ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯುವ ಪ್ರೇಮಿಗಳನ್ನು ಕೊಂದ ಯುವತಿ ಪೋಷಕರು ; ಮೃತದೇಹವನ್ನು ಮೊಸಳೆಗಳಿರುವ ನದಿಗೆ ಎಸೆದು ಕೃತ್ಯ!

Twitter
Facebook
LinkedIn
WhatsApp
13675 1

ಭೋಪಾಲ್‌ ಆಕೆಗಿನ್ನು ಕೇವಲ 18 ವರ್ಷ ತುಂಬಿತ್ತಷ್ಟೇ ಆತನೋ ಇನ್ನು ಚಿಗುರು ಮೀಸೆಯ 21 ವರ್ಷದ ನವ ತರುಣ, ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿಗಳ ಪ್ರೇಮಕ್ಕೆ ಯುವತಿ ಕಡೆಯವರ ತೀವ್ರ ವಿರೋಧವಿತ್ತು. ವಿರೋಧ ಲೆಕ್ಕಿಸದೇ ಇವರ ಪ್ರೇಮ ಮುಂದುವರೆದಿತ್ತು. ಇದರಿಂದ ಆಕ್ರೋಶಗೊಂಡ ಯುವತಿಯ ಪೋಷಕರು ಸ್ವಲ್ಪವೂ ಕರುಣೆ ಇಲ್ಲದಂತೆ ಈ ನವಪ್ರೇಮಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ. ಅಷ್ಟು ಮಾತ್ರವಲ್ಲದೇ ಅವರಿಬ್ಬರ ಮೃತದೇಹಗಳಿಗೆ ಭಾರವಾದ ಕಲ್ಲುಗಳನ್ನು ಕಟ್ಟಿ ಮೊಸಳೆಗಳಿಂದ ತುಂಬಿದ ಚಂಬಲ್ ನದಿಗೆ ಎಸೆದು ಕ್ರೌರ್ಯ ಮೆರೆದಿದ್ದಾರೆ. ಮಧ್ಯ ಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಈ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. 

ಮೊರೆನಾ ಜಿಲ್ಲೆಯ (Morena district) ರತ್ನಬಸೈ ಗ್ರಾಮದ ಶಿವಾನಿ ತೋಮರ್‌ (18) ಹಾಗೂ ರಾಧೇಶ್ಯಾಮ್ (21) ತೋಮರ್‌ ಕೊಲೆಯಾದ ಪ್ರೇಮಿಗಳಾಗಿದ್ದಾರೆ.  ಶಿವಾನಿಯ ಪೋಷಕರು ಆಕೆಯ ಪ್ರೇಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.  ಯುವಕ ರಾಧೇಶ್ಯಾಮ್ ನೆರೆಯ ಬಾಲುಪುರ (Balupura) ಗ್ರಾಮದ ನಿವಾಸಿಯಾಗಿದ್ದ. ರಾಧೇಶ್ಯಾಮ್‌ ತಂದೆ ದೂರು ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. 

ರಾಧೇಶ್ಯಾಮ್ ಅವರ ತಂದೆ,  ತನ್ನ ಮಗ ಮತ್ತು ಯುವತಿ ಹಲವಾರು ದಿನಗಳಿಂದ ನಾಪತ್ತೆಯಾಗಿದ್ದಾರೆ ಅವರನ್ನು ಕೊಲೆ ಮಾಡಿರಬಹುದು ಎಂಬ ಶಂಕೆ ಇದೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಆರಂಭದಲ್ಲಿ ಪ್ರೇಮಿಗಳಿಬ್ಬರು ಓಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಆದರೆ ಇವರಿಬ್ಬರು ಮನೆ ಬಿಟ್ಟು ಹೋಗಿದ್ದನ್ನು ಗ್ರಾಮದಲ್ಲಿ ಯಾರೂ ನೋಡಿರಲಿಲ್ಲ. ಹೀಗಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವತಿಯ ತಂದೆ ಹಾಗೂ ಸಂಬಂಧಿಗಳನ್ನು ವಿಚಾರಣೆ ನಡೆಸಿದ್ದಾರೆ. ಗಂಟೆಗಳ ವಿಚಾರಣೆ ಬಳಿಕ ಮಗಳು ಹಾಗೂ ಆಕೆಯ ಪ್ರೇಮಿಯನ್ನು ತಾವೇ ಕೊಲೆ ಮಾಡಿದ್ದಾಗಿ ಯುವತಿಯ ಪೋಷಕರು ಬಾಯ್ಬಿಟ್ಟಿದ್ದಾರೆ. 

ರಾಧೇಶ್ಯಾಂ (Radheshyam) ಹಾಗೂ ಶಿವಾನಿಯನ್ನು (Shivani) ಜೂನ್ 3 ರಂದು ಗುಂಡಿಕ್ಕಿ ಹತ್ಯೆ ಮಾಡಿದ್ದು, ನಂತರ ಅವರಿಬ್ಬರ ಮೃತದೇಹಗಳಿಗೆ ಕಲ್ಲುಗಳನ್ನು ಕಟ್ಟಿ ಅವುಗಳನ್ನು ಮೊಸಳೆಗಳಿಂದ ತುಂಬಿದ್ದ ಚಂಬಲ್ ನದಿಗೆ (Chambal river)ಎಸೆದಿದ್ದಾಗಿ ಯುವತಿಯ ಪೋಷಕರು ಪೊಲೀಸರ ತನಿಖೆ ವೇಳೆ ಹೇಳಿದ್ದಾರೆ.  ನಾವು ಯುವತಿಯ ಕುಟುಂಬದ ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ತಾವು ಮಾಡಿದ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ದಂಪತಿಯನ್ನು ಕೊಲೆ ಮಾಡಿ ಶವವನ್ನು ಚಂಬಲ್ ನದಿಗೆ ಎಸೆದಿದ್ದಾಗಿ ಯುವತಿ ಮನೆಯವರು ನಮಗೆ ತಿಳಿಸಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲು ನಾವು ರಕ್ಷಣಾ ತಂಡಗಳ ಸಹಾಯವನ್ನು ಪಡೆದುಕೊಂಡಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಂಬಲ್ ಘರಿಯಾಲ್ ಅಭಯಾರಣ್ಯವು (Chambal Gharial sanctuary) 2,000 ಕ್ಕೂ ಹೆಚ್ಚು ಘಾರಿಯಲ್ ಮೊಸಳೆ (alligator) ಮತ್ತು 500 ಸಿಹಿನೀರಿನ ಮೊಸಳೆಗಳನ್ನು ಹೊಂದಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist