ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗುಜರಾತ್ ಗೆ ನಾಳೆ ಅಪ್ಪಳಿಸಿದೆ ಬಿಫೋರ್ ಜಾಯ್ ಬ್ರಹತ್ ಚಂಡಮಾರುತ ; 95 ರೈಲು ಸಂಚಾರ ರದ್ದು!

Twitter
Facebook
LinkedIn
WhatsApp
100943089

ನವದೆಹಲಿ/ಅಹಮದಾಬಾದ್‌ (ಜೂನ್ 14, 2023): ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿರುವ ‘ಬಿಪೊರ್‌ಜೊಯ್‌’ (ವಿಪತ್ತು) ಚಂಡಮಾರುತ ಗುಜರಾತಿನ ಕರಾವಳಿಯತ್ತ ಮುನ್ನುಗ್ಗಿ ಬರುತ್ತಿದ್ದು, ಗಂಟೆಗೆ 125ರಿಂದ 150 ಕಿ.ಮೀ. ವೇಗದಲ್ಲಿ ತೀರಕ್ಕೆ ಗುರುವಾರ ಸಂಜೆ ವೇಳೆಗೆ ಅಪ್ಪಳಿಸಲಿದೆ. ಈ ಚಂಡಮಾರುತ ಅತ್ಯಂತ ಬೃಹತ್‌ ಪ್ರಮಾಣದಲ್ಲಿ ಹಾನಿಯುಂಟು ಮಾಡುವ ಸಾಧ್ಯತೆ ಇದೆ. 7 ಜಿಲ್ಲೆಗಳಲ್ಲಿ ಸಾಕಷ್ಟು ಹಾನಿಯಾಗಲಿದೆ, ಈ ಪೈಕಿ ಕಛ್‌, ದೇವಭೂಮಿ ದ್ವಾರಕಾ ಹಾಗೂ ಜಾಮ್‌ನಗರ ಜಿಲ್ಲೆಗಳಲ್ಲಿ ಅಗಾಧ ಹಾನಿಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಈ ಮಧ್ಯೆ, ಗುಜರಾತ್‌ನ ಕರಾವಳಿಯಲ್ಲಿ 21 ಸಾವಿರ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಕರಾವಳಿಯಿಂದ 10 ಕಿ.ಮೀ. ವ್ಯಾಪ್ತಿಯಲ್ಲಿ ನೆಲೆಸಿರುವ ಎಲ್ಲ ಜನರನ್ನೂ ತೆರವು ಮಾಡಲಾಗುತ್ತಿದೆ.

ಚಂಡಮಾರುತವು ಅತ್ಯಂತ ಗಂಭೀರ ಸ್ವರೂಪ ಪಡೆದುಕೊಂಡಿದೆ. ಗುಜರಾತಿನ ಜಖಾವು ಬಂದರು ಪ್ರದೇಶಕ್ಕೆ ಅಪ್ಪಳಿಸಲಿದೆ. ಇದು ಅಗಾಧ ಪ್ರಮಾಣದ ಹಾನಿಯುಂಟು ಮಾಡುವ ಸಾಮರ್ಥ್ಯ ಹೊಂದಿದೆ. ಬೆಳೆದು ನಿಂತ ಬೆಳೆಗಳು, ಮನೆ, ರಸ್ತೆ, ವಿದ್ಯುತ್‌, ಸಂವಹನ ಕಂಬಗಳಿಗೆ ಬಿರುಗಾಳಿಯಿಂದ ಹಾನಿಯಾಗುವ ಸಾಧ್ಯತೆ ಇದೆ. ಸಮುದ್ರದಲ್ಲಿ 6 ಮೀಟರ್‌ ಎತ್ತರದವರೆಗೂ ಅಲೆಗಳು ಸೃಷ್ಟಿಯಾಗಲಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಲಿದೆ. ಹೀಗಾಗಿ ಅಪಾಯದ ಅಂಚಿನಲ್ಲಿರುವ ಜನರನ್ನು ಸ್ಥಳಾಂತರ ಮಾಡಬೇಕು ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ಅವರು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಚಂಡಮಾರುತದಿಂದಾಗಿ ಕಛ್‌, ದ್ವಾರಕಾ, ಜಾಮ್‌ನಗರ, ಪೋರಬಂದರ್‌ ಜಿಲ್ಲೆಗಳಲ್ಲಿ ಜೂನ್ 15ರವರೆಗೂ 20ರಿಂದ 25 ಸೆಂ.ಮೀ.ವರೆಗೂ ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳು ಈ ಸಮಯದಲ್ಲಿ ಇಷ್ಟೊಂದು ಭಾರಿ ಮಳೆಯನ್ನು ಕಾಣುವುದಿಲ್ಲ. ಹೀಗಾಗಿ ಚಂಡಮಾರುತದಿಂದ ಹಲವು ತಗ್ಗು ಪ್ರದೇಶಗಳಿಗೆ ಮುಳುಗಡೆಯಾಗುವ ಆತಂಕವಿದೆ ಎಂದೂ ಮಾಹಿತಿ ನೀಡಿದ್ದಾರೆ.

ಈ ನಡುವೆ, ದ್ವಾರಕಾದಿಂದ 40 ಕಿ.ಮೀ. ದೂರದಲ್ಲಿರುವ ‘ಕೀ ಸಿಂಗಾಪುರ’ ಎಂಬ ತೈಲ ಬಾವಿಯಲ್ಲಿ ಕೆಲಸ ಮಾಡುತ್ತಿದ್ದ 50 ಮಂದಿಯನ್ನು ಭಾರತೀಯ ಕರಾವಳಿ ಕಾವಲು ಪಡೆ ಸೋಮವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ.

ಅಹಮದಾಬಾದ್‌: ಗುಜರಾತ್‌ ಕರಾವಳಿಗೆ ಬಿಪೊರ್‌ಜೊಯ್‌ ಚಂಡಮಾರುತ ಅಪ್ಪಳಿಸುವ ಸೂಚನೆ ಮೇರೆಗೆ ಭಾರತೀಯ ರೈಲ್ವೆಯು 56 ರೈಲುಗಳ ಮಾರ್ಗ ಕಡಿತಗೊಳಿಸಿದ್ದು, 95 ರೈಲುಗಳನ್ನು ರದ್ದುಗೊಳಿಸಿದೆ. ಇದರಲ್ಲಿ ದ್ವಾರಕ, ಪೋರಬಂದರ್‌, ವೆರಾವಲ್‌, ಓಕಾ, ಗಾಂಧಿಧಾಮ್‌ಗೆ ಹೋಗುವ ರೈಲುಗಳ ಮಾರ್ಗ ಕಡಿತಗೊಳಿಸಿ ಅಹಮದಾಬಾದ್‌, ರಾಜಕೋಟ್‌ ಹಾಗೂ ಸುರೇಂದ್ರನಗರದಲ್ಲಿ ನಿಲ್ಲಿಸಲಾಗುವುದು. ಇದರೊಂದಿಗೆ ಡಬಲ್‌ ಕಂಟೈನರ್‌ ರೈಲುಗಳನ್ನು ನಿಲ್ಲಿಸಲಾಗಿದೆ ಎಂದು ಪಶ್ಚಿಮ ರೈಲ್ವೆ ವಲಯ ತಿಳಿಸಿದೆ. ಇದರೊಂದಿಗೆ ಚಂಡಮಾರುತಗಳಿಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುವ ರೈಲ್ವೆ, ತುರ್ತು ವೈದ್ಯಕೀಯ ರೈಲು, ಮರ ಕತ್ತರಿಸುವ ಯಂತ್ರ, ಜೆಸಿಬಿ ಹೀಗೆ ಹಲವು ರಕ್ಷಣಾ ಉಪಕರಣಗಳನ್ನು ಸಿದ್ಧಪಡಿಸಿಕೊಂಡಿದೆ. ಇದರೊಂದಿಗೆ ಭಾವನಗರ, ಪೋರಬಂದರ್‌, ವೆರಾವಲ್‌, ಓಕಾ, ದ್ವಾರಕ, ಕಂಭಾಲಿಯಾ, ಜಾಮ್‌ನಗರ್‌ ನಿಲ್ದಾಣಗಳಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು ತಿಳಿಸಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist