ತೆಂಗು ಬೆಳೆಗಾರರಲ್ಲಿ ಆತ್ಮ ವಿಶ್ವಾಸ ಮೂಡಿಸಿದ ಕೊಬ್ಬರಿ ದರ ಚೇತರಿಕೆ!
ಮಂಗಳೂರು, ಜು 28 : ತೀವ್ರ ಕುಸಿತ ಕಂಡಿದ್ದ ಕೊಬ್ಬರಿ ಬೆಲೆ ಸದ್ಯ ಏರಿಕೆಯ ಹಾದಿಯಲ್ಲಿದ್ದು ತೆಂಗು ಬೆಳೆಗಾರರಲ್ಲಿ ಆತ್ಮ ವಿಶ್ವಾಸ ಮೂಡಿಸಿದೆ. ತಿಪಟೂರು ಸೇರಿದಂತೆ ತೆಂಗು ಬೆಳೆ ಪ್ರಮುಖ ಮಾರುಕಟ್ಟೆಗಳಲ್ಲಿ ಕೊಬ್ಬರಿ ಕ್ವಿಂಟಾಲ್ಗೆ ಗರಿಷ್ಠ 10,000 ರೂಪಾಯಿಗಳಿಗೆ ಮಾರಾಟವಾಗಿದೆ. ಇನ್ನು 57 ಸಾವಿರ ದಾಟಿದ ಕೊಬ್ಬರಿ ದರ ತೆಂಗು ಬೆಳೆ ಬಳಿಕ ಅಲ್ಪ ಕುಸಿತ ಕಂಡಿದ್ದ ಅಡಿಕೆ ಕೂಡ ಏರಿಕೆಯಾಗುತ್ತಿದ್ದು ಮತ್ತೆ 57 ಸಾವಿರದ ಸಮೀಪ ಬಂದಿದೆ.
ರಾಜ್ಯದ ಪ್ರಮುಖ ಕೊಬ್ಬರಿ ಮಾರುಕಟ್ಟೆಯಾದ ತಿಪಟೂರಿನಲ್ಲಿ ಕೂಡ ಕೊಬ್ಬರಿ ದರ ಏರಿಕೆ ಕಂಡಿದೆ. ಕ್ವಿಂಟಾಲ್ ಕೊಬ್ಬರಿ ಗರಿಷ್ಠ 10000 ರೂಪಾಯಿಗೆ ಮಾರಾಟವಾಗಿದ್ದರೆ, ಸರಾಸರಿ ದರ 9,500 ರೂಪಾಯಿ ಆಗಿತ್ತು. ಜುಲೈ 26ರಂದು ಗರಿಷ್ಠ ದರ 10,206 ರೂಪಾಯಿವರೆಗೆ ಮಾರಾಟವಾಗಿತ್ತು. ಅರಸೀಕೆರೆ ಕೊಬ್ಬರಿ ಮಾರುಕಟ್ಟೆಯಲ್ಲಿ ಕೊಬ್ಬರಿ ಗರಿಷ್ಠ 10,008 ರೂಪಾಯಿ ತಲುಪಿದೆ.
ತುರುವೇಕೆರೆಯಲ್ಲಿ ಕ್ವಿಂಟಾಲ್ ಕೊಬ್ಬರಿ ದರ ಗರಿಷ್ಠ 10,200 ವರೆಗೆ ಮಾರಾಟವಾಗಿದೆ. ತುಮಕೂರು ಮಾರುಕಟ್ಟೆಯಲ್ಲಿ ಕೂಡ ಕೊಬ್ಬರಿ ಗರಿಷ್ಠ 9,950 ರೂಪಾಯಿವರೆಗೆ ಮಾರಾಟವಾಗಿದೆ. ಕ್ವಿಂಟಾಲ್ ಕೊಬ್ಬರಿ ದರ 7,500 ರೂಪಾಯಿಗಳಿಗೆ ಕುಸಿಯುವ ಮೂಲಕ ಬೆಳೆಗಾರರಲ್ಲಿ ಆತಂಕ ಮೂಡಿಸಿತ್ತು, ಸದ್ಯ ದರ ಏರಿಕೆಯಿಂದ ನಿಟ್ಟುಸಿರು ಬಿಡುವಂತಾಗಿದೆ.
ಉಡುಪಿ: ವಿದ್ಯಾರ್ಥಿನಿಯರ ಮಾನ ಪ್ರಾಣದ ಪ್ರಶ್ನೆಯಾಗಿದೆ -ಶೋಭಾ ಕರಂದ್ಲಾಜೆ ಕಿಡಿ
ಉಡುಪಿ, ಜು 28 : ಉಡುಪಿ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ ದೇಶದ ಗಮನ ಸೆಳೆದಿದೆ , ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನಾಗುತ್ತದೆ ಅನ್ನುವುದನ್ನು, ಅದನ್ನೇ ಕಣ್ಣ ಮುಂದೆ ಕಾಣುತ್ತಿದ್ದೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಹಿಜಾಬ್ ನಂತರ ವೀಡಿಯೊ ಪ್ರಕರಣದ ಕುರಿತು ಚರ್ಚೆಗಳು ನಡೆಯುತ್ತಿವೆ. ವಿದ್ಯಾರ್ಥಿನಿಯರ ರಕ್ಷಣೆ ನಮಗೆ ಮುಖ್ಯ. ನಮ್ಮ ವಿದ್ಯಾರ್ಥಿನೀಯರ ಮಾನ ಪ್ರಾಣದ ಪ್ರಶ್ನೆಯಾಗಿದೆ. ಖಾಸಗಿ ವಿಷಯವನ್ನು ಹೊರಗೆ ಹರಡಿ ದುರುಪಯೋಗಪಡಿಸಿಕೊಂಡವರಿಗೆ ತಕ್ಕ ಶಿಕ್ಷೆಯಾಗಬೇಕು.ಯಾವುದೇ ಹಾಸ್ಟೆಲ್ ಕಾಲೇಜು ವಸತಿ ಶಾಲೆ ಯಲ್ಲಿ ಯಾರೇ ಹೀಗೆ ಮಾಡಿದರೂ ನನ್ನ ಗಮನಕ್ಕೆ ತನ್ನಿ. ನಾನು ನಿಮ್ಮ ಅಕ್ಕನಾಗಿ ವಿನಂತಿ ಮಾಡುತ್ತೇನೆ. ಮಾಹಿತಿ ನೀಡಿದವರನ್ನು ಗೌಪ್ಯವಾಗಿ ಇಟ್ಟು ನಿಮ್ಮನ್ನು ರಕ್ಷಣೆ ಮಾಡುತ್ತೇನೆ. ಲವ್ ಜಿಹಾದ್ ಮತಾಂತರ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಕೇಂದ್ರ ಗೃಹ ಸಚಿವರ ಗಮನಕ್ಕೂ ತಂದು ನಾನು ನ್ಯಾಯ ಕೊಡಿಸುತ್ತೇವೆ ಎಂದಿದ್ದಾರೆ.
ಹಿಜಾಬ್ ಮತ್ತು ಇದೀಗ ವಿಡಿಯೋ ಬಗ್ಗೆ ಚರ್ಚೆ ಆಗುತ್ತಿದೆ. ನಮಗೆ ನಮ್ಮ ವಿದ್ಯಾರ್ಥಿನಿಯರ ರಕ್ಷಣೆ ಮುಖ್ಯವಾದುದ್ದು. ಖಾಸಗಿ ವಿಚಾರ ಹೊರಗಡೆ ಹರಿ ಬಿಟ್ಟು ದುರ್ಬಳಕೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು. ಜನಪ್ರತಿನಿಧಿಗಳು ,ಡಿಸಿ ಎಸ್ ಪಿಗೆ ವಿದ್ಯಾರ್ಥಿನಿ ಯರು ಮಾಹಿತಿ ನೀಡಿದ್ದಾರೆ. ಎಲ್ಲಾ ಸಿಸಿಟಿವಿ ದೃಶ್ಯ, ಮೊಬೈಲ್ ಗಳೆಲ್ಲವನ್ನು ಎಫ್ ಎಸ್ ಎಲ್ ಗೆ ಕಳುಹಿಸಬೇಕು. ಯಾರನ್ನೂ ಇಲ್ಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.