ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು-ಮಂಗಳೂರು ಆಕರ್ಷಕ ವಿಸ್ಟಾಡೋಮ್‌ ಬೋಗಿಯ ರೈಲು ಸಂಚಾರಕ್ಕೆ ಚಾಲನೆ

Twitter
Facebook
LinkedIn
WhatsApp
ಬೆಂಗಳೂರು-ಮಂಗಳೂರು ಆಕರ್ಷಕ ವಿಸ್ಟಾಡೋಮ್‌ ಬೋಗಿಯ ರೈಲು ಸಂಚಾರಕ್ಕೆ ಚಾಲನೆ

ಮಂಗಳೂರು: ರಾಜ್ಯದ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳೂರು ಬೆಂಗಳೂರು ನಡುವಣ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್‌ ರೈಲು ಸಂಚಾರಕ್ಕೆ ರವಿವಾರ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗಿದೆ.

ರೈಲು ಸಂಖ್ಯೆ 06540/06539 ಮಂಗಳೂರು ಜಂಕ್ಷನ್‌ ಯಶವಂತಪುರ ಎಕ್ಸ್‌ ಪ್ರಸ್‌ ರೈಲಿಗೆ ಎರಡು ವಿಸ್ಟಾಡೋಮ್‌ ಬೋಗಿಗಳನ್ನು ಜೋಡಿಸಲಾಗಿದೆ. ಮಂಗಳೂರು-ಯಶವಂತಪುರ ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ‘ವಿಸ್ಟಾಡೋಮ್’ ಬೋಗಿಗಳನ್ನು ಸೇರ್ಪಡಿಸಿಕೊಂಡು ಸಂಚಾರ ಸೇವೆಗೆ ರವಿವಾರ ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಬೆಂಗಳೂರು-ಮಂಗಳೂರು ಆಕರ್ಷಕ ವಿಸ್ಟಾಡೋಮ್‌ ಬೋಗಿಯ ರೈಲು ಸಂಚಾರಕ್ಕೆ ಚಾಲನೆ

ಸಂಸದ ನಳಿನ್ ಕುಮಾರ್ ಕಟೀಲ್‌ರ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ರೈಲ್ವೆ ಇಲಾಖೆಯು ಹೆಚ್ಚು ಮುತುವರ್ಜಿ ವಹಿಸಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಪ್ರಯತ್ನ ಮಾಡಿದೆ. ಸಾರ್ವಜನಿಕರು ಅನೇಕ ಬೇಡಿಕೆಗಳನ್ಬು ಮುಂದಿಟ್ಟಿದ್ದು, ಒಂದೊಂದೇ ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದೆ. 2014ರವರೆಗೆ ಆಮೆಗತಿಯಲ್ಲಿ ಸಾಗುತ್ತಿದ್ದ ಅಭಿವೃದ್ಧಿ ಕಾಮಗಾರಿಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಬಂದ ಬಳಿಕ ಸಾಕಷ್ಟು ತ್ವರಿತವಾಗಿ ನಡೆಯುತ್ತಿದೆ ಎಂದು ಹೇಳಿದರು.
ಅಂದಹಾಗೆ, ಪ್ರತೀ ವಿಸ್ಟಾಡೋಮ ಬೋಗಿಯಲ್ಲಿ 44 ಮಂದಿ ಪ್ರಯಾಣಿಸಬಹುದಾಗಿದೆ. ಎರಡು ಬೋಗಿಯಲ್ಲಿ 88 ಮಂದಿ ಯಾಣಿಸಬಹುದಾಗಿದೆ. ಈ ವಿಶೇಷ ಬೋಗಿಯು ಪಶ್ಚಿಮ ಘಟ್ಟದ ನಡುವೆ ಸಂಚರಿಸುವ ಸಂದರ್ಭ ರೈಲು ಪ್ರಯಾಣಿಕರಿಗೆ ಪ್ರಕೃತಿಯ ರಮಣೀಯ ಸೌಂದರ್ಯವನ್ನು ಕಣ್ತುಂಬಿಸುವ ಅವಕಾಶ ಸಿಗಲಿವೆ.

ಪಶ್ಚಿಮಘಟ್ಟ ಮತ್ತು ಕರಾವಳಿ ಭಾಗದಲ್ಲಿ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್ ಕೋಚ್‌ಗಳನ್ನು ಜೋಡಿಸಲಾಗಿದೆ. ಬೆಂಗಳೂರು-ಮಂಗಳೂರು ನಡುವೆ ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರು ಪ್ರಕೃತಿಯ ಸೊಬಗಿನ ದರ್ಶನವನ್ನು ಪಡೆಯಲಿದ್ದಾರೆ.
ಕಳೆದ ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಛಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾರ್ವಜನಿಕರು ಮನವಿ ಮಾಡಿದ ಮೇರೆಗೆ ವಿಸ್ಟಾಡೋಮ್ ರೈಲು ಸಂಚಾರ ಆರಂಭಗೊಂಡಿದೆ. ಪಶ್ಚಿಮ ಘಟ್ಟದ ನಡುವೆ ಹಾದುಹೋಗುವ ಈ ರೈಲುಮಾರ್ಗದಲ್ಲಿ ಸಂಚರಿಸುವವರಿಗೆ ಶಿರಾಡಿ ಘಾಟಿಯ ಸೌಂದರ್ಯವನ್ನು ರೈಲಿನೊಳಗೆ ಕುಳಿತು ಸವಿಯಲು ಸಿದ್ಧರಾಗಿದ್ದಾರೆ. ಮಾರ್ಗ ಮಧ್ಯದಲ್ಲಿ ಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಆಸ್ವಾದಿಸಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು