳ 1.15ಕ್ಕೆ ತಲುಪುವುದು. ನಂತರ ಕುಂದಾಪುರ 2ಗಂಟೆಗೆ ಅಲ್ಲಿಂದ ಉಡುಪಿ 3 ಗಂಟೆಗೆ ನಂತರ ಮಂಗಳೂರು ರೈಲು ನಿಲ್ದಾಣಕ್ಕೆ ಮುಂಜಾನೆ 4 ಗಂಟೆಗೆ ತಲುಪುವುದು.

ಈ ಸಾರಿಗೆಯಲ್ಲಿ ಮಂಗಳೂರಿನಿಂದ ಪಣಜಿಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 620ರೂ.ಗಳು, ಉಡುಪಿಯಿಂದ ಪಣಜಿಗೆ 590 ರೂ.ಗಳು, ಕುಂದಾಪುರದಿಂದ ಪಣಜಿಗೆ 570 ರೂ.ಗಳಾಗಿದೆ. ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ.

ಹೆಚ್ಚಿನ ಮಾಹಿತಿಗೆ ಹತ್ತಿರದ ರಿಸರ್ವೇಶನ್ ಕೌಂಟರ್ ಹಾಗೂ ಮೊಬೈಲ್‍ಸಂಖ್ಯೆ: ಮಂಗಳೂರು ಬಸ್ಸು ನಿಲ್ದಾಣ – 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್- 9663211553, ಉಡುಪಿ ಡಾ. ವಿ.ಎಸ್. ಆಚಾರ್ಯ ಬಸ್ಸು ನಿಲ್ದಾಣ- 7795984182, ಉಡುಪಿ ಬಸ್ಸು ನಿಲ್ದಾಣ – 9663266400 ಹಾಗೂ ಕುಂದಾಪುರ ಬಸ್ಸು ನಿಲ್ದಾಣ- 9663266009 ಅನ್ನು ಸಂಪರ್ಕಿಸುವಂತೆ ಕರಾರಸಾ ಸಂಸ್ಥೆಯ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ