Dakshina kannnada: ದಕ್ಷಿಣ ಕನ್ನಡದಲ್ಲಿ ನಾಳೆಯೂ ಜು.27 ರಂದು ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ!
Dakshina kannada: ಕರಾವಳಿಯಲ್ಲಿ ಸುರಿಯುತ್ತಿರುವ ಬಾರಿ ಮಳೆಗೆ ನಾಳೆಯೂ ಜು. 27 ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ (Holiday declared) . ಪಿಯುಸಿ, ಡಿಗ್ರಿ ಕಾಲೇಜುಗಳಿಗೆ ರಜೆ ಇಲ್ಲ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ಕೇವಲ ಶಾಲೆಗಳಿಗೆ ಮಾತ್ರ ರಜೆ ಎಂದು ಉಲ್ಲೇಖಿಸಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಹಾನಿ ಸಂಭವಿಸಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ
Dakshina kannada ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕುಂದಾಪುರ: ಕೊಚ್ಚಿಹೋದ ತೆಗ್ಗರ್ಸೆ ಕಿರುಸೇತುವೆ ಸ್ಥಳಕ್ಕೆ ಡಿಸಿ ಭೇಟಿ – ತಾತ್ಕಾಲಿಕ ಸೇತುವೆ ನಿರ್ಮಾಣ ಭರವಸೆ:
ಕುಂದಾಪುರ, ಜು 27 : ಎರಡು ದಿನಗಳ ಹಿಂದೆ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತೆಗ್ಗರ್ಸೆ ಸಮೀಪದ ನೀರೋಡಿ ಎಂಬಲ್ಲಿ ಕೊಚ್ಚಿ ಹೋದ ಕಿರುಸೇತುವೆ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಳೆದ ವರ್ಷ ಪಟ್ಟಣ ಪಂಚಾಯಿತಿ ವತಿಯಿಂದ 3 ಲಕ್ಷ ಅನುದಾನದಲ್ಲಿ ಕಿರು ಸೇತುವೆ ನಿರ್ಮಿಸಲಾಗಿತ್ತು. ಈ ವರ್ಷದ ಆರಂಭದ ಮಳೆಗೆ ಈ ಕಿರು ಸೇತುವೆ ಸಂಪೂರ್ಣ ಕೊಚ್ಚಿ ಹೋಗಿದೆ. ಶಾಲಾ ವಿದ್ಯಾರ್ಥಿಗಳಿಗೆ ರೈತರಿಗೆ ಕೂಲಿ ಕಾರ್ಮಿಕರಿಗೆ ಈ ರಸ್ತೆಯೇ ಆಧಾರವಾಗಿತ್ತು.
ಈ ಬಗ್ಗೆ ಪ್ರಕಟಗೊಂಡ ವರದಿಗೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಬೈಂದೂರಿ ತಹಸೀಲ್ದಾರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಶೆಟ್ಟಿ ಮೊದಲಾದವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಇಲ್ಲಿ ತಕ್ಷಣದಿಂದ ಸ್ಟೀಲ್ ಸೇತುವೆ ನಿರ್ಮಿಸಿ ಸ್ಥಳೀಯರ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆ ಕಡಿಮೆಯಾದ ಬಳಿಕ ಶಾಶ್ವತ ಸೇತುವೆ ನಿರ್ಮಿಸುವ ಭರವಸೆ ನೀಡಿದರು.
ಈ ಸಂದರ್ಭ ಸಾಮಾಜಿಕ ಹೋರಾಟಗಾರ ವೀರಭದ್ರ ಗಾಣಿಗ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಚನ್ನಯ್ಯ ಪೂಜಾರಿ, ವಾಸು ಮರಾಠಿ ಹಾಜರಿದ್ದರು.