ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೈಂದೂರು: ದಾಖಲಾತಿ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ. ಜಪ್ತಿ

Twitter
Facebook
LinkedIn
WhatsApp
1679026965620 5

ಬೈಂದೂರು, ಮಾ 17: ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಬೈಂದೂರು ಠಾಣೆಯ ಪೊಲೀಸರು ಮಾ.16ರಂದು ಜಪ್ತಿ ಮಾಡಿದ್ದಾರೆ.

ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು ಚೆಕ್‌ಪೋಸ್ಟ್‌ನಲ್ಲಿ ಮಾ.16ರಂದು ಮಧ್ಯಾಹ್ನ 1.40ರ ಸುಮಾರಿಗೆ ವಾಹನ ತಪಾಸಣೆ ನಡೆಸುತ್ತಿದ್ದ ಎಸ್‌ಐ ನಿರಂಜನಗೌಡ ಮತ್ತು ಸಿಬ್ಬಂದಿ ಭಟ್ಕಳದಿಂದ ಬಂದ ನೋಂದಣಿ ನಂಬರ್ ಪ್ಲೇಟ್ ಇಲ್ಲದ ಕಾರನ್ನು ತಡೆದಿದ್ದಾರೆ. ಈ ವೇಳೆ ಕಾರನ್ನು ಪರಿಶೀಲಿಸಿದಾಗ ಹಿಂಬದಿ ಸೀಟಿನ ಕೆಳಗೆ ಪ್ಲಾಸ್ಟಿಕ್ ಬಂಡಲ್ ಇದ್ದು ಅದರಲ್ಲಿ ನಗದು ಕಂಡುಬಂದಿದೆ.

ಹಣದ ದಾಖಲೆ ಬಗ್ಗೆ ವಿಚಾರಣೆ ನಡೆಸಿದಾಗ ಚಾಲಕ ಯಾವುದೇ ದಾಖಲೆ ನೀಡಲು ವಿಫಲನಾಗಿದ್ದಾನೆ. ಪೊಲೀಸರು ಪರಿಶೀಲಿಸಿದಾಗ 100 ರೂಪಾಯಿ ಮುಖಬೆಲೆಯ 3000 ನೋಟುಗಳು, 200 ರೂಪಾಯಿ ಮುಖಬೆಲೆಯ 1000 ನೋಟುಗಳು ಮತ್ತು 500 ರೂಪಾಯಿ ಮುಖಬೆಲೆಯ 3000 ನೋಟುಗಳು ಪತ್ತೆಯಾಗಿವೆ. ಪತ್ತೆಯಾದ ಒಟ್ಟು ನಗದು 20 ಲಕ್ಷ ರೂ.

ಕಾರು ಚಲಾಯಿಸುತ್ತಿದ್ದ ಬೆಳ್ತಂಗಡಿ ಶಿರ್ಲಾಲು ಮಂಜಿಲಪಲ್ಕೆ ನಿವಾಸಿ ಬಶೀರ್ (42) ಎಂಬಾತನನ್ನು ವಶಕ್ಕೆ ಪಡೆದಿದ್ದು,ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 43/2023 ಕಲಂ: 98 KP ACT ರಂತೆ ಪ್ರಕರಣ ದಾಖಲಾಗಿರುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ