ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಜ್ಜನಿಂದ ಮೊಮ್ಮಗಳ ಮೇಲೆ ರೇಪ್ – ಯಾರಿಗೂ ಹೇಳ್ಬೇಡ ಎಂದು 10 ರೂ. ಕೊಟ್ಟ

Twitter
Facebook
LinkedIn
WhatsApp
4040426 5084806 10

ಲಕ್ನೋ: ವೃದ್ಧನೊಬ್ಬ ತನ್ನ 15 ವರ್ಷದ ಮೊಮ್ಮಗಳ (Grand Daughter) ಮೇಲೆ ಅತ್ಯಾಚಾರವೆಸಗಿ (Rape), ಪ್ರಕರಣದ ಬಗ್ಗೆ ಯಾರಿಗೂ ತಿಳಿಸದಂತೆ 10 ರೂ. ನೀಡಿದ ಘಟನೆ ಉತ್ತರಪ್ರದೇಶದ (Uttar Pradesh) ಗೋರಖ್‍ಪುರದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿ 60 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ತಾಯಿ ಆಡು ಮೇಯಿಸಲು ಹೋದಾಗ ಈ ಘಟನೆ ನಡೆದಿದೆ. ಬಾಲಕಿಯ ತಾಯಿ (Mother) ಜೊತೆಗೆ ಆಕೆಯ ಅಜ್ಜ, ಬಾಲಕಿ ಇಬ್ಬರು ಹೊಲಕ್ಕೆ ಬಂದಿದ್ದರು. ಈ ವೇಳೆ ಬಾಲಕಿಯ (Girl) ಅಜ್ಜ, ಸೊಸೆಯನ್ನು ಮನೆಗೆ ಕಳುಹಿಸಿದ್ದಾನೆ. ಅದಾದ ಬಳಿಕ ಕೊಡಲಿಯನ್ನು ಕೊಡುವಂತೆ ಬಾಲಕಿ ಬಳಿ ಹೇಳಿದ್ದಾನೆ. ಈ ವೇಳೆ ಯಾರೂ ಇಲ್ಲದ್ದನ್ನು ಗಮನಿಸಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಷ್ಟೇ ಅಲ್ಲದೇ ಕೃತ್ಯದ ಬಗ್ಗೆ ಯಾರಿಗೂ ತಿಳಿಸದಂತೆ ಆಕೆಗೆ 10 ರೂ. ನೀಡಿದ್ದಾನೆ. 

ಈ ವೇಳೆ ನೀರು ತರಲು ಗದ್ದೆಯ ಮೂಲಕ ಹಾದು ಹೋಗುತ್ತಿದ್ದ ವ್ಯಕ್ತಿಯೊಬ್ಬ ಘಟನೆಯನ್ನು ನೋಡಿದ್ದಾನೆ. ಅಷ್ಟೇ ಅಲ್ಲದೇ ಸ್ಥಳಕ್ಕೆ ಸ್ಥಳೀಯರನ್ನು ಕರೆದಿದ್ದು, ವೃದ್ಧನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಗುಲ್ರಿಹಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ