ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Munesh Gurjar: ಪತಿ ಲಂಚ ಪಡೆದಿದ್ದಕ್ಕೆ ಜೈಪುರ ಮೇಯರ್‌ ಅಮಾನತು!

Twitter
Facebook
LinkedIn
WhatsApp
Munesh Gurjar
Jaipur Mayor Munesh Gurjar suspended :  ಜೈಪುರ: ಪತಿ ಲಂಚ ಪಡೆದು ಬಂಧನಕ್ಕೊಳಗಾದ ಬೆನ್ನಲ್ಲೇ ಜೈಪುರ ಮೇಯರ್‌ (Jaipur Mayor) ಮುನೇಶ್‌ ಗುರ್ಜಾರ್‌ ಅವರನ್ನು ರಾಜಸ್ಥಾನ (Rajasthan) ಸರ್ಕಾರ ವಜಾಗೊಳಿಸಿದೆ. ಈ ಬೆಳವಣಿಗೆಯು ಕಾಂಗ್ರೆಸ್‌ಗೆ (Congress) ಮುಜುಗರ ತಂದಿದೆ.

ಜೈಪುರ ಹೆರಿಟೇಜ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಆಗಿರುವ ಮುನೇಶ್ ಗುರ್ಜಾರ್ ಅವರ ಪತಿ ಸುಶೀಲ್ ಗುರ್ಜರ್ ಅವರನ್ನು ನಿನ್ನೆ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳವು, ಭೂ ಗುತ್ತಿಗೆಗೆ ಸಂಬಂಧಿಸಿದಂತೆ 2 ಲಕ್ಷ ರೂ. ಲಂಚ ಪಡೆದ ಆರೋಪದಲ್ಲಿ ಬಂಧಿಸಿದೆ. ಪರಿಣಾಮವಾಗಿ ಗುರ್ಜರ್ ಅವರನ್ನು ನಾಗರಿಕ ಸಂಸ್ಥೆಯ ಸ್ಥಾನದಿಂದ ವಜಾಗೊಳಿಸಲಾಗಿದೆ.

ಮೇಯರ್ ನಿವಾಸದಲ್ಲಿ ಅವರ ಪತಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಈ ಪ್ರಕರಣದಲ್ಲಿ ಮೇಯರ್ ಶಾಮೀಲಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರಬಹುದು ಎಂಬ ಕಾರಣಕ್ಕೆ ಮೇಯರ್‌ ವಜಾಗೊಂಡಿದ್ದಾರೆ.

ಲಂಚ ಪಡೆದ ಪ್ರಕರಣದಲ್ಲಿ ಎಸಿಬಿ ಸುಶೀಲ್ ಗುರ್ಜಾರ್ ಸಹಿತ ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ. ಸುಶೀಲ್ ಗುರ್ಜರ್ ತನ್ನ ಸಹಾಯಕರಾದ ನಾರಾಯಣ್ ಸಿಂಗ್ ಮತ್ತು ಅನಿಲ್ ದುಬೆ ಮೂಲಕ ಪ್ಲಾಟ್‌ಗಾಗಿ ಗುತ್ತಿಗೆ ಅರ್ಜಿಯನ್ನು ತ್ವರಿತವಾಗಿ ಅಂಗೀಕರಿಸಲು ದೂರುದಾರರಿಂದ 2 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಅಧಿಕಾರಿಗಳು ಬಲೆ ಬೀಸಿ ಬಂಧಿಸಿದ್ದಾರೆ. 

ಸುಶೀಲ್ ಗುರ್ಜರ್ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 40 ಲಕ್ಷಕ್ಕೂ ಹೆಚ್ಚು ನಗದು ಪತ್ತೆಯಾಗಿದೆ. ನಾರಾಯಣ ಸಿಂಗ್ ಅವರ ಮನೆಯಲ್ಲಿ 8 ಲಕ್ಷಕ್ಕೂ ಹೆಚ್ಚು ನಗದು ಪತ್ತೆಯಾಗಿದೆ. ನೋಟುಗಳನ್ನು ಎಣಿಸಲು ಬ್ಯಾಂಕ್‌ನಿಂದ ಎಣಿಕೆ ಯಂತ್ರ ತರಲಾಗಿತ್ತು.

ಕಾಂಗ್ರೆಸ್‌ನ ಪ್ರತಿಯೊಂದು ಧಾಟಿಯಲ್ಲಿ, ಮೇಲಿನಿಂದ ಕೆಳಗಿನವರೆಗೆ, ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ಮಾತ್ರ ಇದೆ" ಎಂದು ಗುರ್ಜರ್ ಬಂಧನದ ನಂತರ ರಾಜಸ್ಥಾನ ಬಿಜೆಪಿ ಮುಖ್ಯಸ್ಥ ಸಿಪಿ ಜೋಶಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist