ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪಾರ ಭಕ್ತಿ-ಶ್ರೀಕೃಷ್ಣನನ್ನೇ ವರಿಸಿದ ಯುವತಿ!

Twitter
Facebook
LinkedIn
WhatsApp
DB 06032023 krishna

ಉತ್ತರಪ್ರದೇಶ, ಮಾ 14 : ಎಲ್‌ಎಲ್‌ಬಿ ಪದವಿ ಅಭ್ಯಸಿಸುತ್ತಿರುವ ಯುವತಿಯೊಬ್ಬಳು ಶ್ರೀ ಕೃಷ್ಣನ ಮೇಲಿನ ಭಕ್ತಿಯಿಂದ ಕೃಷ್ಣನನ್ನೇ ವಿವಾಹವಾದ ಪ್ರಸಂಗ ಉತ್ತರಪ್ರದೇಶದಲ್ಲಿ ನಡೆದಿದೆ.

ರಕ್ಷಾ ( 30) ಶ್ರೀ ಕೃಷ್ಣನನ್ನು ಮದುವೆಯಾದ ಯುವತಿ. ಕಾನೂನು ಪದವಿ ಓದುತ್ತಿರುವ ಈಕೆಗೆ ಶ್ರೀಕೃಷ್ಣನೆಂದರೆ ಅಚ್ಚುಮೆಚ್ಚು. ಕೃಷ್ಣ ದೇವರನ್ನು ಶ್ರದ್ದಾಭಕ್ತಿಯಿಂದ ಪೂಜಿಸುತ್ತಿರುವ ಆಕೆಗೆ ತನ್ನ ಭಕ್ತಿ ಸದಾಕಾಲ ಇರಬೇಕೆಂಬ ಉದ್ದೇಶದಿಂದ ಶ್ರೀಕೃಷ್ಣನನ್ನೇ ಮದುವೆಯಾಗಿದ್ದಾಳೆ. ಈ ಮದುವೆಗೆ ಉತ್ತರ ಪ್ರದೇಶದ ಔರ್ರೈಯಾ ಜಿಲ್ಲೆಯ ಜನರೂ ಆಗಮಿಸಿ ಹಾರೈಸಿದ್ದಾರೆ.

ಶ್ರೀಕೃಷ್ಣನನ್ನು ವರಿಸುವ ತನ್ನ ನಿರ್ಧಾರವನ್ನು ಆಕೆ ತಂದೆ ರಂಜಿತ್ ಸಿಂಗ್ ಸೋಲಂಕಿ ಬಳಿ ಹೇಳಿಕೊಂಡಿದ್ದಾಳೆ. ಈ ವೇಳೆ ಮಗಳ ನಿರ್ಧಾರವನ್ನು ತಂದೆಯೂ ಒಪ್ಪಿದ್ದು, ಅದ್ದೂರಿಯಾಗಿ ವಿವಾಹ ಏರ್ಪಡಿಸಿದ್ದಾರೆ. ಕೃಷ್ಣನ ಮೂರ್ತಿ ಹೊತ್ತು ಮೆರವಣಿಗೆಯಲ್ಲಿ ರಕ್ಷಾ ಪಾಲ್ಗೊಂಡಿದ್ದಾಳೆ. ಬಳಿಕ ಆಕೆಯ ಕುಟುಂಬಿಕರು ಮೂರ್ತಿಗೆ ಆರತಿ ಬೆಳಗಿದ್ದಾರೆ. ಆನಂತರ ಕೃಷ್ಣನ ಮೂರ್ತಿಯೊಂದಿಗೆ ವಧು ರಕ್ಷಾ ಸುಖಚೈನ್‌ಪುರ ಪ್ರದೇಶದಲ್ಲಿರುವ ತನ್ನ ಸಂಬಂಧಿಕರ ಮನೆಗೆ ತೆರಳಿದ್ದಾಳೆ. ಅಲ್ಲಿಂದ ಮತ್ತೆ ಮೂರ್ತಿ ಹೊತ್ತು ತವರಿಗೆ ಆಗಮಿಸಿದ್ದಾಳೆ.

ಸದ್ಯ ಆಕೆಯ ಈ ಮದುವೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೂ ಕಾರಣವಾಗಿದೆ. ಹವಲರು ಯುವತಿಗೆ ಆಶೀರ್ವದಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ