ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಟಿ ಖುಷ್ಬು ವಿರುದ್ಧ ವಿವಾದಾತ್ಮಕ ಹೇಳಿಕೆ: ಹಿರಿಯ ಶಾಸಕನ ಬಂಧನ

Twitter
Facebook
LinkedIn
WhatsApp

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಜನಪ್ರಿಯ ನಟಿ, ಪ್ರಸ್ತುತ ತಮಿಳುನಾಡು ಬಿಜೆಪಿ ನಾಯಕಿ ಖುಷ್ಬು ಸುಂದರ್ (Khushboo Sundar) ಬಗ್ಗೆ ಕೀಳು ಹೇಳಿಕೆ ನೀಡಿದ ಆಡಳಿತರೂಢ ಡಿಎಂಕೆ ಪಕ್ಷದ ಹಿರಿಯ ಶಾಸಕ ಶಿವಾಜಿ ಕೃಷ್ಣಮೂರ್ತಿಯನ್ನು ತಮಿಳುನಾಡು (Tamil Nadu) ಪೊಲೀಸರು (Police) ಬಂಧಿಸಿದ್ದಾರೆ. ಖುಷ್ಬು ಸುಂದರ್ ಬಗ್ಗೆ ಮಾತ್ರವೇ ಅಲ್ಲದೆ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ, ತಮಿಳುನಾಡು ರಾಜ್ಯಪಾಲ ರವಿ ಅವರ ಬಗ್ಗೆಯೂ ಕೀಳು ಹೇಳಿಕೆಗಳನ್ನು ಶಿವಾಜಿ ನೀಡಿದ್ದರು.

ಇತ್ತೀಚೆಗಿನ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಶಿವಾಜಿ, ”ನನ್ನ ಮಗಳ ಮದುವೆ ಸಮಯದಲ್ಲಿ ಫೋಟೊದವರು ನನ್ನ ಫೋಟೊ ಹೆಚ್ಚಿಗೆ ತೆಗೆಯುತ್ತಿದ್ದರು. ನೀವು ಚೆನ್ನಾಗಿದ್ದೀರಿ ಎಂದರು, ನಾನೇನು ನಟನಲ್ಲ, ಅದರಲ್ಲಿಯೂ ಖುಷ್ಬು ಅಂಥಹಾ ನಟನಲ್ಲ. ನಟರಾಗಿರುವುದು ಓಕೆ, ಆದರೆ ಖುಷ್ಬು ರೀತಿ ನಟರಾಗಿರುವುದು ಸರಿಯಲ್ಲ. ಖುಷ್ಬು ಹಳೆಯ ಹಂಡೆ ಇದ್ದಂತೆ. ಆದರೆ ಎಲ್ಲ ಖುಷ್ಬು ಬೇಕು, ಖುಷ್ಬು ಬೇಕು ಎನ್ನುತ್ತಾರೆ. ಅಯ್ಯೋ ಅವಳು ಹಳೆ ಹಂಡೆ ಅವಳನ್ನ ಯಾಕೆ ಕೇಳ್ತೀರಿ ಸುಮ್ಮನಿರ್ರಿ” ಎಂದು ನಾಲಗೆ ಹರಿಬಿಟ್ಟಿದ್ದರು ಶಿವಾಜಿ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಬಗ್ಗೆಯೂ ಕೀಳಾಗಿ ಮಾತನಾಡಿದ್ದ ಶಿವಾಜಿ, ”ಅಣ್ಣಾಮಲೈ ಒಂದು ಕಡೆಯಿಂದ ನೋಡಿದರೆ ಹೆಣ್ಣಿನಂತೆ ಕಾಣುತ್ತಾನೆ, ಇನ್ನೊಂದು ಕಡೆಯಿಂದ ನೋಡಿದರೆ ಗಂಡಿನಂತೆ ಕಾಣುತ್ತಾನೆ ಮಧ್ಯದಿಂದ ನೋಡಿದರೆ ಗಂಡು-ಹೆಣ್ಣು ಎರಡೂ ರೀತಿ ಕಾಣುತ್ತಾನೆ. ರಫೆಲ್ ವಾಚು ಹಾಕಿಕೊಳ್ಳುವುದು ಅವನಿಗೆ ದೇಶಪ್ರೇಮವಂತೆ. ಮೂರು ಲಕ್ಷದ ವಾಚು ಹಾಕಿಕೊಳ್ಳುತ್ತಾನೆ, ಬಿಲ್ ತೋರಿಸು ಅಂದರೆ ಯಾವುದೋ ರಸೀದಿ ತೋರಿಸುತ್ತಾನೆ. ಇವನು ಐಪಿಎಸ್ ಬೇರೆ ಆಗಿದ್ದನಂತೆ. ಮೊದಲು ನಿಮ್ಮ ಅಮ್ಮ-ಅಪ್ಪನ ಕೇಳು, ನೀನು ಗಂಡೊ-ಹೆಣ್ಣೊ ಎಂದು” ಎಂದು ಅಗೌರವಕಾರಿಯಾಗಿ ಶಿವಾಜಿ ಮಾತನಾಡಿದ್ದರು.

ತಮಿಳುನಾಡು ರಾಜ್ಯಪಾಲ ಆರ್​.ಎನ್.ರವಿ ಬಗ್ಗೆ ಮಾತನಾಡಿರುವ ಶಿವಾಜಿ, ”ನಾವು ಸಚಿವ ಸ್ಥಾನವನ್ನು ಇಬ್ಬರು ಸಚಿವರಿಗೆ ನೀಡಿದ್ದೆವು. ಆದರೆ ನೀನು ಇದು ಸರಿಯಲ್ಲ ಎಂದೆ. ನೀನು ಒಬ್ಬ ತಾಯಿಗೆ ಹುಟ್ಟಿದ್ದರೆ ನಿನ್ನ ಮಾತಿನ ಮೇಲೆ ನಿಂತುಕೊಳ್ಳಬೇಕಿತ್ತು. ನಾವು ಡಿಎಂಕೆಯವರು ಮಾತು ಆಡುವುದಿಲ್ಲ, ಆಡಿದರೆ ನಮ್ಮ ಜೀವ ಹೋದರು ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತೇವೆ” ಎಂದಿದ್ದರು. ಕೆಲವು ತಿಂಗಳ ಹಿಂದೆಯಷ್ಟೆ ರಾಜ್ಯಪಾಲರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಶಿವಾಜಿಯನ್ನು ಡಿಎಂಕೆ ಪಕ್ಷದಿಂದ ಉಚ್ಛಾಟನೆ ಮಾಡಿತ್ತು, ಕ್ಷಮೆ ಕೇಳಿದ ಬಳಿಕ ಇತ್ತೀಚೆಗಷ್ಟೆ ಅವರನ್ನು ಪುನಃ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ ಈಗ ಮತ್ತೆ ತಮ್ಮ ನಾಲಗೆ ಹರಿಬಿಟ್ಟು ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ.

ತಮ್ಮ ವಿರುದ್ಧ ಕೀಳು ಅಭಿರುಚಿಯ ಮಾತನಾಡಿದ ಶಿವಾಜಿ ವಿರುದ್ಧ ನಟಿ ಖುಷ್ಬು ಸುಂದರ್ ದೂರು ನೀಡಿದ್ದರು. ಅವರ ಮಾತಿನ ವಿಡಿಯೋವನ್ನು ತಮಿಳುನಾಡು ಸಿಎಂ ಸ್ಟಾಲಿನ್​ಗೆ ಟ್ಯಾಗ್​ ಮಾಡಿ ಇದೇನಾ ನಿಮ್ಮ ಸಂಸ್ಕಾರ ಎಂದು ಪ್ರಶ್ನಿಸಿದ್ದರು. ಶಿವಾಜಿ ಭಾಷಣದ ವಿಡಿಯೋ ವೈರಲ್ ಆದ ಬೆನ್ನಲ್ಲೆ ಡಿಎಂಕೆ ಪಕ್ಷವು ಶಿವಾಜಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ. ಉಚ್ಛಾಟನೆಯಾದ ಬೆನ್ನಲ್ಲೆ ಪೊಲೀಸರು ಶಿವಾಜಿಯನ್ನು ಬಂಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist