ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಕ್ಕು ಕಿಡ್ನ್ಯಾಪ್ ಮಾಡಿ ಮಂಗಳೂರಿಗೆ ಕಳುಹಿಸಿದ್ದರು: ಪತ್ತೆಯಾಯ್ತು ದೀಪಿಕಾ ದಾಸ್ ಶ್ಯಾಡೋ

Twitter
Facebook
LinkedIn
WhatsApp
heroclean 15edit1621693160 3 1

ಕಿರುತೆರೆ ನಟಿಯ, ಬಿಗ್ ಬಾಸ್ ಸ್ಪರ್ಧಿ ದೀಪಿಕಾ ದಾಸ್ (Deepika Das) ಮೊನ್ನೆಯಷ್ಟೇ ತಮ್ಮ ಮನೆಯ ಬೆಕ್ಕು (cat) ಶ್ಯಾಡೋ (Shadow) ಕಾಣಿಯಾಗಿದ್ದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಬೆಕ್ಕನ್ನು ಹುಡುಕಿಕೊಟ್ಟವರಿಗೆ ಬಹುಮಾನ ಕೊಡುವುದಾಗಿ ಪ್ರಕಟಿಸಿದ್ದರು. ಇದೀಗ ಬೆಕ್ಕು ಪತ್ತೆಯಾಗಿದೆ. ಅದು ಮಂಗಳೂರಿನಲ್ಲಿ (Mangalore) ಎನ್ನುವುದು ವಿಶೇಷ. ಬೆಂಗಳೂರಿನಿಂದ ಮಂಗಳೂರಿಗೆ ಅದು ಹೇಗೆ ಹೋಯಿತು? ಸದ್ಯಕ್ಕೆ ಸಸ್ಪೆನ್ಸ್.

ತಮ್ಮ ಶ್ಯಾಡೋ ಅನ್ನು ಬೆಂಗಳೂರಿನಲ್ಲಿ ಕಿಡ್ನ್ಯಾಪ್ (Kidnap) ಮಾಡಿ ಮಂಗಳೂರಿಗೆ ಕಳುಹಿಸಿದ್ದರ ಬಗ್ಗೆ ಸ್ವತಃ ದೀಪಿಕಾ ಅವರೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅದನ್ನು ಕದ್ದವರು ಯಾರು? ಮಂಗಳೂರಿಗೆ ಹೋಗಿದ್ದು ಹೇಗೆ? ಅದನ್ನು ಹುಡುಕಿದ ಕಥೆ ಏನು? ಹೀಗೆ ಎಲ್ಲವನ್ನೂ ಮುಂದಿನ ದಿನಗಳಲ್ಲಿ ಹೇಳಲಿದ್ದಾರಂತೆ ದೀಪಿಕಾ ದಾಸ್. ಸದ್ಯಕ್ಕೆ ಬೆಕ್ಕು ಸಿಕ್ಕಿದೆ. ಹಾಗಾಗಿ ಬಹುಮಾನ ಅವರಲ್ಲೇ ಉಳಿದಿದೆ. 

ದೀಪಿಕಾ ದಾಸ್ ಅವರಿಗೆ ಬೆಕ್ಕು ಮತ್ತು ಶ್ವಾನ ಎಂದರೆ ತುಂಬಾ ಇಷ್ಟ. ಅವರ ಮನೆಯಲ್ಲಿ ಪ್ರಾಣಿಗಳು ಕೂಡ ಕುಟುಂಬದ ಸದಸ್ಯರಾಗಿದ್ದಾರೆ. ಮನೆಯವರಿಗೆ ಕೊಡುವಷ್ಟೇ ಪ್ರೀತಿಯನ್ನು ಬೆಕ್ಕಿ-ಶ್ವಾನಕ್ಕೆ ಕೊಡುತ್ತಿದ್ದಾರೆ. ಕುಟುಂಬದ ಸದಸ್ಯರಲ್ಲಿ ಒಬ್ಬರಾಗಿದ್ದ ಶ್ಯಾಡೋ (Shadow) ಕಾಣೆಯಾಗಿದ್ದರ ಬಗ್ಗೆ ಅವರು ತುಂಬಾನೇ ನೊಂದುಕೊಂಡಿದ್ದರು.

 ಫೆ.18ರಂದು ರಾತ್ರಿಯಿಂದ ವಿಶ್ವೇಶ್ವರಯ್ಯ ಲೇಔಟ್, 3ನೇ ಬ್ಲಾಕ್, ಉಲ್ಲಾಳು, ಬೆಂಗಳೂರಿನಲ್ಲಿ  ಶ್ಯಾಡೋ ಕಾಣೆಯಾಗಿತ್ತು ಎಂದು ನಟಿ ಅಳಲು ತೊಡಿಕೊಂಡಿದ್ದರು. ಈ ಕುರಿತು ಮಾಹಿತಿಯನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು. ಶ್ಯಾಡೋ ಅನ್ನು ಹುಡುಕಿ ಕೊಟ್ಟವರಿಗೆ ಬಹುಮಾನ ಕೊಡಲಾಗುವುದು ಎಂದು ಹತ್ತು ಸಾವಿರದಿಂದ ಹದಿನೈದು ಸಾವಿರ ರೂಪಾಯಿವರೆಗೂ  ಹಣವನ್ನು ಘೋಷಣೆ ಮಾಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ