ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಬೇಸಿಗೆ ಮಳೆ: ಓರ್ವ ಬಲಿ

Twitter
Facebook
LinkedIn
WhatsApp
hr 171122 death 13

ಬೆಂಗಳೂರು(ಮಾ.17):  ರಾಜ್ಯದ ಕೆಲವೆಡೆ ಗುರುವಾರವೂ ಬೇಸಿಗೆ ಮಳೆಯಾಗಿದ್ದು, ಬಿಸಿಲಿನ ಹೊಡೆತಕ್ಕೆ ಸಿಲುಕಿದ್ದ 8 ಜಿಲ್ಲೆಗಳಲ್ಲಿ ವರುಣ ತಂಪೆರೆದಿದ್ದಾನೆ. ಈ ನಡುವೆ, ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನಲ್ಲಿ ಸಿಡಿಲಿಗೆ ರೈತನೊಬ್ಬ ಬಲಿಯಾಗಿದ್ದರೆ, ಕೋಲಾರದಲ್ಲಿ ಮನೆಯ ಸಜ್ಜಾ ಕುಸಿದ, ಮರ ಉರುಳಿ ಬಿದ್ದ ಘಟನೆ ವರದಿಯಾಗಿವೆ. ಅಲ್ಲದೆ, ಅಕಾಲಿಕ ಮಳೆಯಿಂದಾಗಿ ಮಾವು ಹಾಗೂ ಹುಣಸೆ ಬೆಳೆಗಾರರು ಆತಂಕಗೊಂಡಿದ್ದು, ಹೂಗಳು ಉದುರಿ ಹೋಗುವ ಭಯ ರೈತರನ್ನು ಕಾಡುತ್ತಿದೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ರಾಮನಗರ, ಹಾಸನ, ರಾಯಚೂರು, ಹಾವೇರಿ, ಧಾರವಾಡ ಜಿಲ್ಲೆಗಳ ವಿವಿಧೆಡೆ ಗುರುವಾರ ಮಳೆಯಾಗಿದೆ. ಸಿಡಿಲಬ್ಬರದ ಮಳೆಗೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಲ್ಲಿ ರೈತನೊಬ್ಬ ಬಲಿಯಾಗಿದ್ದಾನೆ. ತಡಸದ ಗೌಡ್ರ ಓಣಿ ನಿವಾಸಿ ನಿಂಗನಗೌಡ ಸಿದ್ದನಗೌಡ ಪಾಟೀಲ (63) ಮೃತ ರೈತ. ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಸಿಡಿಲು ಬಡಿದು ದುರ್ಘಟನೆ ಸಂಭವಿಸಿದೆ.

ಶ್ರೀನಿವಾಸಪುರ ಸೇರಿದಂತೆ ಕೋಲಾರ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಕೋಲಾರದ ಆರ್‌ಟಿಓ ಕಚೇರಿ ಸಮೀಪ ಬೃಹತ್‌ ಮರ ಉರುಳಿ ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇದರಿಂದಾಗಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಯಿತು ಅಲ್ಲದೆ, ನಗರದ ಕಾರಂಜಿಕಟ್ಟೆಯಲ್ಲಿ ಸುಬ್ರಮಣ್ಯ ಎಂಬುವರ ಮನೆಯ ಸಜ್ಜಾ ಮುರಿದು ಬಿದ್ದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಸ್ಥಳೀಯ ನಿವಾಸಿಗಳು ಬವಣೆ ಪಡುವಂತಾಯಿತು. ನೆರೆಯ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲವೆಡೆಯೂ ಉತ್ತಮ ಮಳೆಯಾಗಿದೆ. ಅಕಾಲಿಕ ಮಳೆಗೆ ಈ ಭಾಗದ ರೈತರು ಆತಂಕಗೊಂಡಿದ್ದು, ಮಾವು ಹಾಗೂ ಹುಣಸೆ ಹೂಗಳು ಉದುರಿ ಹೋಗುವ ಭಯ ರೈತರನ್ನು ಕಾಡುತ್ತಿದೆ.

ಇದೇ ವೇಳೆ, ರಾಯಚೂರು ಜಿಲ್ಲೆಯ ವಿವಿಧೆಡೆಯೂ ಆಲಿಕಲ್ಲು ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ಸುಬ್ರಮಣ್ಯ ಎಂಬುವರಿಗೆ ಸೇರಿದ ಎತ್ತೊಂದು ಸಿಡಿಲಿಗೆ ಬಲಿಯಾಗಿದೆ. ಅದೃಷ್ಟವಶಾತ್‌ ಸುಬ್ರಮಣ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿಯೂ ಗುರುವಾರ ಸಂಜೆಯ ವೇಳೆ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಹಾಸನ, ಧಾರವಾಡ ಜಿಲ್ಲೆಯ ಹಲವೆಡೆಯೂ ಗುರುವಾರ ಮಧ್ಯಾಹ್ನದ ನಂತರ ತುಂತುರು ಮಳೆಯಾಗಿದೆ.

ಈ ಮಧ್ಯೆ, ರೇಷ್ಮೆ ನಗರಿ ರಾಮನಗರ, ಮಾಗಡಿ, ಚನ್ನಪಟ್ಟಣಗಳಲ್ಲಿ ಮಧ್ಯಾಹ್ನದ ನಂತರ ಸುರಿದ ವರ್ಷದ ಮೊದಲ ಮಳೆ, ಇಳೆಗೆ ತಂಪನ್ನೆರೆಯಿತು. ಸುಮಾರು ಒಂದು ಗಂಟೆ ಕಾಲ ಸುರಿದ ತುಂತುರು ಮಳೆ, ಬಿಸಿಲ ಝಳದಿಂದ ಬಳಲಿದ್ದ ಜನರಿಗೆ ತಂಪಿನ ಅನುಭವ ನೀಡಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist