ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಡಿಕೇರಿ ಕ್ಷೇತ್ರಕ್ಕೆ ಡಾ. ಮಂತರ್ ಗೌಡ, ವಿರಾಜಪೇಟೆ ಕ್ಷೇತ್ರಕ್ಕೆ ಎ ಎಸ್ ಪೊನ್ನನ್ನ, ಸುಳ್ಯ ಕ್ಷೇತ್ರಕ್ಕೆ ನಂದಕುಮಾರ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಬಹುತೇಕ ಅಂತಿಮ.

Twitter
Facebook
LinkedIn
WhatsApp
WhatsApp Image 2023 03 14 at 10.40.48 AM

ಮಡಿಕೇರಿ: ಕೊಡಗು ಜಿಲ್ಲೆಯ ಮೂರು ಅಭ್ಯರ್ಥಿಗಳು ಈ ಬಾರಿ ಕಾಂಗ್ರೆಸ್ ಟಿಕೆಟ್ ಪಡೆಯುವುದು ಬಹುತೇಕ ಅಂತಿಮವಾಗಿದೆ ಎಂದು ತಿಳಿದುಬಂದಿದೆ.ಮಡಿಕೇರಿ ಕ್ಷೇತ್ರಕ್ಕೆ ಕೊಡಗಿನಲ್ಲಿ ಅಭಿವೃದ್ಧಿ ಚಿಂತಕ ಎಂಬ ಹೆಸರಿನಿಂದ ಖ್ಯಾತಿ ಹೊಂದಿರುವ ಡಾ. ಮಂತರ್ ಗೌಡ ಹೆಸರು ಅಂತಿಮವಾಗಿದೆ ಎಂದು ಹೈಕಮಾಂಡ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ. ಎಲ್ಲ ಸರ್ವೆಗಳಲ್ಲಿ ಮಂಥರ್ ಗೌಡ ಪರವಾದ ಪ್ರಬಲವಾದ ಅಲೆ ಕೊಡಗು ಜಿಲ್ಲೆಯಲ್ಲಿ ವ್ಯಕ್ತವಾಗಿರುವುದು ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದಿದೆ. ಅಲ್ಲದೆ ಮಂತರ್ ಗೌಡ ತನ್ನ ಚಿಂತನೆಯಿಂದ ಕೊಡಗಿನ ಹೊರ ಪ್ರದೇಶದಲ್ಲೂ ತನ್ನ ಇಮೇಜ್ ಸೃಷ್ಟಿ ಮಾಡಿರುವುದು ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿದೆ.

ಇನ್ನು ಕಾಂಗ್ರೆಸ್ ಕಾನೂನು ವಿಭಾಗದ ಮುಖ್ಯಸ್ಥರಾಗಿರುವ ವಕೀಲರಾದ ಎಎಸ್ ಪೊನ್ನಣ್ಣ ಹೆಸರು ವಿರಾಜಪೇಟೆ ಕ್ಷೇತ್ರಕ್ಕೆ ಅಂತಿಮವಾಗಿದೆ ಎಂದು ಹೈಕಮಾಂಡ್ ಮೂಲಗಳಿಂದ ತಿಳಿದುಬಂದಿದೆ. ತನ್ನ ಟ್ರಸ್ಟಿನ ಮುಖಾಂತರ ಹಲವಾರು ಜನಪರ ಕಾರ್ಯಗಳನ್ನು ನಡೆಸಿರುವ ಪೊನ್ನನ್ನ ಅವರ ಹೆಸರು ಸರ್ವೆಯಲ್ಲೂ ಉತ್ತಮ ವಾಗಿ ಮೂಡಿ ಬಂದಿರುವ ಕಾರಣ ಈ ಹೆಸರು ಅಂತಿಮವಾಗಿದೆ ಎಂದು ಹೈಕಮಾಂಡ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ಇನ್ನು ಸುಳ್ಯ ಕ್ಷೇತ್ರಕ್ಕೆ ನಂದಕುಮಾರ್ ಅವರ ಹೆಸರು ಅಂತಿಮವಾಗಿದೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಸಂಯೋಜಕರಾದ ನಂದಕುಮಾರ್ ಸುಳ್ಯದಲ್ಲಿ ಜನಪರ ಕೆಲಸಗಳ ಮೂಲಕ ಜನರ ಗಮನವನ್ನು ಸೆಳೆದಿದ್ದರು. ಅಲ್ಲದೆ ಬಹುತೇಕ ಸರ್ವೇಗಳಲ್ಲಿ ಅವರ ಹೆಸರು ಅಂತಿಮವಾಗಿದೆ ಎಂದು ತಿಳಿದುಬಂದಿದೆ. ನಂದಕುಮಾರ್ ಇಡೀ ಸುಳ್ಯ ಕ್ಷೇತ್ರದಲ್ಲಿ ಓಡಾಡಿ ಬಹಳಷ್ಟು ಗಮನ ಸೆಳೆದಿದ್ದರು.

ಈ ವಾರ ಕಾಂಗ್ರೆಸ್ಸಿನ ಪ್ರಥಮ ಪಟ್ಟಿ ಹೊರಬರಲಿದ್ದು ಅಂತಿಮವಾಗಿ ಎಲ್ಲವೂ ಬಹಿರಂಗವಾಗಲಿದೆ ಎಂದು ತಿಳಿದು ಬಂದಿದೆ.

 

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ