ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತಲೆ ಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಮತ್ತು ಸಹಚರರು ರಾಜಸ್ಥಾನದಲ್ಲಿ ಅರೆಸ್ಟ್

Twitter
Facebook
LinkedIn
WhatsApp
mcms 1

ರಾಮನಗರ (ಏ.5): ಜಾನು​ವಾ​ರು​ಗ​ಳನ್ನು ಸಾಗಿ​ಸುವ ವೇಳೆ ಇದ್ರೀಸ್‌ ಪಾಷ ಎಂಬ ವ್ಯಕ್ತಿ ಅನು​ಮಾ​ನ​ಸ್ಪ​ದ​ವಾಗಿ ಸಾವ​ನ್ನ​ಪ್ಪಿದ ಪ್ರಕ​ರ​ಣಕ್ಕೆ ಸಂಬಂಧಿ​ಸಿ​ದಂತೆ ಕೊಲೆ ಆರೋಪದಲ್ಲಿ ಸಾತನೂರು ಠಾಣೆ ಪೊಲೀಸರಿಂದ  ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ‌ಕೆರೆಹಳ್ಳಿ ಸೇರಿ ಐವರನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ.  ಮಾರ್ಚ್ 31 ರಂದು ಕ್ಯಾಂಟರ್ ತಡೆದು ಜಾನುವಾರು ರಕ್ಷಣೆ ಮಾಡಿದ್ದ ಪುನೀತ್ ಮತ್ತು ತಂಡದವರು. ಆದರೆ ಕ್ಯಾಂಟರ್ ನಲ್ಲಿ ಇದ್ದ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ. ಏಪ್ರಿಲ್ 1 ರಂದು ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರಿನಲ್ಲಿ  ಮೃತದೇಹ ಪತ್ತೆಯಾಗಿತ್ತು. ಮಂಡ್ಯದ ಗುತ್ತಲು ನಿವಾಸಿ ಇದ್ರಿಸ್ ಪಾಷ(35) ಮೃತದೇಹವಾಗಿತ್ತು. ಈ ಸಂಬಂಧ ಮೃತನ ಸಹೋದರ ಸಾತನೂರು ‌ಠಾಣೆಗೆ ದೂರು ನೀಡಿದ್ದ. ಐಪಿಸಿ ಸೆಕ್ಷನ್ 341, 504, 506, 324, 302, 34 ರ ಅಡಿ ಕೇಸ್ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಕಳೆದ ಐದು ದಿನದಿಂದ  ಪುನೀತ್ ಮತ್ತು ಆತನ ತಂಡ ತಲೆ ಮರೆಸಿಕೊಂಡಿತ್ತು. ಪುನೀತ್‌ ಕೆರೆ​ಹಳ್ಳಿ ಮತ್ತು ಆತನ ಸಹ​ಚ​ರರ ಪತ್ತೆ​ಗಾಗಿ ನಾಲ್ಕು ತಂಡ​ಗ​ಳನ್ನು ರಚನೆ ಮಾಡ​ಲಾ​ಗಿತ್ತು. ಇದೀಗ ರಾಜಸ್ಥಾನದಲ್ಲಿ ಕೊನೆಗೂ ಲಾಕ್ ಆಗಿದ್ದಾರೆ.

ಕುಟುಂಬಸ್ಥರಿಂದ ಕೊಲೆ ಆರೋಪ:
ಮಳವಳ್ಳಿಯಿಂದ ಕಳೆದ ಶುಕ್ರವಾರ ರಾತ್ರಿ ಪಕ್ಕದ ತಮಿಳುನಾಡಿನಲ್ಲಿ ನಡೆಯುತ್ತಿದ್ದ ದನಗಳ ಸಂತೆಯಲ್ಲಿ 16 ಹಸುಗಳ ಮಾರಾಟಕ್ಕೆ ಇರ್ಗಿಷ್‌ ಪಾಷಾ ತನ್ನ ಸ್ನೇಹಿತನೊಂದಿಗೆ ವಾಹನದಲ್ಲಿ ತೆರ​ಳು​ತ್ತಿ​ದ್ದ ವೇಳೆ ರಾಷ್ಟ್ರ ರಕ್ಷಣಾ ಪಡೆಯ ಪುನೀತ್‌ ಕೆರೆಹಳ್ಳಿ ಹಾಗೂ ಆತನ ಸಂಗಡಿಗರು ವಾಹನವನ್ನು ಅಡ್ಡಗಟ್ಟಿ ಇರ್ಗೀಷ್‌ ಪಾಷಾ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆಂದು ಕುಟುಂಬ​ಸ್ಥರು ಆರೋ​ಪಿ​ಸಿದ್ದಾರೆ.

ಡಿಕೆಶಿ ಆಕ್ರೋಶ: ಹಸುಗಳನ್ನು ಸಾಕುವುದಕ್ಕೆಂದು ರಶೀದಿ ಸಮೇತವಾಗಿ ಲಾರಿಗಳಲ್ಲಿ ಹಸುಗಳನ್ನು ತುಂಬಿಕೊಂಡು ಹೋಗುವ ರೈತನನ್ನು ಕನಕಪುರದಲ್ಲಿ ಹತ್ಯೆ ಮಾಡಲಾಗಿದೆ. ಸರ್ಕಾರದಿಂದ ಕೂಡಲೇ 25 ಲಕ್ಷ ರೂ. ಪರಿಹಾರ ಕೊಟ್ಟು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದ್ದರು. ಕನಕಪುರದಲ್ಲಿ ಹತ್ಯೆಯಾಗಿದೆ. ಪೊಲೀಸರ ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದು ನಾನು ಈ ಬಗ್ಗೆ ಯಾವುದೇ ಹೇಳಿಕೆ ಕೊಟ್ಟಿರಲಿಲ್ಲ. ಆದರೆ, ಕೆಲವರು ರಾಜ್ಯದಲ್ಲಿ ಮಾರಲ್ ಪೊಲೀಸಿಂಗ್‌ಗೆ ಪ್ರೋತ್ಸಾಹ ಮಾಡುತ್ತಿದ್ದಾರೆ. ಇದರಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist