ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾಪತ್ತೆಯಾಗಿದ್ದ ಮಕ್ಕಳ ಕೇಸ್ ಗೆ ಬಿಗ್ ಟ್ವಿಸ್ಟ್; ಅಪ್ರಾಪ್ತರಿಬ್ಬರ ಪ್ರೇಮಕ್ಕೆ ಜೊತೆಯಾದ ಸ್ನೇಹಿತರು - ಇಲ್ಲಿದೆ ಫುಲ್ ಡೀಟೈಲ್ಸ್

Twitter
Facebook
LinkedIn
WhatsApp
Sira Missing Case

ಹಾಸನ: ತುಮಕೂರು ಜಿಲ್ಲೆಯ ಶಿರಾ (Sira) ತಾಲೂಕಿನ ನಾಲ್ವರು ಮಕ್ಕಳು ಪೋಷಕರಿಗೆ ಹೇಳದೆ ಕೇಳದೆ ಮನೆಬಿಟ್ಟು ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿಂದ ಹಾಸನಕ್ಕೆ (Hassan) ಹೋಗಿದ್ದ ಅಪ್ರಾಪ್ತ ಮಕ್ಕಳು ಬಸ್​ ನಿಲ್ದಾಣದಲ್ಲಿ ಪೊಲೀಸರ ಕಣ್ಣಿಗೆ ಬಿದ್ದಿದ್ದಾರೆ. ವಿಚಾರಣೆ ನಡೆಸಿದಾಗ ಹೊರಬಿತ್ತು ಇಬ್ಬರ ಪ್ರೇಮ್ ಕಹಾನಿ. ಈ ಬಗ್ಗೆ ವರದಿ ಇಲ್ಲಿದೆ ನೋಡಿ.

ಬೆಂಗಳೂರಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ಅಪ್ರಾಪ್ತ ಹಾಗೂ ಹೈಸ್ಕೂಲ್ ವ್ಯಾಸಾಂಗ ಮಾಡುತ್ತಿರುವ ಬಾಲಕಿ ನಡುವೆ ಪ್ರೀತಿ ಪ್ರೇಮ. ಹುಟ್ಟುಹಬ್ಬ ಆಚರಣೆ ಹಿನ್ನೆಲೆ ತನ್ನ ಪ್ರಿಯತಮೆ ಮತ್ತು ಅವರ ಮೂವರು ಸ್ನೇಹಿತರಿಗೆ ಬೆಂಗಳೂರಿಗೆ ಆಗಮಿಸುವಂತೆ ಆಹ್ವಾನ ನೀಡಿದ್ದಾನೆ. ಅದರಂತೆ ಮೇ 20ರಂದು ಹೇಳದೆ ಕೇಳದೆ ಮನೆಬಿಟ್ಟು ಬೆಂಗಳೂರಿಗೆ ಆಗಮಿಸಿದ್ದಾರೆ. ಇತ್ತ ನಮ್ಮ ಮಕ್ಕಳು ಕಾಣಿಸುತ್ತಿಲ್ಲ ಎಂದು ಪೋಷಕರು ಪಟ್ನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಮಿಸ್ಸಿಂಗ್ ಕೇಸ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಇತ್ತ, ಶಿರಾದ ಚಿಕ್ಕಬಾಣಾವರದಿಂದ ತನ್ನ ಸ್ನೇಹಿತರೊಂದಿಗೆ ಬೆಂಗಳೂರಿಗೆ ನಿನ್ನೆ ಬೆಳಗ್ಗೆ ಆಗಮಿಸಿದ ಬಾಲಕಿ ಪ್ರಿಯಕರನೊಂದಿಗೆ ಇರುತ್ತಾಳೆ. ನಂತರ ಐವರು ಸೇರಿಕೊಂಡು ಮಾಡಿದ್ದ ಧರ್ಮಸ್ಥಳಕ್ಕೆ ಹೋಗುವ ಪ್ಲಾನ್ ಫ್ಲಾಪ್ ಆಗುತ್ತದೆ. ಹೀಗಾಗಿ ರಾತ್ರಿಯೇ ಹಾಸನಕ್ಕೆ ಹೋಗುತ್ತಾರೆ. ಅಲ್ಲಿ ಬಸ್​ ನಿಲ್ದಾಣದಲ್ಲಿ ರಾತ್ರಿ ಕಳೆದು ಬೆಳಗ್ಗೆ ಆಶ್ರಯ ಪಡೆಯಲು ಗೌರಿಕೊಪ್ಪಲು ಬಡಾವಣೆಯಲ್ಲಿ ರೂಮ್ ಹುಡುಕಾಡಲು ಆರಂಭಿಸಿದ್ದಾರೆ.

ಅಪ್ರಾಪ್ತ ಮಕ್ಕಳು ರೂಮ್​ಗಾಗಿ ಯಾಕೆ ಹುಡುಕಾಡುತ್ತಿದ್ದಾರೆ ಎಂದು ಅನುಮಾನಗೊಂಡ ಸ್ಥಳೀಯರು ವಿಚಾರಿಸಲು ಮುಂದಾಗಿದ್ದಾರೆ. ಅಷ್ಟರಲ್ಲಾಗಲೇ ಮಕ್ಕಳು ಆಟೋ ಹತ್ತಿ ಹೋಗುತ್ತಾರೆ. ಈ ವಿಚಾರವನ್ನು ಕೂಡಲೇ ಪೊಲೀಸರಿಗೆ ತಿಳಿಸುತ್ತಾರೆ. ಎಚ್ಚೆತ್ತ ಪೊಲೀಸರು ಕಂಟ್ರೋಲ್​ ರೂಮ್​ಗೆ ಮಾಹಿತಿ ನೀಡಿ ಹುಡುಕಾಟ ಆರಂಭಿಸುತ್ತಾರೆ. ಈ ವೇಳೆ ಹಾಸನ ನಗರದ ಹೊಸ ಬಸ್​ ನಿಲ್ದಾಣದಲ್ಲಿ ಮಕ್ಕಳು ಪತ್ತೆಯಾಗಿದ್ದಾರೆ.

ಪೊಲೀಸರು ವಿಚಾರಣೆ ನಡೆಸಿದಾಗ ಮಕ್ಕಳು ಶಿರಾದಿಂದ ತಪ್ಪಿಸಿ ಬಂದಿರುವುದಾಗಿ ಬಾಯಿಬಿಟ್ಟಿದ್ದಾರೆ. ಕೂಡಲೇ ಹಾಸನ ಪೊಲೀಸರು ಪಟ್ನಾಯಕನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಹಾಸನಕ್ಕೆ ಆಗಮಿಸಿದ ಪೊಲೀಸರು ಮಕ್ಕಳನ್ನು ವಶಕ್ಕೆ ಪಡೆದು ಶಿರಾಕ್ಕೆ ಕರೆದುಕೊಂಡು ಹೋಗಿದ್ದು, ಸಂಜೆ ಸುಮಾರು 7 ಗಂಟೆ ಹೊತ್ತಿಗೆ ತಲುಪಲಿದ್ದಾರೆ. ಪ್ರೀತಿಸುತ್ತಿರುವ ಮಕ್ಕಳು ಅಪ್ರಾಪ್ತರಾಗಿರುವುದರಿಂದ ಪೋಕ್ಸೋ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist