ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

6,6,6,6,6..ರಿಂಕು ಸಿಂಗ್ ಸಿಕ್ಸರ್ ಆರ್ಭಟ; KKRಗೆ 3 ವಿಕೆಟ್‌ಗಳ ರೋಚಕ ಜಯ

Twitter
Facebook
LinkedIn
WhatsApp
Rinku Singh 1

ಅಹಮದಾಬಾದ್(ಏ.09): ವೆಂಕಟೇಶ್ ಅಯ್ಯರ್‌ ಸಿಡಿಲಬ್ಬರದ ಅರ್ಧಶತಕ ಹಾಗೂ ರಿಂಕು ಸಿಂಗ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಕೋಲ್ಕತಾ ನೈಟ್‌ ರೈಡರ್ಸ್ ತಂಡವು ಅವಿಸ್ಮರಣೀಯ ಗೆಲುವು ದಾಖಲಿಸಿದೆ. ಕೊನೆಯ ಓವರ್‌ನಲ್ಲಿ 5 ಸಿಕ್ಸರ್ ಸಿಡಿಸಿದ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರೋಚಕ ಗೆಲುವು ತಂದಿತ್ತರು. ಕೊನೆಯ ಓವರ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್‌ ಗೆಲ್ಲಲು 29 ರನ್‌ಗಳ ಅಗತ್ಯವಿತ್ತು. ರಿಂಕು ಸಿಂಗ್ ಕೊನೆಯ ಓವರ್‌ನಲ್ಲಿ ತಾವೆದುರಿಸಿದ 5 ಎಸೆತಗಳಲ್ಲೂ ಸಿಕ್ಸರ್‌ ಸಿಡಿಸುವ ಮೂಲಕ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು. ರಿಂಕು ಸಿಂಗ್ ಕೆಕೆಆರ್ ಪಾಲಿಗೆ ಹೀರೋ ಎನಿಸಿಕೊಂಡರೆ, ಎಡಗೈ ವೇಗಿ ಯಶ್ ದಯಾಳ್ ಗುಜರಾತ್ ಪಾಲಿಗೆ ವಿಲನ್ ಆಗಿ ಪರಿಣಮಿಸಿದರು.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್‌ ನೀಡಿದ್ದ 205 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಕೋಲ್ಕತಾ ನೈಟ್ ರೈಡರ್ಸ್‌ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಮೂರನೇ ಓವರ್‌ನ ಮೂರನೇ ಎಸೆತದಲ್ಲೇ ರೆಹಮನುಲ್ಲಾ ಗುರ್ಬಾಜ್‌ 15 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮನ್ದೀಪ್ ಸಿಂಗ್ ಬದಲಿಗೆ ಸ್ಥಾನ ಪಡೆದಿದ್ದ ಎನ್ ಜಗದೀಶನ್ವ ಬ್ಯಾಟಿಂಗ್ ಕೇವಲ 6 ರನ್‌ಗೆ ಸೀಮಿತವಾಯಿತು.

ಅಯ್ಯರ್-ರಾಣಾ ಶತಕದ ಜತೆಯಾಟ: ಬೃಹತ್ ಮೊತ್ತ ಬೆನ್ನತ್ತಿ ಕೇವಲ 28 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಕೆಕೆಆರ್ ತಂಡಕ್ಕೆ ಮೂರನೇ ವಿಕೆಟ್‌ಗೆ ಇಂಪ್ಯಾಕ್ಟ್‌ ಪ್ಲೇಯರ್ ವೆಂಕಟೇಶ್ ಅಯ್ಯರ್ ಹಾಗೂ ನಾಯಕ ನಿತೀಶ್ ರಾಣಾ ಸ್ಪೋಟಕ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

ಕೇವಲ 55 ಎಸೆತಗಳಲ್ಲಿ ಈ ಜೋಡಿ 100 ರನ್ ಜತೆಯಾಟವಾಡಿತು. ಸಮಯೋಚಿತ ಬ್ಯಾಟಿಂಗ್ ನಡೆಸಿದ ನಾಯಕ ನಿತೀಶ್ ರಾಣಾ 29 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 45 ರನ್ ಬಾರಿಸಿ ಅಲ್ಜೆರಿ ಜೋಸೆಫ್‌ಗೆ ವಿಕೆಟ್‌ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ವೆಂಕಟೇಶ್ ಅಯ್ಯರ್, ಕೆಕೆಆರ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಅಯ್ಯರ್ ಕೇವಲ 40 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 83 ರನ್ ಬಾರಿಸಿ ಅಲ್ಜೆರಿ ಜೋಸೆಫ್‌ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಕೆಕೆಆರ್ ತಂಡವು ನಾಟಕೀಯ ಕುಸಿತ ಕಂಡಿತು.

ರಶೀದ್ ಖಾನ್‌ ಹ್ಯಾಟ್ರಿಕ್ ಹೋರಾಟ ವ್ಯರ್ಥ: ವೆಂಕಟೇಶ್ ಅಯ್ಯರ್ ಅಬ್ಬರಿಸುತ್ತಿದ್ದಾಗ ಗುಜರಾತ್ ಗೆಲುವಿನ ಆಸೆ ಕಮರಿತ್ತು. ಆದರೆ 17ನೇ ಓವರ್‌ನ ವೇಳೆಗೆ ಕೆಕೆಆರ್ ಗೆಲ್ಲಲು ಕೊನೆಯ 4 ಓವರ್‌ಗಳಲ್ಲಿ 50 ರನ್‌ಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ ದಾಳಿಗಿಳಿದ ರಶೀದ್‌ ಖಾನ್ ಮೊದಲ ಮೂರು ಎಸೆತಗಳಲ್ಲಿ ಆಂಡ್ರೆ ರಸೆಲ್, ಸುನಿಲ್ ನರೈನ್ ಹಾಗೂ ಶಾರ್ದೂಲ್ ಠಾಕೂರ್ ವಿಕೆಟ್ ಕಬಳಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಹ್ಯಾಟ್ರಿಕ್ ವಿಕೆಟ್ ಕಬಳಿಸಿ, ಪಂದ್ಯದ ದಿಕ್ಕನ್ನೇ ಬದಲಿಸುವಂತೆ ಮಾಡಿದರು. ಆದರೆ ಕೊನೆಯ ಓವರ್‌ನಲ್ಲಿ ರಿಂಕು ಸಿಂಗ್‌, ಕೆಕೆಆರ್ ಪರ ಸತತ 5 ಸಿಕ್ಸರ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ