ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್ ತನ್ನ ಶರ್ಟ್ ಮೇಲೆ ದೋನಿಯ ಆಟೋಗ್ರಾಫ್ ಹಾಕಿಸಿಕೊಂಡ ಕ್ಷಣ!

Twitter
Facebook
LinkedIn
WhatsApp
Canva Student Font 33

ಐಪಿಎಲ್ 2023 ರಲ್ಲಿ ಭಾನುವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ CSK vs KKR) ನಡುವಣ ಪಂದ್ಯ ಕುತೂಹಲ ಕೆರಳಿಸಿತ್ತು. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಸಂಪೂರ್ಣ ಭರ್ತಿ ಆಗಿ ಸಿಎಸ್​ಕೆ ಅಭಿಮಾನಿಗಳು ಎಂಬುದಕ್ಕಿಂತ ಎಂಎಸ್ ಧೋನಿ (MS Dhoni) ಫ್ಯಾನ್ಸ್ ತುಂಬಿದ್ದರು. ಆದರೆ, ಚೆನ್ನೈ ಈ ಪಂದ್ಯದಲ್ಲಿ ಸೋಲು ಕಂಡಿತು. ಕೆಕೆಆರ್ 6 ವಿಕೆಟ್​ಗಳ ಜಯ ಸಾಧಿಸಿತು. ಪಂದ್ಯ ಮುಗಿದ ಬಳಿಕ ಅನೇಕ ವಿಶೇಷ ಘಟನೆಗಳು ನಡೆದಿವೆ. ಚೆಪಾಕ್​ನಲ್ಲಿ ಇದು ಸಿಎಸ್​ಕೆಯ ಕೊನೆಯ ಲೀಗ್ ಪಂದ್ಯ ಆಗಿದ್ದರಿಂದ ಧೋನಿ ಸೇರಿದಂತೆ ಸಿಎಸ್​ಕೆಯ ಎಲ್ಲ ಪ್ಲೇಯರ್ಸ್ ಇಡೀ ಮೈದಾನ ಸುತ್ತು ಹಾಕಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದರು. ಇದರ ನಡುವೆ ಲೆಜೆಂಡ್ ಕ್ರಿಕೆಟಿಗ ಸುನಿಲ್ ಗವಾಸ್ಕರ್ (Sunil Gavaskar) ಅವರು ಧೋನಿಯ ಆಟೋಗ್ರಾಫ್​ಗೆ ಓಡೋಡಿ ಬಂದರು.

ಹೌದು, ಐಪಿಎಲ್ 2023 ರಲ್ಲಿ ಇಡೀ ಕ್ರಿಕೆಟ್ ಜಗತ್ತೇ ಹೆಮ್ಮೆ ಪಡುವಂತಹ ಘಟನೆ ಸಂಭವಿಸಿತು. ಭಾರತೀಯ ಕ್ರಿಕೆಟ್ ಲೋಕಕ್ಕೆ ಅಪಾರ ಕೊಡುಗೆ ಸಲ್ಲಿಸಿ ಲೆಜೆಂಡರಿ ಎನಿಸಿಕೊಂಡಿರುವ ಸುನಿಲ್ ಗವಾಸ್ಕರ್ ಅವರು ಮಹೇಂದ್ರ ಸಿಂಗ್ ಧೋನಿ ಅವರ ಆಟೋಗ್ರಾಫ್ ಕೇಳಿದರು. ಅದುಕೂಡ ಅವರು ಧರಿಸಿಕೊಂಡಿದ್ದ ಶರ್ಟ್ ಮೇಲೆ. ಇದಕ್ಕೆ ಒಪ್ಪಿದ ಧೋನಿ ಗವಾಸ್ಕರ್ ಅವರ ಶರ್ಟ್ ಮೇಲೆ ತನ್ನ ಹಸ್ತಾಕ್ಷರ ಹಾಕಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇಲ್ಲಿದೆ ನೋಡಿ ಆ ವಿಡಿಯೋ.

ಈ ಬಗ್ಗೆ ಮಾತನಾಡಿದ ಗವಾಸ್ಕರ್, ”ಧೋನಿಯನ್ನು ಪ್ರೀತಿ ಮಾಡದಿರುವವರು ಯಾರಿದ್ದಾರೆ ಹೇಳಿ?. ಅನೇಕ ವರ್ಷಗಳಿಂದ ಧೋನಿ ಭಾರತೀಯ ಕ್ರಿಕೆಟ್​ಗೆ ನೀಡಿರುವ ಕೊಡುಗೆ ಅದ್ಭುತ. ಇವರಿಗಿಂತ ಉತ್ತಮ ರೋಲ್ ಮಾಡೆಲ್ ಇನ್ನೊಬ್ಬರು ಬೇಕೇ?. ಅನೇಕ ಯುವಕರು ಧೋನಿಯನ್ನು ನೋಡಿ ಕಲಿಯುತ್ತಿದ್ದಾರೆ. ಧನ್ಯವಾದ ನಾನು ಅವರ ಆಟೋಗ್ರಾಫ್ ಪಡೆದಿದ್ದೇನೆ. ಇದನ್ನು ನಾನು ನನ್ನ ಬಳಿಯೇ ಇಟ್ಟುಕೊಳ್ಳುತ್ತೇನೆ,” ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ಎಂಎಸ್ ಧೋನಿ ಅವರಿಗೆ ಇದು ಕೊನೆಯ ಐಪಿಎಲ್ ಸೀಸನ್ ಎಂದು ಹೇಳಲಾಗುತ್ತಿದೆ. ಈ ಸೀಸನ್ ಬಳಿಕ ಧೋನಿ ಕ್ರಿಕೆಟ್ ಲೋಕದಿಂದ ದೂರವಾಗಲಿದ್ದಾರಂತೆ. ಸದ್ಯ ಚೆನ್ನೈ ಆಡಿರುವ 13 ಪಂದ್ಯಗಳಲ್ಲಿ 7 ಗೆಲುವು, 5 ಸೋಲು ಕಂಡು 15 ಅಂಕ ಸಂಪಾದಿಸಿ ದ್ವಿತೀಯ ಸ್ಥಾನದಲ್ಲಿದೆ. ಸಿಎಸ್​ಕೆ ಇನ್ನೂ ಪ್ಲೇ ಆಫ್​ಗೆ ಲಗ್ಗೆಯಿಟ್ಟಿಲ್ಲ. ಎಲ್ಲಾದರು ಪ್ಲೇ ಆಫ್ ಪ್ರವೇಶಿಸಲು ವಿಫಲವಾದರೆ ಭಾನುವಾರ ನಡೆದ ಪಂದ್ಯ ಚೆಪಾಕ್​ನಲ್ಲಿ ಕೊನೆಯ ಮ್ಯಾಚ್ ಆಗಲಿದೆ. ಹೀಗಾಗಿ ಧೋನಿ ಸೇರದಂತೆ ಸಿಎಸ್​ಕೆ ಎಲ್ಲ ಆಟಗಾರರು ಪಂದ್ಯದ ಬಳಿಕ ಮೈದಾನಕ್ಕೆ ಬಂದಿದ್ದ ಪ್ರೇಕ್ಷಕರಿಗೆ ವಿಶೇಷವಾಗಿ ಧನ್ಯವಾದ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist