ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆನಡಾದಿಂದ 700 ಭಾರತೀಯ ವಿದ್ಯಾರ್ಥಿಗಳು ಗಡಿಪಾರು! ವಿದೇಶಾಂಗ ಸಚಿವರ ಮಧ್ಯ ಪ್ರವೇಶಕ್ಕೆ ಒತ್ತಾಯ

Twitter
Facebook
LinkedIn
WhatsApp
canada study

ನವದೆಹಲಿ:  ಕೆನಡಾದಿಂದ ಗಡಿಪಾರು ಎದುರಿಸುತ್ತಿರುವ 700 ಭಾರತೀಯ ವಿದ್ಯಾರ್ಥಿಗಳ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ವಿದೇಶಾಂಗ ವ್ಯವಹಾರ ಸಚಿವ ಎಸ್. ಜೈಶಂಕರ್ ಅವರನ್ನು ಪಂಜಾಬ್ ಎನ್ ಆರ್ ಐ ವ್ಯವಹಾರ ಸಚಿವ ಕುಲದೀಫ್ ಸಿಂಗ್ ಧಲಿವಾಲ್ ಕೋರಿದ್ದಾರೆ.

ಜೈಶಂಕರ್‌ಗೆ ಪತ್ರ ಬರೆದಿರುವ ಧಲಿವಾಲ್, ಈ ವಿಚಾರವಾಗಿ ಅವರನ್ನು ಭೇಟಿಯಾಗಲು ಸಮಯಾವಕಾಶ ಕೋರಿದ್ದಾರೆ. ಕೆನಡಾದ ಶಿಕ್ಷಣ ಸಂಸ್ಥೆಗಳ ಪ್ರವೇಶ ಪತ್ರಗಳು ನಕಲಿ ಎಂಬುದನ್ನು ಆ ದೇಶದ ಅಧಿಕಾರಿಗಳು ಕಂಡುಹಿಡಿದ ನಂತರ ಬಹುತೇಕ ಪಂಜಾಬ್‌ನ ಸುಮಾರು 700 ಭಾರತೀಯ ವಿದ್ಯಾರ್ಥಿಗಳು ಕೆನಡಾದಿಂದ ಗಡಿಪಾರು ಎದುರಿಸುತ್ತಿದ್ದಾರೆ. ಮಾರ್ಚ್‌ನಲ್ಲಿ ಈ ವಿದ್ಯಾರ್ಥಿಗಳು ಕೆನಡಾದಲ್ಲಿ ಶಾಶ್ವತವಾಗಿ ನೆಲೆಸಲು ಅರ್ಜಿ ಸಲ್ಲಿಸಿದಾಗ ವಿಷಯ ಬೆಳಕಿಗೆ ಬಂದಿದೆ.

ವಿದೇಶಾಂಗ ಸಚಿವರನ್ನು ಭೇಟಿಯಾಗಲು ಸಮಯಾವಕಾಶ ಕೇಳಿದ್ದೇನೆ. ಇದರಿಂದಾಗಿ ಇಡೀ ವಿಷಯವನ್ನು ವೈಯಕ್ತಿಕವಾಗಿ ಕೇಂದ್ರ ಸರ್ಕಾರದ ಗಮನಕ್ಕೆ ತರಬಹುದು” ಎಂದು ಧಲಿವಾಲ್ ಹೇಳಿದರು. ಗಡಿಪಾರು ಆಗಿರುವ 700 ವಿದ್ಯಾರ್ಥಿಗಳು ಮುಗ್ದರು ಮತ್ತು ವಂಚಕರ ಗುಂಪಿನಿಂದ ಮೋಸ ಹೋಗಿದ್ದಾರೆ ಎಂದು ವಿದೇಶಾಂಗ ಸಚಿವರಿಗೆ ಬರೆದಿರುವ ಪತ್ರದಲ್ಲಿ ಧಲಿವಾಲ್ ಹೇಳಿದ್ದಾರೆ. ಮತ್ತೊಮ್ಮೆ ಈ ವಿಷಯವನ್ನು ವೈಯಕ್ತಿಕವಾಗಿ ಪರಿಶೀಲಿಸಿದರೆ ಮತ್ತು ಕೆನಡಾದ ಹೈಕಮಿಷನ್, ಕೆನಡಾದ ಸರ್ಕಾರ ಸೇರಿದಂತೆ ಸಂಬಂಧಪಟ್ಟ ಏಜೆನ್ಸಿಗಳೊಂದಿಗೆ ಮಾತನಾಡಿದರೆ ಈ ವಿದ್ಯಾರ್ಥಿಗಳನ್ನು ಗಡಿಪಾರು ಮಾಡದಂತೆ ತಡೆಯಬಹುದು ಎಂದು ಧಲಿವಾಲ್ ಮನವಿ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ