ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಲಿಸುತ್ತಿರುವ ಬಸ್‌ನಲ್ಲಿ ಯುವತಿಗೆ ಇರಿದು ತನ್ನ ಕತ್ತು ಕುಯ್ದುಕೊಂಡ ಯುವಕ!

Twitter
Facebook
LinkedIn
WhatsApp
WhatsApp Image 2023 05 05 at 4.33.31 PM

ಮಲಪ್ಪುರಂ: ಯುವತಿಗೆ ಇರಿದ ಯುವಕನೋರ್ವ ಬಳಿಕ ತನ್ನ ಕತ್ತನ್ನು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಘಾತಕಾರಿ ಘಟನೆ ಕೇರಳದ ಮಲಪ್ಪುರಂನ ತಿರುರಂಗಡಿ ಎಂಬಲ್ಲಿ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಕೇರಳ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ನಲ್ಲಿ ಈ ಘಟನೆ ನಡೆದಿದೆ. ಈ ಬಸ್‌ ಕೇರಳದ ಮುನ್ನಾರ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿತ್ತು. ಕೃತ್ಯವೆಸಗಿದ ಯುವಕನನ್ನು 25 ವರ್ಷದ ಸನಿಲ್ ಎಂದು ಗುರುತಿಸಲಾಗಿದ್ದು, ಈತ ವಯನಾಡ್‌ ಮೂಲದವನಾಗಿದ್ದು, ಗೂಡ್ಲುರ್‌ ಮೂಲದ ಸೀತಾ ಎಂಬಾಕೆಗೆ ಚಾಕುವಿನಿಂದ ಇರಿದಿದ್ದಾನೆ.

ಈ ಇಬ್ಬರೂ ಹಿಂದಿನಿಂದಲೂ ಪರಿಚಯಸ್ಥರಾಗಿದ್ದಾರೆ. ಇನ್ನು ಇವರಿಬ್ಬರು ಬೇರೆ ಬೇರೆ ಕಡೆಗಳಿಂದ ಬಸ್ ಏರಿದ್ದಾರೆ. ಹುಡುಗ ಇಡಪಲ್‌ನಿಂದ (Edapal) ಬಸ್ ಹತ್ತಿದ್ದರೆ ಹುಡುಗಿ ಅಂಗಮಲೈನಿಂದ (Angamaly) ಬಸ್ ಏರಿದ್ದಾಳೆ. ಮೊದಲಿಗೆ ಇಬ್ಬರು ಬಸ್‌ನಲ್ಲಿ ಮಧ್ಯದ ಸೀಟ್‌ನಲ್ಲಿ ಜೊತೆಯಲ್ಲೇ ಕುಳಿತಿದ್ದರು. ಆದರೆ ಇಬ್ಬರ ಮಧ್ಯೆ ಜಗಳ ಶುರುವಾಗಿದ್ದು, ಕೊಟ್ಟಕ್ಕಲ್ (Kottakkall) ಬಳಿ ಬಸ್ ತಲುಪಿದಾಗ ಇಬ್ಬರೂ ಇಬ್ಬರೂ ಬಸ್‌ನ ಹಿಂಭಾಗದ ಸೀಟಿಗೆ ಶಿಫ್ಟ್ ಆಗಿದ್ದಾರೆ ಎಂದು ಬಸ್‌ನ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ನಂತರ ಬಸ್‌ನ ಲೈಟ್ ಆಫ್ ಆದ ನಂತರ ಈ ಚೂರಿ ಇರಿತ ಪ್ರಕರಣ ನಡೆದಿದೆ. ಹುಡುಗಿಗೆ ಒಂದಕ್ಕಿಂತ ಹೆಚ್ಚು ಬಾರಿ ಎದೆಗೆ ಇರಿದ ಯುವಕ ನಂತರ ತನ್ನ ಕತ್ತನ್ನು ಅದೇ ಚಾಕುವಿನಿಂದ ಕುಯ್ದುಕೊಂಡಿದ್ದಾನೆ. ಇದಾದ ಬಳಿಕ ಚಾಕನ್ನು ಬಸ್‌ನಿಂದ ಹೊರಗೆ ಎಸೆಯಲಾಗಿದೆ. ಕೂಡಲೇ ಬಸ್‌ನ ಸಿಬ್ಬಂದಿ ಯುವತಿ ಹಾಗೂ ಯುವಕ ಇಬ್ಬರನ್ನು ತಿರುರಂಗಡಿ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಯುವಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ರಾತ್ರಿಯೇ ಕೋಯಿಕೋಡ್‌ನ ಮೆಡಿಕಲ್ ಕಾಲೇಜು (Kozhikode Medical College Hospital) ಆಸ್ಪತ್ರೆಗೆ ದಾಖಲಿಸಲಾಗಿದೆ. ಸನಿಲ್ ಕೊಟ್ಟಾಯಂನಲ್ಲಿ ಹೊಟೇಲ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ