ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಡಬಿದಿರೆ :ಡೆಂಗ್ಯೂ ಜ್ವರಕ್ಕೆ ಪ್ರಥಮ ಪಿಯುಸಿ ವಿಧ್ಯಾರ್ಥಿನಿ ಸಾವು

Twitter
Facebook
LinkedIn
WhatsApp
WhatsApp Image 2023 03 14 at 10.16.22 AM 400x330 1

ಮೂಡಬಿದಿರೆ : ಶಂಕಿತ ಡೆಂಗ್ಯೂ ಜ್ವರಕ್ಕೆ ಪ್ರಥಮ ಪಿಯುಸಿ ಓದುತ್ತಿರುವ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಆಳ್ವಾಸ್‌ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದರು.

ಮಿಸ್ರಿಯಾ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು, ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್‌ ಭಂಡಾರಿ, ಸರಕಾರಿ ಆಸ್ಪತ್ತೆಗಳಲ್ಲಿ ಡೆಂಗ್ಯೂ ಸಹಿತ ಮಲೇರಿಯಾ ಪ್ರಕರಣಗಳು ದಾಖಲಾಗಿದ್ದಲ್ಲಿ ಕೂಡಲೇ ಮಾಹಿತಿ ಲಭಿಸುತ್ತದೆ. ಖಾಸಗಿ ಆಸ್ಪತ್ರೆಗಳಿಂದ ಮಲೇರಿಯಾ ಕೇಂದ್ರಕ್ಕೆ ವರದಿ ಬಂದ ಬಳಿಕವಷ್ಟೇ ನಮಗೆ ಮಾಹಿತಿ ಸಿಗಲು ಸಾಧ್ಯ ಮತ್ತು ಆ ಕುರಿತು ಸೂಕ್ತ ಸಮೀಕ್ಷೆ, ಪರಿಶೀಲನೆ ನಡೆಸಲು ಸಾಧ್ಯವಾಗುತ್ತದೆ. ಮಿಸ್ರಿಯಾ ಪ್ರಕರಣ ಇನ್ನಷ್ಟೇ ಮಲೇರಿಯಾ ಕೇಂದ್ರಕ್ಕೆ ವರದಿಯಾಗಬೇಕಿದೆ. ಇದು ಡೆಂಗ್ಯೂ ನಿಂದಾದ ಸಾವು ಎಂದು ದೃಢಪಟ್ಟಲ್ಲಿ ಮೂಡುಬಿದಿರೆ ತಾಲೂಕಿನಲ್ಲಿ ಇದೇ ಈ ಸಾಲಿನ ಮೊದಲ ಪ್ರಕರಣ. ಈ ಬಗ್ಗೆ ತಕ್ಷಣ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು