ಶ್ರೀಲಂಕಾದಿಂದ ಭಾರತಕ್ಕೆ ಬಂದು Facebook ಗೆಳೆಯನನ್ನು ಮದುವೆಯಾದ ಯುವತಿ!
ಆಂಧ್ರ ಪ್ರದೇಶ: ಪಾಕಿಸ್ತಾನದ ಸೀಮಾ ಹೈದರ್, ಭಾರತದ ಅಂಜು.. ಗಡಿದಾಟಿದ ಪ್ರೇಮ ಕಥೆಗಳ ಸುದ್ದಿ ಚರ್ಚೆಯಲ್ಲಿರುವಾಗಲೇ ಅಂಥದ್ದೇ ಮತ್ತೊಂದು ʼಫೇಸ್ ಬುಕ್ʼ ಲವ್ ಸ್ಟೋರಿ ಬೆಳಕಿಗೆ ಬಂದಿದೆ.
ಶ್ರೀಲಂಕಾ ಮೂಲದ 25 ವರ್ಷದ ಯುವತಿ ವಿಕನೇಶ್ವರಿ ಶಿವಕುಮಾರ, ಆಂಧ್ರ ಪ್ರದೇಶದ 28 ವರ್ಷದ ಲಕ್ಷ್ಮಣ್ ಎನ್ನುವ ಯುವಕನ ʼಫೇಸ್ ಬುಕ್ʼ ಪ್ರೇಮ ಕಥೆಯಿದು. ಲಕ್ಷ್ಮಣ್ ಹಾಗೂ ವಿಕನೇಶ್ವರಿ ಇಬ್ಬರ ಪರಿಚಯವಾದದ್ದು, 2017 ರಲ್ಲಿ ಫೇಸ್ ಬುಕ್ ಮೂಲಕ. ಮೊದಲು ಫೇಸ್ ಬುಕ್ ಮೂಲಕ ಚಾಟಿಂಗ್ ಮಾಡಿ, ಸ್ನೇಹಿತರಾದ ಇವರು, ಆ ಬಳಿಕ ಆತ್ಮೀಯರಾದರು. ಇವರ ಆತ್ಮೀಯತೆ ಪ್ರೀತಿಗೆ ತಿರುಗಿತು. ಪರಸ್ಪರ ಪ್ರೀತಿಸುತ್ತಿದ್ದ ಇವರು ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ.
ಈ ಕಾರಣದಿಂದ ಶ್ರೀಲಂಕಾದಿಂದ ಆಂಧ್ರಕ್ಕೆ ವಿಕನೇಶ್ವರಿ ಪ್ರವಾಸಿ ವೀಸಾದೊಂದಿಗೆ ಜುಲೈ 8 ರಂದು ಬಂದಿದ್ದಾರೆ. ಇಬ್ಬರ ನಡುವಿನ ಪ್ರೀತಿಯ ವಿಚಾರ ಲಕ್ಷ್ಮಣ್ ಅವರ ಕುಟುಂಬಕ್ಕೆ ಮೊದಲೇ ತಿಳಿದಿತ್ತು. ಲಕ್ಷ್ಮಣ್ ಅವರ ಕುಟುಂಬದವರ ಸಮ್ಮುಖದಲ್ಲಿ ಜುಲೈ 20 ರಂದು ದೇವಸ್ಥಾನವೊಂದರಲ್ಲಿ ಇಬ್ಬರು ಮದುವೆಯಾಗಿದ್ದಾರೆ.
ಉಡುಪಿ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್, ಬೆದರಿಕೆ
ಉಡುಪಿ: ಟಾಯ್ಲೆಟ್ ವಿಡಿಯೋ ಚಿತ್ರೀಕರಣ (Udupi College Video Row) ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ (Protest) ಭಾಗಿಯಾಗಿ ಹೇಳಿಕೆ ನೀಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳು ಬಂದಿದೆ.
ಪ್ರತಿಭಟನೆಯ ವೇಳೆ ವಿದ್ಯಾರ್ಥಿನಿ ನೇತ್ರಜ್ಯೋತಿ ಕಾಲೇಜಿನ ಅವ್ಯವಸ್ಥೆ ವಿರುದ್ಧ ಮಾತನಾಡಿದ್ದರು. ಪ್ರತಿಭಟನೆಯಲ್ಲಿ ಭಾಗಿಯಾದ ನಂತರ ಜುಲೈ 28 ರಂದು ಜಿಗರ್ ಕೋಬ್ರಾ ಹೆಸರಿನ ಖಾತೆಯಿಂದ ವಿದ್ಯಾರ್ಥಿನಿಯ ಇನ್ಸ್ಟಾ ಖಾತೆಗೆ ಭಯಪಡಿಸುವ ರೀತಿಯ ಮೆಸೇಜ್ (Threatening Messages) ಬರಲು ಆರಂಭವಾಗಿದೆ.
ಮಾನಸಿಕ ನೆಮ್ಮದಿಗೆ ಭಂಗ ಉಂಟು ಮಾಡಲಾಗಿದೆ ಎಂದು ವಿದ್ಯಾರ್ಥಿನಿ ಹೇಳಿದ ಹಿನ್ನೆಲೆಯಲ್ಲಿ ಈ ಸಂದೇಶದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರಿಗೆ ಹಿಂದೂ ಸಂಘಟನೆಗಳು ಮಾಹಿತಿ ನೀಡಿದ್ದವು. ಕೇಂದ್ರ ಸಚಿವೆ ಮತ್ತು ಎಸ್ಪಿ ಸಮಾಲೋಚನೆ ಬಳಿಕ ಈಗ ಪ್ರಕರಣ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳ ಕಾಲೇಜಿನ ಡಿವಿಆರ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲು ಪೊಲೀಸ್ ಇಲಾಖೆ ಮುಂದಾಗಿದೆ. ವಿದ್ಯಾರ್ಥಿನಿಯರು ಹಾಗೂ ಪರಿಸರದಲ್ಲಿ ಆಪರೇಟ್ ಆದ ಮೊಬೈಲ್ಗಳ ಸಿಡಿಆರ್ ಪರಿಶೀಲನೆ ನಡೆಯುವ ಸಾಧ್ಯತೆಯಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ವಿಡಿಯೋ ಪತ್ತೆಯಾದ ನಂತರ ಸಮಗ್ರ ವಿಚಾರಣೆ ನಡೆಯಲಿದೆ.
ಆರೋಪಿತ ವಿದ್ಯಾರ್ಥಿನಿಯರ ಜೊತೆ ಮಾತನಾಡಲು ಹಲವು ಯುವಕರು ಕಾಲೇಜಿಗೆ ಬರುತ್ತಿದ್ದರು. ಇದು ತಮಾಷೆಗೆ ಮಾಡಿದ ವಿಡಿಯೋ ಅಲ್ಲ. ಇದು ಉದ್ದೇಶಪೂರ್ವಕ ಕೃತ್ಯ. ಹೀಗಾಗಿ ಕಾಲೇಜಿನ ಸಿಸಿಟಿವಿಗಳನ್ನು ಪರಿಶೀಲಿಸಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದರು.