ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಸ್ಟ್ರೇಲಿಯಾ ವಿರುದ್ಧದ ಗೆಲುವಿಗೆ ಇವರೇ ಕಾರಣ- ಹಾರ್ದಿಕ್ ಪಾಂಡ್ಯ

Twitter
Facebook
LinkedIn
WhatsApp
0maqurgg hardik pandya in presentation ceremony 625x300 04 January 23

ಬಾರ್ಡರ್- ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡ ನಂತರ ಇದೀಗ ಏಕದಿನ ಸರಣಿಯ ಮೊದಲ ಪಂದ್ಯದಲ್ಲೇ ಭಾರತ ಭರ್ಜರಿ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಇಂಡೋ- ಆಸೀಸ್ ಪ್ರಥಮ ಏಕದಿನದಲ್ಲಿ ಟೀಮ್ ಇಂಡಿಯ 5 ವಿಕೆಟ್​ಗಳಿಂದ ಗೆದ್ದು ಬೀಗಿತು.

ಈ ಗೆಲುವಿನ ಮೂಲಕ ಹಾರ್ದಿಕ್ ಪಡೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ನಾಯಕ ಹಾರ್ದಿಕ್ ಪಾಂಡ್ಯ ಗೆಲುವಿಗೆ ಕಾರಣರಾದವರನ್ನು ಹಾಡಿಹೊಗಳಿದ್ದಾರೆ.

ಈ ಪಂದ್ಯದಲ್ಲಿ ನಾವು ಎರಡು ಬಾರಿ ಒತ್ತಡಕ್ಕೆ ಸಿಲುಕಿದೆವು. ಈ ಸಂದರ್ಭದಲ್ಲಿ ನಾವು ಮುನ್ನುಗ್ಗದೆ ಸಮಯಕ್ಕಾಗಿ ಕಾದು ಪರಿಸ್ಥಿತಿಯನ್ನು ಉತ್ತಮವಾಗಿ ಅರ್ಥಹಿಸಿದೆವು. ಒಂದು ಸಲ ಲಯಕಂಡುಕೊಂಡರೆ ನಾವು ಟಾಪ್​ನಲ್ಲಿ ಇರುತ್ತೇವೆ. ನಮ್ಮ ತಂಡ ಅದನ್ನು ಮಾಡಿತು ಎಂದು ಹೇಳಿದ್ದಾರೆ.

ನಮ್ಮ ತಂಡದ ಫೀಲ್ಡಿಂಗ್ ಇಂದು ಅದ್ಭುತವಾಗಿತ್ತು. ಇದರ ಬಗ್ಗೆ ನನಗೆ ಹೆಮ್ಮೆ ಇದೆ. ಅನೇಕ ಅವಕಾಶಗಳನ್ನು ನಾವು ಮಾಡಿಕೊಟ್ಟೆವು ಅದನ್ನು ಫೀಲ್ಡರ್​ಗಳು ಚೆನ್ನಾಗಿ ಉಪಯೋಗಿಸಿಕೊಂಡಿದ್ದಾರೆ. ಅದರಲ್ಲೂ ರವೀಂದ್ರ ಜಡೇಜಾ ಮತ್ತು ಶುಭ್​ಮನ್ ಗಿಲ್ ಹಿಡಿದ ಕ್ಯಾಚ್ ಅತ್ಯುತ್ತಮವಾಗಿತ್ತು – ಹಾರ್ದಿಕ್ ಪಾಂಡ್ಯ.

ಜಡೇಜಾ ಬಗ್ಗೆ ಮಾತನಾಡುವುದಾದರೆ, ಅವರು ತಮ್ಮ ಘನತೆಗೆ ತಕ್ಕಂತೆ ಆಡಿದ್ದಾರೆ. ಏಕದಿನ ಕ್ರಿಕೆಟ್​ನಿಂದ ವಿರಾಮ ಪಡೆದುಕೊಂಡು ಬಂದು ಅವರು ಪಂದ್ಯವನ್ನು ಉತ್ತಮವಾಗಿ ಫಿನಿಶ್ ಮಾಡಿದರು. ಮುಖ್ಯವಾಗಿ ಕೆಎಲ್ ರಾಹುಲ್​ಗೆ ಅತ್ಯುತ್ತಮ ಸಾಥ್​ ನೀಡಿದರು. ಇವರಿಬ್ಬರ ಜೊತೆಯಾಟ ಭರ್ಜರಿ ಆಗಿತ್ತು. ಇವರಿಬ್ಬರ ಬ್ಯಾಟಿಂಗ್ ನಮಗೆ ಆತ್ಮವಿಶ್ವಾಸ ತುಂಬಿದೆ – ಹಾರ್ದಿಕ್ ಪಾಂಡ್ಯ.

ಇಲ್ಲಿ ತುಂಬಾ ಬಿಸಿಲಿತ್ತು. ಆದರೂ ನಾನು ಬೌಲಿಂಗ್ ಮಾಡುವಾಗ ಎಂಜಾಯ್ ಮಾಡಿದೆ. ಬ್ಯಾಟಿಂಗ್ ಮಾಡುವಾಗ ಕೂಡ ಖುಷಿ ಆಯಿತು. ಇದೊಂದು ನಮಗೆ ಸಿಕ್ಕ ಅತ್ಯುತ್ತಮ ಗೆಲುವು. ತಂಡ ನೀಡಿದ ಪ್ರದರ್ಶನದ ಬಗ್ಗೆ ಹೆಮ್ಮೆ ಇದೆ ಎಂಬುದು ಹಾರ್ದಿಕ್ ಪಾಂಡ್ಯ ಮಾತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 35.4 ಓವರ್​​ಗಳಲ್ಲಿ ಕೇವಲ 188 ರನ್​ಗೆ ಆಲೌಟ್ ಆಯಿತು. ಮಿಚೆಲ್ ಮಾರ್ಶ್ 65 ಎಸೆತಗಳಲ್ಲಿ 81 ರನ್ ಸಿಡಿಸಿದ್ದು ಬಿಟ್ಟರೆ ಉಳಿದವರು ವೈಫಲ್ಯ ಅನುಭವಿಸಿದರು. ಭಾರತ ಪರ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಲಾ 3 ವಿಕೆಟ್ ಪಡೆದರೆ ಜಡೇಜಾ 2 ವಿಕೆಟ್ ಕಿತ್ತರು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ನಂತರ ಕೆಎಲ್ ರಾಹುಲ್ (ಅಜೇಯ 75) ಹಾಗೂ ರವೀಂದ್ರ ಜಡೇಜಾ (ಅಜೇಯ 45) ಅವರ ಶತಕದ ಜೊತೆಯಾಟದ ನೆರವಿನಿಂದ 39.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಬಾರಿಸಿ 5 ವಿಕೆಟ್​ಗಳ ಜಯ ಸಾಧಿಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist