ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ : ವಾಮದಪದವಿನಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಕೂಲಿ ಕಾರ್ಮಿಕ ಸಾವು!

Twitter
Facebook
LinkedIn
WhatsApp
Untitled

ಬಂಟ್ವಾಳ : ಕಾಲು ಜಾರಿ ಕೆರೆಗೆ ಬಿದ್ದು ಕೂಲಿ ಕಾರ್ಮಿಕನೊರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಾಮದಪದವಿನಲ್ಲಿ ನಡೆದಿದೆ.

ವಾಮದಪದವು ಅಜ್ಜಿಬೆಟ್ಟು ಗ್ರಾಮದ ಪಾಲೆದಡಿ ನಿವಾಸಿ ವಾಸು ಪೂಜಾರಿ (52) ಮೃತಪಟ್ಟ ವ್ಯಕ್ತಿ. ಪಾಲೆದಡಿ ದಿ.ರಘಪತಿ ಭಟ್ ಅವರ ಮನೆಯ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಬಿದ್ದ ಕೆಲವೇ ಸಮಯದಲ್ಲಿ ಇವರ ಜೊತೆ ಕೆಲಸ ಮಾಡುತ್ತಿದ್ದ ಕೆಲಸಗಾರರು ಮನೆಯವರಿಗೆ ತಿಳಿಸಿ,ಸ್ಥಳೀಯ ಯುವ ನಾಯಕ ದಿನೇಶ್ ಶೆಟ್ಟಿ ದಂಬೆದಾರ್ ಅವರ ತಂಡ ಕೆರೆಯಲ್ಲಿ ಹುಡುಕಿ ಇವರನ್ನು ಮೇಲಕ್ಕೆತ್ತಿ ಬದುಕಿಸುವ ಕೆಲಸಕ್ಕೆ ಪ್ರಯತ್ನ ಮಾಡಿದೆ. ಇವರ ಪ್ರಯತ್ನ ಫಲಿಸದೆ ಆದಾಗಲೇ ಮೃತರಾಗಿದ್ದಾರೆ ಎಂದು ಹೇಳಲಾಗಿದೆ. ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ