ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಗುದ್ದಿದ ಕಾರು ; ಗಂಭೀರ ಗಾಯಗೊಂಡಿದ್ದ ಮೂವರು ಮೃತ್ಯು!

Twitter
Facebook
LinkedIn
WhatsApp
ಸುಳ್ಯ : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಗುದ್ದಿದ ಕಾರು ; ಗಂಭೀರ ಗಾಯಗೊಂಡಿದ್ದ ಮೂವರು ಮೃತ್ಯು!

ಸುಳ್ಯ : ಅಡ್ಕಾರಿನಲ್ಲಿ ಹೊಟೇಲ್ ಕರಾವಳಿ ಬಳಿ ಇಂದು ಬೆಳ್ಳಂಬೆಳಗ್ಗೆ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಗಾಯಗೊಂಡ ಕಾರ್ಮಿಕರ ಪೈಕಿ ಮೂವರು ಸಾವನ್ನಪ್ಪಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರು ಕೆಲಸದ ನಿಮಿತ್ತ ನಿನ್ನೆ ಅಡ್ಕಾರಿಗೆ ಆಗಮಿಸಿ ಕರಾವಳಿ ಹೋಟೆಲ್ ಎದುರುಗಡೆ ಇರುವ ಅಂಗಡಿಯೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಇಂದು ಬೆಳಿಗ್ಗೆ ಅವರಲ್ಲಿ ಚಂದ್ರಪ್ಪ, ರೇಗಪ್ಪ, ವೆಂಕಪ್ಪ, ಮಾಂತೇಶ್ ಎಂಬವರು ಕಾರ್ಮಿಕರು ರಸ್ತೆ ಬದಿ ನಿಂತಿದ್ದರೆನ್ನಲಾಗಿದೆ.

ಬೆಳಗ್ಗೆ ಹುಣಸೂರು ಕಡೆಯಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಂದು ರಸ್ತೆ ಬದಿ ನಿಂತಿದ್ದ ಈ ಕಾರ್ಮಿಕರಿಗೆ ಡಿಕ್ಕಿ ಹೊಡೆದು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿ ಹೊಡೆಯಿತು.

ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರಿಗೂ ಗಾಯಗಳಾಗಿದ್ದು ಮೂವರಿಗೆ ಗಂಭೀರ ಗಾಯಗಳಾಗಿತ್ತು. ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಈ ಪೈಕಿ ಚಂದ್ರಪ್ಪ ಅಲ್ಲಿ ಸಾವನ್ನಪ್ಪಿದ್ದರು. ವೆಂಕಪ್ಪರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು ಅವರಿಗೆ ಸುಳ್ಯದಲ್ಲೇ ಚಿಕಿತ್ಸೆ ಕೊಡಿಸಲಾಯಿತು. ರೇಗಪ್ಪ, ಮಾಂತೇಶ್ ಅವರನ್ನು ಮಂಗಳೂರಿಗೆ ಕೊಂಡೊಯ್ಯಲಾಗಿದ್ದು, ಅವರಿಬ್ಬರೂ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ

ಸಂಪಾಜೆ – ವಾಹನ ಡಿಕ್ಕಿ ಕಾಡು ಹಂದಿ ಸಾವು..!!

ಪುತ್ತೂರು ಅಗಸ್ಟ್ 31: ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಭಾರೀ ಗಾತ್ರದ ಕಾಡು ಹಂದಿ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ಸಂಪಾಜೆಯ ಅರಣ್ಯಾಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಕಾಡು ಹಂದಿಯನ್ನು ಕಲ್ಲುಗುಂಡಿಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು