ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಐಪಿಎಲ್​ ವೇದಿಕೆಯಲ್ಲಿ ಮೋಡಿ ಮಾಡಿದ ರಶ್ಮಿಕಾ ಮಂದಣ್ಣ, ತಮನ್ನ

Twitter
Facebook
LinkedIn
WhatsApp
Rashmika Mandanna 12

ಅಹಮ್ಮದಾಬಾದ್(ಮಾ.31): ವಿಶ್ವದ ಅತೀ ದೊಡ್ಡ ಚುಟುಕು ಕ್ರಿಕೆಟ್ ಹಬ್ಬ ಐಪಿಎಲ್ 2023ಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಅಹಮ್ಮದಾಬಾದ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮ ಅಭಿಮಾನಿಗಳನ್ನು ಕುಣಿಸಿತು. ಆರಂಭದಲ್ಲಿ ಬಾಲಿವುಡ್ ಪ್ಲೇ ಬ್ಯಾಕ್ ಸಿಂಗ್ ಅರ್ಜಿತ್ ಹಾಡಿನೊಂದಿಗೆ  ಒಪನಿಂಗ್ ಸೆರೆಮನಿ ಆರಂಭಗೊಂಡಿತು. ಒಂದರ ಮೇಲೊಂದರಂತೆ ಜನಪ್ರಿಯ ಹಾಡುಗಳು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು. ಪಠಾಣ್ ಚಿತ್ರದ ಹಾಡು ಝೂಮೇ ಜೋ ಹಾಡು, ಬಳಿಕ ಕೇಸರಿಯಾ, ಕಬೀರಾ ಹಾಡು ನೆರೆದಿದ್ದ ಅಭಿಮಾನಿಗಳ ಮನ ತಣಿಸಿತು.

ವೇದಿಕೆಯಲ್ಲಿ ಅರ್ಜಿತ್ ಒಂದೊಂದೆ ಹಾಡಿನ ಮೂಲಕ ಜನರನ್ನು ರಂಜಿಸುತ್ತಿದ್ದರೆ, ಇತ್ತ ಕ್ರೀಡಾಂಗಣದಲ್ಲಿ ಅಭಿಮಾನಿಗಳ ಚಪ್ಪಾಳೆ, ಶಿಳ್ಳೆ ಜೋರಾಯಿತು. ಅಂತಿಮ ಹಾಡಿನಲ್ಲಿ ಅರ್ಜಿತ್ ಸಿಂಗ್, ತೆರೆದ ವಾಹನದ ಮೂಲಕ ಕ್ರೀಡಾಂಗಣ ಸುತ್ತು ಹಾಕಿದರು. ಹಾಡಿನ ಮೂಲಕ ಅಭಿಮಾನಿಗಳತ್ತ ಕೈಬೀಸುತ್ತಾ  ಅರ್ಜಿತ್ ಸಿಂಗ್ ಎಲ್ಲರನ್ನು ರಂಜಿಸಿದರು.

ಅರ್ಜಿತ್ ಸಿಂಗ್ ಬಳಿಕ ನಟಿ ತಮನ್ನ ಭಾಟಿಯಾ ಅದ್ಭುತ ಡ್ಯಾನ್ಸ್ ಮನಸೂರೆಗೊಂಡಿತು. ಇನ್ನು ನಟಿ ರಶ್ಮಿಕಾ ಮಂದಣ್ಣ ಪುಷ್ಪಾ ಚಿತ್ರದ ಸಾಮಿ ಸಾಮಿ ಡ್ಯಾನ್ಸ್‌ನೊಂಂದಿಗೆ ಮತ್ತೆ ಅಭಿಮಾನಿಗಳಿಗಳ ಮೋಡಿ ಮಾಡಿದರು. ಅದ್ಧೂರಿ ಕಾರ್ಯಕ್ರಮದ ಮೂಲಕ ದೇಶದಲ್ಲಿ ಕ್ರಿಕೆಟ್ ಕಿಚ್ಚು ಆರಂಭಗೊಂಂಡಿತು.

ಕಾರ್ಯಕ್ರಮದಲ್ಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ರಾಜೀವ್ ಶುಕ್ಲಾ ಸೇರಿದಂತೆ ಬಿಸಿಸಿಐ ಪದಾಧಿಕಾರಿಗಳು ಪಾಲ್ಗೊಂಡಿದ್ದರು. 

ಐಪಿಎಲ್ ಟೂರ್ನಿ 50ಕ್ಕೂ ಹೆಚ್ಚು ದಿನಗಳ ಕಾಲ 10 ತಂಡಗಳ ನಡುವೆ ಟ್ರೋಫಿಗಾಗಿ ಕಾದಾಟ ನಡೆಯಲಿದೆ. 16ನೇ ಆವೃತ್ತಿಯು ಹಲವು ಹೊಸತುಗಳೊಂದಿಗೆ ಪ್ರೇಕ್ಷಕರ ಮುಂದೆ ಬರಲಿದೆ. ‘ಇಂಪ್ಯಾಕ್ಟ್’ ಆಟಗಾರ ನಿಯಮ, ಟಾಸ್‌ ಬಳಿಕ ಆಡುವ ಹನ್ನೊಂದರ ಬಳಗದ ನಿರ್ಧಾರ, ವೈಡ್‌, ನೋಬಾಲ್‌ಗೂ ಡಿಆರ್‌ಎಸ್‌ ಬಳಕೆ ಆಯ್ಕೆ ಹೀಗೆ ಕೆಲ ಹೊಸ ನಿಯಮಗಳು ರೋಚಕತೆ ಹೆಚ್ಚಿಸಲಿವೆ. ಜೊತೆಗೆ ಈ ಬಾರಿ ಟೀವಿ ವರ್ಸಸ್‌ ಡಿಜಿಟಲ್‌ ‘ಯುದ್ಧಕ್ಕೂ’ ಐಪಿಎಲ್‌ ಸಾಕ್ಷಿಯಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist