ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಅವಕಾಶ
ಈ ಮೊದಲು ಪಡಿತರ ಚೀಟಿಯಲ್ಲಿನ ತಿದ್ದುಪಡಿಗೆ ಆಗಸ್ಟ್ 21 ಕೊನೆಯ ದಿನವಾಗಿತ್ತು. ಆದರೆ, ಸೋಮವಾರ ಸರ್ವರ್ ದೋಷದಿಂದಾಗಿ ಹಲವರು ತೊಂದರೆ ಅನುಭವಿಸಿದ ಕಾರಣ, ಸಾರ್ವಜನಿಕರು ಇನ್ನಷ್ಟು ಕಾಲಾವಕಾಶ ನೀಡುವಂತೆ ಬೇಡಿಕೆಯಿಟ್ಟಿದ್ದರು.
ಇದನ್ನು ಪರಿಗಣಿಸಿ, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಆಗಸ್ಟ್ 23ರವರೆಗೂ ಕಾಲಾವಕಾಶ ನೀಡಲಾಗಿತ್ತು. ಇದೀಗ, ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿಗಳನ್ನು ಸೆಪ್ಟೆಂಬರ್ 1 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸ್ವೀಕರಿಸಲಾಗುವುದು ಎಂದು ಹೇಳಲಾಗಿದೆ.
ಲೋಕಾಯುಕ್ತ ದಾಳಿ: ಕೆಆರ್ ಪುರ ತಹಶೀಲ್ದಾರ್ ಆಯ್ತು ಈಗ ಸರ್ವೆ ಸೂಪರ್ವೈಸರ್ ಅರೆಸ್ಟ್
ಬೆಂಗಳೂರು, (ಆಗಸ್ಟ್ 23): ಬೆಂಗಳೂರಿನ ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ ಸೂಪರ್ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ಅವರನ್ನು ಲೋಕಾಯುಕ್ತ(lokayukta) ಬಂಧಿಸಿದೆ. ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಿನ್ನೆ (ಆಗಸ್ಟ್ 23) ಶ್ರೀನಿವಾಸಮೂರ್ತಿ ಅವರ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸಮೂರ್ತಿ ಅವರನ್ನು ಲೋಕಾತಯುಕ್ತ ಬಂಧಿಸಿ ವಿಚಾರಣೆಗೊಳಪಡಿಸಿದೆ.
ಬೆಂಗಳೂರಿನ ಕಲ್ಕೆರೆ ನಿವಾಸದ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಶ್ರಿನಿವಾಸ್ ಸೋದರಿ ಹಾಗೂ ಸೋದರನ ಮನೆ ಸೇರಿದಂತೆ 14 ಕಡೆ ದಾಳಿ ಮಾಡಿದ್ದರು. ರಿಯಲ್ ಎಸ್ಟೇಟ್ನಲ್ಲೂ ಹೂಡಿಕೆ ಮಾಡಿರುವ ಬಗ್ಗೆ ದಾಖಲೆ ಲಭ್ಯವಾಗಿವೆ. ಹೀಗಾಗಿ ಶ್ರೀನಿವಾಸ್ ಅವರನ್ನು ಬಂಧಿಸಿದ್ದು, ಆಸ್ತಿ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಇನ್ನು ಶ್ರೀನಿವಾಸ್ ಅವರನ್ನು ಇಂದು (ಆಗಸ್ಟ್ 23) ಸಂಜೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ಆ ವೇಳೆ ತಮ್ಮ ವಶಕ್ಕೆ ಕೇಳಲಿದ್ದಾರೆ ಎಂದು ತಿಳಿದುಬಂದಿದೆ.