ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೇಂದ್ರ ಸಚಿವ ಅಮಿತ್ ಶಾ ರನ್ನು ಭೇಟಿಯಾದ ಸಿದ್ದರಾಮಯ್ಯ

Twitter
Facebook
LinkedIn
WhatsApp
99

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಖರೀದಿ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಾಯಕರ ಮಧ್ಯೆ ವಾಕ್ಸಮರ ಮುಂದುವರಿದಿದ್ದು, ಇದರ ಮಧ್ಯೆ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿದ್ದಾರೆ. ಇನ್ನು ಅಮಿತ್ ಶಾ ಭೇಟಿ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಇಂದು(ಜೂನ್ 22) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ರಾಜ್ಯಕ್ಕೆ ಅಕ್ಕಿ ಪೂರೈಸುವ ಬಗ್ಗೆ ಅಮಿತ್ ಶಾ ಜತೆ ಚರ್ಚಿಸಿದ್ದೇನೆ. ಮೊದಲು FCI ರಾಜ್ಯಕ್ಕೆ ಅಕ್ಕಿ ಪೂರೈಕೆ ಮಾಡುವುದಾಗಿ ಹೇಳಿತ್ತು. ಆ ನಂತರ ರಾಜ್ಯಕ್ಕೆ ಅಕ್ಕಿ ಪೂರೈಸಲು ಆಗಲ್ಲ ಎಂದು ಹೇಳಿದ್ದಾರೆ. ದ್ವೇಷ ರಾಜಕೀಯ ಮಾಡುವುದು ಬೇಡ ಎಂದು ಹೇಳಿದ್ದೇನೆ. ಅಮಿತ್ ಶಾ ಕೂಡ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು. ಅಲ್ಲದೇ ಇನ್ನೂ IRB ಎರಡು ಬೆಟಾಲಿಯಾನ್ ಕೊಡುವಂತೆ ಬೇಡಿಕೆ ಅಮಿತ್​ ಶಾ ಮುಂದೆ ಇಟ್ಟಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ, ಏನೂ ಸಮಸ್ಯೆ ಇಲ್ಲ. ಅಕ್ಕಿ ಖರೀದಿ ಬಗ್ಗೆ ಕೆಲವು ರಾಜ್ಯಗಳ ಜತೆ ಚರ್ಚೆ ಮಾಡಿದ್ದೇವೆ. ಕೆಲವು ಕಡೆ ಅಕ್ಕಿ ಸಿಗುತ್ತೆ, ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ರಾಜ್ಯಕ್ಕೆ ಅಕ್ಕಿ ನೀಡುವ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಮಾತಾಡಿದ್ದೇನೆ. ರಾಜ್ಯದಲ್ಲಿ ಆಗಿರುವ ಸಮಸ್ಯೆ ಬಗ್ಗೆ ಅವರ ಗಮನಕ್ಕೆ ತಂದಿದ್ದೇನೆ. FCI ನವರು ಮೊದಲು ಅಕ್ಕಿ ಕೊಡುತ್ತೇನೆ ಅಂತ ಹೇಳಿದ್ರು. ಆಮೇಲೆ ಅವರು ಹೇಳಿದಂತೆ ಅಕ್ಕಿ ಕೊಟ್ಟಿಲ್ಲ, ಮತ್ತೆ ಕೊಡುವುದಕ್ಕೆ ಆಗಲ್ಲ ಎಂದು ಹೇಳಿದ್ದಾರೆ ಎಂದು ವಿವರಣೆಯನ್ನ ಅಮಿತ್ ಶಾಗೆ ನೀಡಿದ್ದೇನೆ.

ರಾಜ್ಯದ ಕಾನೂನು ಸುವ್ಯವಸ್ಥೆಯಲ್ಲಿ ಏನೂ ಸಮಸ್ಯೆಗಳು ಇಲ್ಲ.IRB ಎರಡು ಬೆಟಾಲಿಯಾನ್ ಇದೆ, ಇನ್ನು ಎರಡು ಕೊಡಿ ಎಂದು ಕೇಳಿದ್ದೇವೆ ಅಷ್ಟೇ. ಕೆಲವು ರಾಜ್ಯಗಳಲ್ಲಿ ಅಕ್ಕಿ ಕೊಡುವ ಬಗ್ಗೆ ಮಾತನಾಡಿದ್ದೇವೆ. ಬೇರೆ ಬೇರೆ ರಾಜ್ಯಗಳ ಜೊತೆ ಮಾತುಕತೆ ಮಾಡಿದ್ದೇವೆ. ಕೆಲವು ಕಡೆ ಇದೆ. ಆದ್ರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ ಎಂದು ವಿವರಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist