ಕೃತಿ ಶೆಟ್ಟಿಗೆ ಸಿನಿಮಾ ಒಪ್ಪಿಕೊಳ್ಳದಂತೆ ಒತ್ತಡ ಹೇರುತ್ತಿದ್ದಾರೆ ತಾಯಿ? ಕೋಟಿ ಕೊಟ್ಟರೂ ಬರಲ್ಲ ಎಂದ ನಟಿ
ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಬೆಂಗಳೂರಿನ ಯಶವಂತಪುರದ ಸತ್ವ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಅಪಘಾತವಾಗಿ ಮಹಿಳೆ ಕೆಳಗೆ ಬಿದ್ದಿದ್ದು ಖಾಸಗಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಯಶವಂತರಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಮತ್ತೊಂದೆಡೆ ಹೊಸಕೋಟೆ ನಗರದ ಎಂವಿಜೆ ಕಾಲೇಜು ಬಳಿ ಸರಣಿ ಸಪಘಾತ ಸಂಭವಿಸಿದೆ. ಘಟನೆಯಲ್ಲಿ ಟಿಟಿ ವಾಹನ, ಬೈಕ್, ಕ್ಯಾಂಟರ್ ನಡುವೆ ಡಿಕ್ಕಿಯಾಗಿದ್ದು ಮೂವರಿಗೆ ಗಾಯಗಳಾಗಿವೆ.
ಬೆಳ್ಳಂ ಬೆಳಗ್ಗೆ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಎಂವಿಜೆ ಕಾಲೇಜು ಬಳಿ ಸರಣಿ ಅಪಘಾತವಾಗಿದೆ. ಕ್ಯಾಂಟರ್ ಚಾಲಕ ದಿಡೀರ್ ಬ್ರೇಕ್ ಹಾಕಿದ್ದು, ಬ್ರೇಕ್ ಹಾಕುತ್ತಿದ್ದಂತೆ ಹಿಂದೆ ಬರುತ್ತಿದ್ದ ಟಿಟಿ ವಾಹನ ಹಾಗೂ ಪಲ್ಸರ್ ಬೈಕ್ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಟಿ ಹಾಗೂ ಬೈಕ್ ನುಜುಗುಜ್ಜಾಗಿದೆ. ಬೈಕ್ ಸವಾರರಿಗೆ ಹಾಗೂ ಕ್ಯಾಂಟರ್ ಚಾಲಕನಿಗೆ ಗಾಯಗಳಾಗಿದ್ದು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.