ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಕ್ಕಿ ನಂಬರ್​ ಕೊಠಡಿ ಪಡೆದುಕೊಂಡ ಡಿಕೆ ಶಿವಕುಮಾರ್!

Twitter
Facebook
LinkedIn
WhatsApp
AA1bxrgd 5

ಬೆಂಗಳೂರು:  ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ (DK Shivakumar) ಹಾಗೂ ಸಚಿವರಾದ ಡಾ.ಜಿ. ಪರಮೇಶ್ವರ್ ಹಾಗೂ ರಾಮಲಿಂಗರೆಡ್ಡಿ ಅವರಿಗೆ ಕೊಠಡಿ ಹಂಚಿಕೆ ಮಾಡಲಾಗಿದೆ.  ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರವೀಂದ್ರ.ಕೆ ಅವರು ಮೂವರಿಗೂ ವಿಧಾನಸಭೆಯ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದು, ಡಿಕೆ ಶಿವಕುಮಾರ್ ಕೇಳಿದಂತೆ ಅವರಿಗೆ 335, 336, 337, 337A ಸಂಖ್ಯೆಯ ಕೊಠಡಿಯನ್ನು ನೀಡಲಾಗಿದೆ. ಇನ್ನು ಪರಮೇಶ್ವರ್​ಗೆ 327-327ಎ ಸಂಖ್ಯೆಯ ಕೊಠಡಿ ನೀಡಿದ್ದರೆ, ರಾಮಲಿಂಗರೆಡ್ಡಿ ಅವರಿಗೆ 329-329ಎ ಕೊಠಡಿ ನೀಡಲಾಗಿದೆ. ಜ್ಯೋತಿಷಿ ಆರಾಧ್ಯ ಹೇಳಿದ್ದ ಲಕ್ಕಿ ನಂಬರ್ ಕೊಠಡಿ ಸಂಖ್ಯೆಯನ್ನೇ ಪಡೆದುಕೊಳ್ಳುವಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ.

335, 336, 337, ಸಂಖ್ಯೆ ಕೊಠಡಿಯನ್ನು ತೆಗೆದುಕೊಳ್ಳುವಂತೆ ಜ್ಯೋತಿಷಿ ಬಿಬಿ ಆರಾಧ್ಯ ಅವರು ಡಿಕೆ ಶಿವಕುಮಾರ್​ಗೆ ಸಲಹೆ ನೀಡಿದ್ದರು. ಅಲ್ಲದೇ ಸಿದ್ದರಾಮಯ್ಯ ಹಾಲಿ ವಾಸ್ತವ್ಯ ಹೂಡಿರುವ ಶಿವಾನಂದ ಸರ್ಕಲ್ ಬಳಿ ಇರುವ ಸರ್ಕಾರಿ ನಿವಾಸ ಆಯ್ಕೆ ಮಾಡಿಕೊಳ್ಳುವಂತೆಯೂ ಆರಾಧ್ಯ ಅವರು ಡಿಕೆ ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದಾರೆ. ಈಗ ವಿಧಾನಸಭೆಯಲ್ಲಿ ಲಕ್ಕಿ ನಂಬರ್ ಕೊಠಡಿ ಸಿಕ್ಕಿದೆ. ಆದ್ರೆ, ನಿವಾಸ ಹಂಚಿಕೆ ಇನ್ನೂ ಆಗಿಲ್ಲ.

ಜ್ಯೋತಿಷಿ ಬಿಬಿ ಆರಾಧ್ಯ ಸಲಹೆಯಂತೆ ಡಿಕೆ ಶಿವಕುಮಾರ್ ಅವರು ಗುರುವಾರ (ಮೇ 25) ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ಡಿಕೆ ತಮ್ಮ ಕೊಠಡಿ ಸಂಖ್ಯೆ 336ರಲ್ಲಿ ಪೂಜೆ ನೆರವೇರಿಸಲಿದ್ದಾರೆ. ಹೀಗಾಗಿ ಕೊಠಡಿಗೆ ಸುಣ್ಣ-ಬಣ್ಣ ಬಳಿಯುವ ಕಾರ್ಯ ನಡೆದಿದೆ.

ಇನ್ನು ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿಬಿ ಆರಾಧ್ಯ, ಎರಡು ವರ್ಷಗಳ ಬಳಿಕ ಎಂಟು ವರ್ಷಗಳ ಕಾಲ ಡಿಕೆ ಶಿವಕುಮಾರ್ ಸಿಎಂ ಆಗಿರುತ್ತಾರೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದು, ಅವರಿಗೆ ಇದೇ ಸಂಖ್ಯೆ ಕೊಠಡಿ ತೆಗೆದುಕೊಳ್ಳುವಂತೆ ಹೇಳಿದ್ದೆ. ಅಲ್ಲದೇ ಸಿದ್ದರಾಮಯ್ಯನವರ ವಾಸವಿರುವ ನಿವಾಸವನ್ನು ತೆಗೆದುಕೊಳ್ಳುವಂತೆ ಹೇಳಿದ್ದೇನೆ ಎಂದರು.

ಡಿಕೆ ಶಿವಕುಮಾರ್ ಅವರು ಹೆಚ್ಚು ದೈವ ಭಕ್ತರಾಗಿದ್ದು,  ಯಾವುದೇ ಒಂದು ಶುಭ ಕಾರ್ಯ ಮಾಡಬೇಕಾದರೆ ಜ್ಯೋತಿಷಿ, ಸ್ವಾಮೀಜಿಗಳನ್ನು ಕೇಳುತ್ತಾರೆ. ಇದೀಗ ವಿಧಾನಸಭೆಯಲ್ಲಿ ಕೊಠಡಿ ಆಯ್ಕೆ ಮಾಡಿಕೊಳ್ಳುವುದಕ್ಕೂ ಜ್ಯೋತಿಷ್ಯರ ಮೊರೆ ಹೋಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ