ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಾಂಗ್ಲಾದಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಾಟ – ಮಹಿಳೆ ಅರೆಸ್ಟ್

Twitter
Facebook
LinkedIn
WhatsApp
Shri Narendra Modi 7

ಕೋಲ್ಕತ್ತಾ: ಕೇವಲ 2 ಸಾವಿರ ರೂ. ಹಣದ ಆಸೆಗಾಗಿ ಸುಮಾರು 2 ಕೆಜಿಗೂ ಅಧಿಕ ತೂಕ ಹೊಂದಿದ್ದ ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ಬಾಂಗ್ಲಾದೇಶದಿಂದ (Bangladesh) ಭಾರತಕ್ಕೆ (India) ಸಾಗಿಸಲು ಯತ್ನಿಸಿದ ಮಹಿಳೆಯೊಬ್ಬರನ್ನು ಪಶ್ಚಿಮ ಬಂಗಾಳದ (West Bengal) ಉತ್ತರ 24 ಪರಗಣ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ (BSF) ಗುರುವಾರ ಬಂಧಿಸಿದೆ.

ಮಾಣಿಕಾ ಧರ್ (34) ಬಂಧನಕ್ಕೊಳಗಾದ ಮಹಿಳೆ. ಈಕೆ ಬಾಂಗ್ಲಾದೇಶದ ಚಿತ್ತಗಾಂಗ್ ಜಿಲ್ಲೆಗೆ ಸೇರಿದವಳಾಗಿದ್ದು, ಅಕ್ರಮವಾಗಿ ಭಾರತಕ್ಕೆ ಚಿನ್ನದ ಗಟ್ಟಿ ಸಾಗಾಟ ಮಾಡುತ್ತಿದ್ದ ವೇಳೆ ಬಿಎಸ್‌ಎಫ್ ಕೈಗೆ ಸಿಕ್ಕಿಬಿದ್ದಿದ್ದಾಳೆ. ಆಕೆಯಿಂದ ವಶಪಡಿಸಿಕೊಂಡ ಚಿನ್ನ ಸುಮಾರು 2 ಕೆಜಿ ತೂಕವಿದ್ದು, ಅಂದಾಜು 1.29 ಕೋಟಿ ರೂ. ಮೌಲ್ಯದ್ದಾಗಿದೆ. 

ಮಹಿಳೆಯೊಬ್ಬರು ಚಿನ್ನದೊಂದಿಗೆ ಗಡಿ ದಾಟಲು ಹೊರಟಿರುವ ಬಗ್ಗೆ ಭಾರತೀಯ ಚೆಕ್‌ಪೋಸ್ಟ್‌ನಲ್ಲಿ ನಿಯೋಜಿಸಲಾಗಿದ್ದ ಮಹಿಳಾ ಸಿಬ್ಬಂದಿಯೊಬ್ಬರಿಗೆ ಮಾಹಿತಿ ಲಭಿಸಿತ್ತು. ಕೂಡಲೇ ಸಿಬ್ಬಂದಿಗಳು ತಪಾಸಣೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಮಣಿಕಾ ಧರ್ ತನ್ನ ಸೊಂಟದಲ್ಲಿ 27 ವಿವಿಧ ರೀತಿಯ ಚಿನ್ನದ ಗಟ್ಟಿಗಳನ್ನು ಬಟ್ಟೆಯಲ್ಲಿ ಸುತ್ತಿಕೊಂಡು ಕಳ್ಳಸಾಗಾಣಿಕೆ (Smuggling) ಮಾಡುತ್ತಿರುವುದು ಪತ್ತೆಯಾಗಿದೆ.

ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ, ಪಶ್ಚಿಮ ಬಂಗಾಳದ ಬರಾಸತ್‌ನಲ್ಲಿರುವ ಅಪರಿಚಿತ ವ್ಯಕ್ತಿಗೆ ಚಿನ್ನದ ಗಟ್ಟಿಗಳನ್ನು ತಲುಪಿಸಲು ಸೂಚಿಸಲಾಗಿದೆ. ಈ ರೀತಿಯಾದ ಕಳ್ಳಸಾಗಾಣಿಕೆ ಇದೇ ಮೊದಲ ಬಾರಿಯಾಗಿದ್ದು, ಇದನ್ನು ತಲುಪಿಸಿದರೆ ತನಗೆ 2 ಸಾವಿರ ರೂ. ದೊರೆಯುತ್ತದೆ ಎಂದು ಒಪ್ಪಿಕೊಂಡಿದ್ದಾಳೆ. 

ಆರೋಪಿ ಮಹಿಳೆಯನ್ನು ಹಾಗೂ ವಶಪಡಿಸಿಕೊಂಡ ಚಿನ್ನದ ಗಟ್ಟಿಗಳನ್ನು ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಲುವಾಗಿ ಪೆಟ್ರಾಪೋಲ್‌ಗೆ ಒಪ್ಪಿಸಲಾಗಿದೆ. ಅಲ್ಲದೇ ಬಿಎಸ್‌ಎಫ್ ಯೋಧರ ಈ ಕಾರ್ಯವನ್ನು ದಕ್ಷಿಣ ಬಂಗಾಳ ಗಡಿ ಭಾಗದ ವಕ್ತಾರರು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist