ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಣೆಯಾದ ಬಾಲಕಿ ಶವವಾಗಿ ಪತ್ತೆ, ಮುಗಿಲು ಮುಟ್ಟಿದ ಪೋಷಕರ ಆಕ್ರಂಧನ

Twitter
Facebook
LinkedIn
WhatsApp
ಕಾಣೆಯಾದ ಬಾಲಕಿ ಶವವಾಗಿ ಪತ್ತೆ, ಮುಗಿಲು ಮುಟ್ಟಿದ ಪೋಷಕರ ಆಕ್ರಂಧನ

ಬಾಗಲಕೋಟೆ: ಕೊಲೆಯಾಗಿ ಬಿದ್ದಿರುವ ಹನ್ನೊಂದು ವರ್ಷದ ಬಾಲಕಿ. ಮಗಳ ಕಳೆದುಕೊಂಡು ಕಣ್ಣೀರು ಹಾಕಿ ಗೋಳಾಡುತ್ತಿರುವ ತಂದೆ ತಾಯಿ. ಪಾಪಿಗಳ ಕೃತ್ಯಕ್ಕೆ ಶಾಪ ಹಾಕಿ ಆಕ್ರೋಶದ ಕಣ್ಣೀರು ಹಾಕುತ್ತಿರುವ ಸಂಬಂಧಿಕರು. ಅಂದ ಹಾಗೆ ಈ ದೃಶ್ಯ ಕಂಡುಬಂದಿದ್ದು ಜಿಲ್ಲೆಯ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದಲ್ಲಿ. ಹೌದು ಗಿರಿಸಾಗರ ಗ್ರಾಮದಲ್ಲಿ ಮನ ಮಿಡಿಯುವ ಘಟನೆ ನಡೆದು ಹೋಗಿದೆ. ಕೇವಲ ಹನ್ನೊಂದು ವರ್ಷದ ರೇಖಾ ಯಂಕಂಚಿ ಎಂಬ ಬಾಲಕಿಯನ್ನು ದುರುಳರು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ಚೀಲದಲ್ಲಿ ಹಾಕಿ ಬಾವಿಗೆ ಎಸೆದಿದ್ದಾರೆ‌. ಇಲ್ಲಿ ಕೊಲೆ ಮಾಡಿದ್ದು ಬೇರೆ ಯಾರು ಅಲ್ಲ ಬಾಲಕಿಯ ಚಿಕ್ಕಮ್ಮ ಶಂಕ್ರವ್ವ ಹಾಗೂ ಆಕೆಯ ಪ್ರಿಯಕರ ಎಂದು ಆರೋಪ ಕೇಳಿ ಬಂದಿದೆ. ಶಂಕ್ರವ್ವ ಹಾಗೂ ಆಕೆಯ ಪ್ರಿಯಕರ ಷಣ್ಮುಖ ಭಜಂತ್ರಿ ಅನೈತಿಕ ಸಂಬಂಧಕ್ಕೆ ಬಾಲಕಿ ಅಡ್ಡಿ ಎಂದು ಕಥೆಯನ್ನೆ ಮುಗಿಸಿದ್ದಾರಂತೆ ಪಾಪಿಗಳು. ಇದರಿಂದ ಮಗಳನ್ನು ಕಳೆದುಕೊಂಡ ಪೋಷಕರು ಆ ರಾಕ್ಷಸರಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಆಗ್ರಹ ಮಾಡುತ್ತಿದ್ದಾರೆ.

ಗಿರಿಸಾಗರ ಗ್ರಾಮದಲ್ಲಿ ನಡೆದ ಈ ಘಟನೆ ಎಲ್ಲರನ್ನ ಮಿಡಿಯುವಂತೆ ಮಾಡಿದೆ. ಮಾರ್ಚ್ 15 ರಂದು ಇಂತಹ ಘಟನೆ ನಡೆದಿದೆ. ಅಂದು ಬೆಳಿಗ್ಗೆ ಮಗಳು ಶಾಲೆಗೆ ಅಂತ ಹೋಗಿದ್ದವಳು ವಾಪಸ್ ಬಾರದಿದ್ದಾಗ ಎಲ್ಲ ಕಡೆ ಹುಡುಕಾಡಿದ ಪೋಷಕರು ಮಗಳು ಕಾಣೆ ಎಂದು ಮಾರ್ಚ್ 16 ರಂದು ಬೀಳಗಿ ಠಾಣೆಯಲ್ಲಿ ದೂರನ್ನು ನೀಡಿದ್ದರು. ಜೊತೆಗೆ ಶಂಕ್ರವ್ವಳ ಮೇಲೆ ಸಂಶಯ ವ್ಯಕ್ತಪಡಿಸಿದ್ದರು. ಸಂಶಯದ ಆಧಾರದ ಮೇರೆಗೆ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಎಳೆ‌ಮಗಳನ್ನು ರಾಕ್ಷಸರು ಉಸಿರುಗಟ್ಟಿಸಿ ಜೀವ ಬಲಿ ಪಡೆದಿದ್ದಕ್ಕೆ ಕುಟುಂಬಸ್ಥರು ಶಾಪ ಹಾಕುತ್ತಿದ್ದಾರೆ.

ಶಂಕ್ರವ್ವ ಯಂಕಂಚಿ ಏಳು ವರ್ಷದ ಹಿಂದೆ ರಮೇಶ್ ಎಂಬುವನನ್ನು ಮದುವೆಯಾಗಿ ಗಿರಿಸಾಗರ ಗ್ರಾಮಕ್ಕೆ ಬಂದಿದ್ದಾಳೆ. ಆದರೆ ಮುಗ್ದ ಗಂಡನನ್ನು ಹುಚ್ಚನಂತೆ ಮಾಡಿ ಗ್ರಾಮದ ಷಣ್ಮುಖ ಭಜಂತ್ರಿ ಎಂಬುವನ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಳಂತೆ. ಷಣ್ಮುಖ ಪದೆ ಪದೆ ಶಂಕ್ರವ್ವಳ‌ ಮನೆಗೆ ಬರೋದು ಹೋಗೋದು ಮಾಡುತ್ತಿದ್ದ. ಇದು ಅಕ್ಕಪಕ್ಕದಲ್ಲೆ ಮನೆ ಹೊಂದಿದ್ದ ಶಂಕ್ರವ್ವಳ ಬಾವಂದಿರು ಪತ್ನಿಯರು ಎಲ್ಲರಿಗೂ ಅಸಹ್ಯ ಹುಟ್ಟಿಸುತ್ತಿತ್ತು. ಈ ಬಗ್ಗೆ ಶಂಕ್ರವ್ವಳ ಜೊತೆ ಬಾವಂದಿರು ನಾದನಿಯರ ಜಗಳ ನಡೆಯುತ್ತಿತ್ತು. ಇನ್ನು ಇವರಿಬ್ಬರ ಕಳ್ಳ ಸಂಬಂಧವನ್ನು ನೋಡಿದ್ದ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಕುಟುಂಬಸ್ಥರು ಇದು ಕೇವಲ ಕೊಲೆಯಲ್ಲ. ಅತ್ಯಾಚಾರ ಮಾಡಿ ಕೊಲೆಗೈದಿದ್ದಾರೆ ಪಾಪಿಗಳು ಎಂದು ಆರೋಪ ಮಾಡಿದ್ದಾರೆ.

ಸದ್ಯ ಸುದ್ದಿ ತಿಳಿದ ಪೊಲೀಸರು ಶಂಕ್ರವ್ವ ಹಾಗೂ ಷಣ್ಮುಖನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಸಂಪೂರ್ಣ ತನಿಖೆ ನಂತರ ಹೆಚ್ಚಿನ ಸತ್ಯಾಸತ್ಯತೆ ಹೊರಬರಲಿದೆ. ಆದರೂ ಬಾಳಿ ಬದುಕಬೇಕಿದ್ದ ಮುಗ್ದ ಬಾಲಕಿ ಸಾವನ್ನಪ್ಪಿದ್ದು ವಿಷಾದ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist