ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಘಾತಕಾರಿ ಘಟನೆ: ಕಣ್ಮುಂದೆ ಬೆಂಕಿ ಹಚ್ಚಿಕೊಂಡ ಅಕ್ಕನ ರಕ್ಷಿಸದೇ ವೀಡಿಯೋ ಮಾಡ್ತಾ ನಿಂತ ತಮ್ಮ!

Twitter
Facebook
LinkedIn
WhatsApp
WhatsApp Image 2023 05 15 at 8.03.37 PM

ಶಜಹಾನ್‌ಪುರ: ಕಣ್ಮುಂದೆಯೇ ಸಹೋದರಿ ಬೆಂಕಿ ಹಚ್ಚಿಕೊಂಡು ಒದ್ದಾಡುತ್ತಿದ್ದರೂ ಆಕೆಯ ಸಹೋದರ ಆಕೆಯನ್ನು ರಕ್ಷಿಸಲು ಮುಂದಾಗದೇ ವೀಡಿಯೋ ಮಾಡುತ್ತಾ ನಿಂತಿದ್ದಂತಹ ಆಘಾತಕಾರಿ ಘಟನೆ ಉತ್ತರಪ್ರದೇಶದ ಶಜಹಾನ್‌ಪುರದಲ್ಲಿ ಬೆಳಕಿಗೆ ಬಂದಿದೆ. ಈ ದೃಶ್ಯಾವಳಿ ಅಲ್ಲೇ ಇದ್ದ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸರೋಜಾ ಯಾದವ್ (Saroja Yadav) ಹೀಗೆ ಸಹೋದರನ ಕಣ್ಮುಂದೆ ಬೆಂಕಿ ಹಚ್ಚಿಕೊಂಡ ಮಹಿಳೆ. ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿರುವ ವೀಡಿಯೋದಲ್ಲಿ ನೇರಳೆ ಬಣ್ಣದ ಚೂಡಿಧಾರ್ ಧರಿಸಿದ್ದ ಮಹಿಳೆ ತನ್ನ ಮನೆಯ ಆವರಣದಲ್ಲಿ ನಿಂತಿದ್ದು, ಮೊದಲೇ ಮೈಗೆ ಗ್ಯಾಸೋಲಿನ್ ಸುರಿದುಕೊಂಡಿದ್ದ ಆಕೆ ತನ್ನ ಮೈಗೆ ತಾನೇ ಬೆಂಕಿ ಹಚ್ಚಿಕೊಂಡಿದ್ದಾಳೆ. ಆದರೆ ಅದಕ್ಕಿಂತ ವಿಪರ್ಯಾಸ ಎಂದರೆ ಈ ವೇಳೆ ಅಲ್ಲಿದ್ದ ಆಕೆಯ ಸ್ವಂತ ಸಹೋದರ ಸಂಜೀವ್ ಯಾದವ್‌ ಆಕೆಯನ್ನು ರಕ್ಷಿಸಲು ಮುಂದಾಗದೇ ಮೊಬೈಲ್‌ ತೆಗೆದುಕೊಂಡು ವೀಡಿಯೋ ಮಾಡಿದ್ದು, ಹಾಗಂತ ಈತನೇನು ಸಣ್ಣ ಹುಡುಗನಲ್ಲ 26 ವರ್ಷದ ತರುಣ.

ಇದಕ್ಕೂ ಮೊದಲು ಸರೋಜಾಳ ಪೋಷಕರಾದ ಸುಂದರ್‌ಲಾಲ್ ಯಾದವ್ (Sundarlal) ಮತ್ತು ಊರ್ಮಿಳಾ (Urmila) ಅವರಿಗೆ ನೆರೆಮನೆಯ ಪವನ್ ಗುಪ್ತಾ ಮತ್ತು ಸುಮನ್ ಗುಪ್ತಾ ಅವರೊಂದಿಗೆ ದೊಡ್ಡ ಜಗಳವಾಗಿತ್ತು. ಈ ಮಧ್ಯೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನೆರೆಮನೆಯ ಪವನ್ ಗುಪ್ತಾ ಪತ್ನಿ ಪ್ರತೀಕ್ಷಾ ಗುಪ್ತಾ ಅವರು, ಗೆಲುವು ಸಾಧಿಸಿ ಸಮುದಾಯದಲ್ಲಿ ತಮ್ಮ ಸ್ಥಾನಮಾನವನ್ನು ಹೆಚ್ಚಿಸಿಕೊಂಡಿದ್ದರು. ಪವನ್ ಗುಪ್ತಾ (Pavan Gupta) ಹೆಂಡತಿಯ ರಾಜಕೀಯ ಅಧಿಕಾರವನ್ನು ಬಳಸಿಕೊಂಡು ಆಕೆಯ ಕುಟುಂಬಕ್ಕೆ ನಿರಂತರ ಕಿರುಕುಳ ನೀಡುತ್ತಾ ಬಂದಿದ್ದ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಪತ್ನಿ ಚುನಾವಣೆಯಲ್ಲಿ ಗೆದ್ದ ಬಳಿಕ ಸರೋಜಾ ಕುಟುಂಬಕ್ಕೆ ಪವನ್‌ಗುಪ್ತಾನಿಂದ ಕಿರುಕುಳ ಹೆಚ್ಚಾಗಿತ್ತು ಎನ್ನಲಾಗಿದೆ.

ಈ ಗಲಾಟೆಯಲ್ಲಿ ಸರೋಜಾಳ ಪೋಷಕರಾದ ಸುಂದರ್‌ಲಾಲ್ ಯಾದವ್ (Sundarlal Yadav) ಮತ್ತು ಊರ್ಮಿಳಾ ಅವರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಇದರಿಂದ ಧೃತಿಗೆಟ್ಟ ಸರೋಜಾ ಈ ಅನಾಹುತಕಾರಿ ನಿರ್ಧಾರ ಕೈಗೊಂಡಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಬೆಂಕಿ ಹಚ್ಚಿಕೊಂಡ ಸರೋಜಾ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist