ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನಾಲ್ವರು ಸಜೀವ ದಹನ

Twitter
Facebook
LinkedIn
WhatsApp
images 19

ಭೋಪಾಲ್:‌ ಮರವೊಂದಕ್ಕೆ ಕಾರು ಢಿಕ್ಕಿಯಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

ಜಿಲ್ಲೆಯ ತಿಮರಿ ಪೊಲೀಸ್ ಠಾಣೆ ವ್ಯಾಪ್ತಿಯ ಪೋಖರ್ನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬುಧವಾರ ಮುಂಜಾನೆ (ಮೇ.31 ರಂದು) ಮದುವೆಯೊಂದರಲ್ಲಿ ಪಾಲ್ಗೊಂಡು ವಾಪಾಸಾಗುತ್ತಿದ್ದರು.ಈ ವೇಳೆ ಕಾರು ವೇಗದಿಂದ ಬಂದು ಮರವೊಂದಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಪರಿಣಾಮ ವರ್ಕಳ ಚರಖೇಡ ಗ್ರಾಮದ ನಿವಾಸಿಗಳಾದ ಅಖಿಲೇಶ್ ಕುಶ್ವಾಹ, ಗೋಲು ಚೌಧರಿ, ರಾಕೇಶ್ ಕುಶ್ವಾಹ ಮತ್ತು ಅವರ ಪತ್ನಿ ಶಿವಾನಿ ಅವರು ಸಜೀವ ದಹನವಾಗಿದ್ದಾರೆ. ಮೃತರು 25 ರಿಂದ 30 ವರ್ಷದ ಅಸುಪಾಸಿನವರು ಎಂದು ಪೊಲೀಸರು ಹೇಳಿದ್ದಾರೆ.

“ಅಪಘಾತದಲ್ಲಿ ಸುಟ್ಟಗಾಯಗಳ ನಂತರ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆರೋಗ್ಯ ಸಮುದಾಯ ಕೇಂದ್ರ ತಿಮರ್ನಿಗೆ ಕಳುಹಿಸಲಾಗಿದೆ” ಎಂದು ಪೊಲೀಸ್ ಅಧೀಕ್ಷಕ (ಎಸ್ಪಿ) ಹಾರ್ದಾ ಸಂಜೀವ್ ಕುಮಾರ್ ಕಾಂಚನ್ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ