ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ

Twitter
Facebook
LinkedIn
WhatsApp
Aamir Khans daughter Ira Khan shares picture in a yellow and black bikini 3 1

ಕಂಬಳ (Kambala) ಮತ್ತು ಜಲ್ಲಿಕಟ್ಟುಗಳಂತಹ ಸಾಂಪ್ರದಾಯಿಕ ಕ್ರೀಡೆಗಳಿಗೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಹಸಿರು ನಿಶಾನೆ ನೀಡಿದ್ದು, ಕಂಬಳ ಮತ್ತು ಜಲ್ಲಿಕಟ್ಟು ನಡೆಸಬಹುದು ಎಂದು ಹೇಳಿದೆ. ಈಗಾಗಲೇ ಕಂಬಳದಲ್ಲಿ ತಂತ್ರಜ್ಞಾನದ ಪರಿಚಯದೊಂದಿಗೆ ಕ್ರೀಡೆಯ ಆಧುನೀಕರಣಕ್ಕೆ ವೇದಿಕೆ ಸಜ್ಜಾಗಿದೆ ಮತ್ತು ಮುಂಬರುವ ನವೆಂಬರ್‌ನಿಂದ ಮಹಿಳೆಯರು ಕೂಡ ಈ ಕಂಬಳದಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಇತ್ತೀಚೆಗೆ, ಕರ್ನಾಟಕ, ತಮಿಳುನಾಡು ಮತ್ತು ಮಹಾರಾಷ್ಟ್ರವು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ, 1960 ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ, ಎತ್ತಿನಗಾಡಿ ಓಟದ ಜೊತೆಗೆ ಗೂಳಿ ಪಳಗಿಸುವ ಕ್ರೀಡೆಗಳಾದ ಜಲ್ಲಿಕಟ್ಟು ಮತ್ತು ಕಂಬಳಕ್ಕೆ ಅವಕಾಶ ನೀಡಿತು.

ಕರಾವಳಿ ಜಿಲ್ಲೆಯ ಕಂಬಳ ಅಕಾಡೆಮಿಯಿಂದ ಮಹಿಳೆಯರಿಗೆ ಕ್ರೀಡೆಯಲ್ಲಿ ತರಬೇತಿ ನೀಡಲು ಸಜ್ಜಾಗಿದೆ. ಈಗಾಗಲೇ ಈ ಪ್ರಯತ್ನವನ್ನು ಕರಾವಳಿ ಜಿಲ್ಲೆಯ ಕಂಬಳ ಅಕಾಡೆಮಿ ಮಾಡುತ್ತಿದೆ, ಮಹಿಳೆಯರು ಕೂಡ ಕೋಣಗಳನ್ನು ಓಡಿಸಬಹುದು ಎಂದು ಕರಾವಳಿ ಜಿಲ್ಲೆಯ ಕಂಬಳ ಅಕಾಡೆಮಿ ತಿಳಿಸಿದೆ.

ಈಗಾಗಲೇ ಮಾಡಿರುವ ಸಿದ್ಧತೆಗಳು ಸಫಲಗೊಂಡರೆ ಮಹಿಳೆಯರು ಕೂಡ ಕಂಬಳದಲ್ಲಿ ಭಾಗವಹಿಸಬಹುದು. ಈಗಾಗಲೇ ಮಹಿಳೆಯರು ಕರವಾಳಿ ಭಾಗದಲ್ಲಿ ರಂಗಭೂಮಿ ಯಕ್ಷಗಾನ, ಇನ್ನೂ ಅನೇಕ ಕ್ಷೇತ್ರಗಳಲ್ಲಿ ಭಾಗವಹಿಸುತ್ತಿದ್ದಾರೆ, ಇದೀಗ ಕಂಬಳ ಒಂದು ಪ್ರಮುಖವಾಗಿದೆ.

ದಕ್ಷಿಣ ಕನ್ನಡ ಕಂಬಳ ಸಮಿತಿಯ ಸಂಸ್ಥಾಪಕ-ಕಾರ್ಯದರ್ಶಿ ಕೆ ಗುಣಪಾಲ ಕದಂಬ ಅವರು ಟೈಮ್ಸ್​​ ಆಫ್​​​ ಇಂಡಿಯಾ (TOI) ಕ್ಕೆ ನೀಡಿದ ಹೇಳಿಕೆ ಪ್ರಕಾರ ಪಾರದರ್ಶಕತೆಯನ್ನು ತರುವ ಮತ್ತು ಪ್ರಾರಂಭದ ಹಂತದಲ್ಲಿ ವಿಳಂಬವನ್ನು ತಡೆಯುವ ತಂತ್ರಜ್ಞಾನವನ್ನು ಪರಿಚಯಿಸುವ ಕುರಿತು ತಜ್ಞರು ಚರ್ಚೆ ನಡೆಸುತ್ತಿದ್ದಾರೆ. ಕಂಬಳ 24 ಗಂಟೆಗಳ ಒಳಗೆ ಮುಕ್ತಾಯಗೊಳಿಸುವುದು ನಮ್ಮ ಮುಖ್ಯ ಗುರಿಯಾಗಿದೆ.

ಮಿಯಾರ್ ಮತ್ತು ಮೂಡುಬಿದಿರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಬಳ ಅಕಾಡೆಮಿಯು ತುಳುನಾಡಿನ ಸಾಂಪ್ರದಾಯಿಕ ಪುರುಷ ಪ್ರಧಾನ ಕ್ರೀಡೆಯಾದ ಕಂಬಳದ ವಿವಿಧ ಅಂಶಗಳಲ್ಲಿ ಮಹಿಳೆಯರಿಗೆ ತರಬೇತಿ ನೀಡಲು ಚಿಂತನೆ ನಡೆಸಿದೆ. ಅವರಿಗೂ ಹೆಚ್ಚಿನ ತರಬೇತಿಯ ಅವಶ್ಯಕತೆ ಇದೆ ಎಂದು ಹೇಳಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist