ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5 ಮತ್ತು 8 ನೇ ತರಗತಿಗೆ ಬೋರ್ಡ್ ಪರೀಕ್ಷೆ ಫಿಕ್ಸ್ ; ಹೈಕೋರ್ಟ್ ಗ್ರೀನ್ ಸಿಗ್ನಲ್

Twitter
Facebook
LinkedIn
WhatsApp
75719820

ನವದೆಹಲಿ: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ (Board exams) ನಡೆಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ (Karnataka High Court) ಬುಧವಾರ ತೀರ್ಪು ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ ಎಂದಿರುವ ಹೈಕೋರ್ಟ್ ವಿಭಾಗೀಯ ಪೀಠ, ಈ ಹಿಂದೆ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ. ಮಾರ್ಚ್ 27ರಿಂದ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ವಿಭಾಗೀಯ ಪೀಠ ಸೂಚನೆ ನೀಡಿದೆ. ಪಠ್ಯಕ್ರಮದಲ್ಲಿ ಉಲ್ಲೇಖಿಸಿರುವುದನ್ನು ಬಿಟ್ಟು ಬೇರೆ ಪ್ರಶ್ನೆಗಳನ್ನು ಕೇಳುವಂತಿಲ್ಲ, ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ ಎಂದು ಪೀಠ ನಿರ್ದೇಶನ ನೀಡಿದೆ. ಜತೆಗೆ, ಪರೀಕ್ಷೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಫಲಿತಾಂಶವನ್ನು ಶಾಲೆಗೆ ಮಾತ್ರವೇ ತಲುಪಿಸಬೇಕು ಎಂದೂ ಸೂಚಿಸಿದೆ.

5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್​ನ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಇದರ ವಿರುದ್ಧ ಶಿಕ್ಷಣ ಇಲಾಖೆ ಮೇಲ್ಮನವಿ ಸಲ್ಲಿಸಿತ್ತು. ಸುತ್ತೋಲೆ ರದ್ದುಪಡಿಸಿದ ಆದೇಶಕ್ಕೆ ತಡೆ ನೀಡುವಂತೆ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್, ಅಭಿಪ್ರಾಯ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮಂಗಳವಾರ ಸೂಚಿಸಿತ್ತು.

5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್​ನ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಇದರ ವಿರುದ್ಧ ಶಿಕ್ಷಣ ಇಲಾಖೆ ಮೇಲ್ಮನವಿ ಸಲ್ಲಿಸಿತ್ತು. ಸುತ್ತೋಲೆ ರದ್ದುಪಡಿಸಿದ ಆದೇಶಕ್ಕೆ ತಡೆ ನೀಡುವಂತೆ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್, ಅಭಿಪ್ರಾಯ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮಂಗಳವಾರ ಸೂಚಿಸಿತ್ತು.5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಹೈಕೋರ್ಟ್ ಮೊರೆ ಹೋಗಿತ್ತು. ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೈಕೋರ್ಟ್​ ಮೊರೆ ಹೋಗಿದ್ದರು. 2022-23ನೇ ಸಾಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ 2022ರ ಡಿಸೆಂಬರ್​ 12 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕ್ರಮ ಪ್ರಶ್ನಿಸಿ ರುಪ್ಸಾ ತಕರಾರು ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು ಮಧ್ಯಂತ ತಡೆ ನೀಡಲು ನಿರಾಕರಿಸಿತ್ತು. ಬಳಿಕ ರುಪ್ಸಾ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ