ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರ್ಜುನ್ ಜನ್ಯ ನಿರ್ದೇಶನದ ಸಿನಿಮಾಗೆ ಕಿರುತೆರೆ ನಟಿ ಕೌಸ್ತುಭ ಮಣಿ ನಾಯಕಿ!

Twitter
Facebook
LinkedIn
WhatsApp
Kaustubha Mani 1

ದಭಿರುಚಿ ಚಿತ್ರಗಳ ನಿರ್ಮಾಪಕರಾದ ರಮೇಶ್ ರೆಡ್ಡಿ ನಿರ್ಮಾಣದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಪ್ರಥಮ ನಿರ್ದೇಶನದಲ್ಲಿ ಮೂಡಿ ಬರಲಿರುವ ‘45’ ಸಿನಿಮಾಗೆ ನಾಯಕಿ ಯಾರಾಗಲಿದ್ದಾರೆ ಎನ್ನುವ ಕುತೂಹಲವಿತ್ತು. ಹಲವು ನಾಯಕಿಯರ ಹೆಸರೂ ಕೇಳಿ ಬಂದಿದ್ದವು. ಅದರಲ್ಲೂ ಸೀರಿಯಲ್ ನಟಿ ಕೌಸ್ತುಭ ಮಣಿ (Kaustubha Mani) ನಾಯಕಿ ಎಂದು ಹೇಳಲಾಗಿತ್ತು. ಇದೀಗ ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಿದೆ.

kaustubha mani 99228376

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ಕೌಸ್ತುಭ ಮಣಿ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಚಿತ್ರತಂಡವೇ ಘೋಷಿಸಿದೆ. ಕಲರ್ಸ್ ಕನ್ನಡದ ‘ನನ್ನರಸಿ ರಾಧೆ’, ಜೀ ತೆಲುಗಿನ ಪ್ರಸಿದ್ದ ಧಾರಾವಾಹಿ ಹಾಗೂ ಕನ್ನಡದ ರಾಮಾಚಾರಿ 2.0 ಚಿತ್ರದಲ್ಲಿ ಕೌಸ್ತುಭ ಮಣಿ ನಟಿಸಿದ್ದಾರೆ.

ಮ್ಯೂಸಿಕಲ್ ಕಂಪೋಸರ್ ಅರ್ಜುನ್ ಜನ್ಯ (Arjun Janya) ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ಶಿವಣ್ಣ (Shivanna), ಉಪ್ಪಿ, ರಾಜ್ ಬಿ ಶೆಟ್ಟಿಗೆ(Raj B Shetty) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. `45′ ಚಿತ್ರದಲ್ಲಿ ಅನೇಕ ವಿಶೇಷತೆಗಳನ್ನು ಹೊಂದಿದೆ ಎಂದು ಈಗಾಗಲೇ ನಿರ್ದೇಶಕರು ಕೆಲ ಮಾಹಿತಿ ನೀಡಿದ್ದಾರೆ.

Kaustubha Mani 2

ಶಿವರಾಜ್‌ಕುಮಾರ್ (Shivarajkumar) ನಟನೆಯ `45′ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳಲಿದೆ. ಈ ಸಿನಿಮಾಗೆ ರಮೇಶ್ ರೆಡ್ಡಿ ನಿರ್ಮಾಣ ಮಾಡ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭ ಆಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಸಿನಿಮಾ ತೆರೆಕಾಣಿಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಕೂಡ ವಹಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ