ಬುಧವಾರ, ಮೇ 8, 2024
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅತೀವೇಗದಿಂದ ಚಲಿಸಿದ ಕಾರು ಅಪಘಾತ, ಟ್ರಕ್‌ಗೆ ಡಿಕ್ಕಿಯಾಗಿ ಐವರ ಸಾವು!

Twitter
Facebook
LinkedIn
WhatsApp
ಅತೀವೇಗದಿಂದ ಚಲಿಸಿದ ಕಾರು ಅಪಘಾತ, ಟ್ರಕ್‌ಗೆ ಡಿಕ್ಕಿಯಾಗಿ ಐವರ ಸಾವು!

ಸುಲ್ತಾನಪುರ: ಭಾರತದಲ್ಲಿ ರಸ್ತೆ ಅಪಘಾತ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅತೀ ವೇಗ, ನಿಯಮಗಳ ನಿರ್ಲಕ್ಷ್ಯ ಸೇರಿದಂತೆ ಹಲವು ಕಾರಣಗಳಿಂದ ಅಪಘಾತ ಸಂಭವಿಸುತ್ತಿದೆ. ಅದರಲ್ಲೂ ಎಕ್ಸ್‌ಪ್ರೆಸ್‌ವೇನಲ್ಲಿ ಅತೀವೇಗದ ಪರಿಣಾಮ ಅಪಘಾತದ ಪ್ರಮಾಣ ಜಾಸ್ತಿಯಾಗಿದೆ. ಇದೀಗ ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇನಲ್ಲಿ ಅತೀವೇಗದಿಂದ ಕಾರು ಟ್ರಕ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ವೇಳೆ  ಯುಪಿಯ ಸುಲ್ತಾನಪುರ್ ಜಿಲ್ಲೆ ಬಳಿ ಈ ಘಟನೆ ನಡೆದಿದೆ.

ಮೃತರನ್ನು 19 ವರ್ಷದ ಸಾಹಿಲ್ ಖಂದ್, ಶಾರುಖ್(25), ಸೈನಾ ಖಟೂನ್(37), ಜಮೀಲಾ(33) ಹಾಗೂ ರುಕ್ಸರ್(31) ಎಂದು ಗುರುತಿಸಲಾಗಿದೆ. ದೆಹಲಿಯಿಂದ ಬಿಹಾರದ ಸಸರಾಂಗೆ ತೆರಳಲು ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಮೂಲಕ ಸಾಗಿದ್ದಾರೆ. ಅತೀ ವೇಗದದಲ್ಲಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.

ಅಪಘಾತ ಸಂಭವಿಸಿದ ಬೆನ್ನಲ್ಲೇ ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲಾಗಿದೆ. ಆದರೆ ಆಸ್ಪತ್ರೆ ಸೇರುವ ಮೊದಲೇ ಐವರು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಿಂದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಸಂಭವಿಸಿತ್ತು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಮೃತರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಭೀಕರ ಅಪಘಾತ ಎಕ್ಸ್‌ಪ್ರೆಸ್‌ವೇನಲ್ಲಿನ ಅತೀವೇಗದ ಚಾಲನೆಗೆ ನೀಡಿದ ಮುನ್ನಚ್ಚೆರಿಕಿಯಾಗಿದೆ. ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳ ಪ್ರಮಾಣ ಇತರ ಹೆದ್ದಾರಿಗಳಿಗಿಂತ ಕಡಿಮೆಯಾಗಿದೆ. ಆದರೆ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳು ಅತ್ಯಂತ ಭೀಕರ ಅನ್ನೋ ಅಭಿಪ್ರಾಯಗಳು ವ್ಯಕ್ತವಾಗಿದೆ. ಇತ್ತ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗುತ್ತಿದೆ. ಎಕ್ಸ್‌ಪ್ರೆಸ್‌ವೇ ಅವೈಜ್ಞಾನಿಕ ಅನ್ನೋ ಮಾತುಗಳು ಕೇಳಿಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ