ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಿಕ್ಷಕರ ವರ್ಗಾವಣೆ ಪ್ರಾರಂಭಿಸಲು ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ!

Twitter
Facebook
LinkedIn
WhatsApp
Prabhatkhabar 2020 12 4467b733 e11d 49c3 b4a9 fe2d06852d38 bihar teacher teaching 1591095324

ಬೆಂಗಳೂರು(ಜೂ.03): ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಜೂ.6ರಿಂದ ಜು.31ರೊಳಗೆ ವರ್ಗಾವಣೆ ಪ್ರಕ್ರಿಯೆ ನಡೆಸಲು ಶಿಕ್ಷಣ ಇಲಾಖೆಯು ಶುಕ್ರವಾರ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಶಿಕ್ಷಕರ ವರ್ಗಾವಣೆ ಪುನಾರಂಭಿಸಲು ಸರ್ಕಾರ ಅನುಮತಿಸಿದೆ. ಅದರಂತೆ ವರ್ಗಾವಣೆ ಪ್ರಕ್ರಿಯೆಗೆ ವೇಳಾಪಟ್ಟಿ ಬದಲಾಯಿಸಲಾಗಿದೆ. ಉಳಿದಂತೆ 2022ರ ಡಿ.26ರಂದು ಹೊರಡಿಸಲಾದ ವೇಳಾಪಟ್ಟಿ ಪ್ರಕಾರ ಉಳಿದೆಲ್ಲಾ ಮಾರ್ಗಸೂಚಿ ಅಂಶಗಳು ಯಥಾವತ್ತಾಗಿ ಮುಂದುವರೆಯಲಿವೆ ಎಂದು ತಿಳಿಸಲಾಗಿದೆ.

ಮೊದಲಿಗೆ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರುಹಂಚಿಕೆಗೆ ಕೌನ್ಸೆಲಿಂಗ್‌ ನಡೆಯಲಿದ್ದು, ಜೂ.6ರಂದು ಕರಡು ಪ್ರತಿ ಪ್ರಕಟಿಸಲಾಗುವುದು. ಆನಂತರ ಆಕ್ಷೇಪಣೆಗೆ ಜೂ.10ರವರೆಗೆ ಅವಕಾಶವಿರುತ್ತದೆ. ಬ್ಲಾಕ್‌ ಮತ್ತು ಜಿಲ್ಲಾ ಮಟ್ಟದಲ್ಲಿ ಜೂ.17ರಿಂದ ಕೌನ್ಸೆಲಿಂಗ್‌ ಆರಂಭವಾಗಲಿದೆ. ಹೆಚ್ಚುವರಿ ಶಿಕ್ಷಕರ ಮರು ಹಂಚಿಕೆ ಕೌನ್ಸೆಲಿಂಗ್‌ ಬ್ಲಾಕ್‌ ಹಂತದಲ್ಲಿ ಜೂ.20ರಂದು ನಡೆಯಲಿದೆ. ತಾಂತ್ರಿಕ ಹುದ್ದೆಗಳ ವರ್ಗಾವಣೆ ಪ್ರಕ್ರಿಯೆ ಜೂ.8ರಿಂದ 26ರವರೆಗೆ ನಡೆಯಲಿದೆ. ಸಾಮಾನ್ಯ ಕೋರಿಗೆ ವರ್ಗಾವಣೆ ಜೂ.7ರಿಂದ ಜು.7ರವರೆಗೆ ನಡೆಯಲಿದೆ. ಜಿಲ್ಲಾ ಹಂತದ ವರ್ಗಾವಣೆ ಕೌನ್ಸೆಲಿಂಗ್‌ ಜು.10ರಿಂದ 17ವರೆಗೆ ನಡೆಯಲಿದೆ. ವಿಭಾಗೀಯ ಹಂತದ ವರ್ಗಾವಣೆ(ಒಳಗೆ) ಜು.17ರಿಂದ 26ರವರೆಗೆ ನಡೆಯಲಿದೆ. ವಿಭಾಗೀಯ ಹಂತದ ವರ್ಗಾವಣೆ(ಹೊರಗೆ) ಜು.25ರಿಂದ ಜು.31ರವರೆಗೆ ನಡೆಯಲಿದೆ ಎಂದು ತಿಳಿಸಲಾಗಿದೆ.

ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಿಲ್ಲ. ಪ್ರಕಟಿತ ಹೆಚ್ಚುವರಿ ಶಿಕ್ಷಕರ ಆದ್ಯತೆ ಸಲ್ಲಿಸುವಾಗ ವಿನಾಯಿತಿ, ಆದ್ಯತೆ ಕೋರಿ ಸಲ್ಲಿಸುವ ದಾಖಲೆಗಳನ್ನು ಮತ್ತು ಇತರ ಸೇವಾ ಮಾಹಿತಿಯನ್ನು ಅಪ್‌ಲೋಡ್‌ ಮಾಡುವಾಗ ಎಚ್ಚರಿಕೆ ವಹಿಸಬೇಕು. ತಪ್ಪಾಗಿ ಅರ್ಜಿ ಸಲ್ಲಿಕೆ, ಸರಿಯಾದ ದಾಖಲೆಗಳನ್ನು ಅಪ್‌ಲೋಡ್‌ ಮಾಡದೆ ಇರುವುದು ಕಂಡು ಬಂದರೆ ಪರಿಷ್ಕರಣೆಗೆ ಅವಕಾಶ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ(ಪ್ರಭಾರ) ಬಿ.ಬಿ.ಕಾವೇರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.schooleducation.kar.nic.in ನೋಡಬಹದು.

ಶಿಕ್ಷಕರ ವರ್ಗಾವಣೆಗೆ ಕಳೆದ ಜನವರಿಯಲ್ಲೇ ಅಧಿಸೂಚನೆ ಸಹಿತ ವೇಳಾಪಟ್ಟಿಪ್ರಕಟಿಸಲಾಗಿತ್ತು. ಸುಮಾರು 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆ ಬಯಸಿ ಅರ್ಜಿಯನ್ನೂ ಸಲ್ಲಿಸಿದ್ದರು. ಸುಮಾರು 25 ಸಾವಿರ ಶಿಕ್ಷಕರಿಗೆ ವರ್ಗಾವಣೆ ಅವಕಾಶ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist