ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುಪಿಐ ಪಾವತಿ ವಿಧಾನ ಪರಿಚಯಿಸುವ ಸಾಧ್ಯತೆ!

Twitter
Facebook
LinkedIn
WhatsApp
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುಪಿಐ ಪಾವತಿ ವಿಧಾನ ಪರಿಚಯಿಸುವ ಸಾಧ್ಯತೆ!

ಬೆಂಗಳೂರು, ಸೆ.03: ಪ್ರಯಾಣಿಕರಿಗೆ ಸಹಾಯವಾಗಲೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) UPI ಆಧಾರಿತ ಪಾವತಿಗಳನ್ನು ಪರಿಚಯಿಸಲು ಮುಂದಾಗಿದೆ. 5ಜಿ ಯುಗದಲ್ಲಿ ಪಾರ್ಸ್​ನಲ್ಲಿ ಹಣ ಇಟ್ಟುಕೊಂಡು ಓಡಾಡುವವರ ಸಂಖ್ಯೆ ಕಡಿಮೆ. ಹೀಗಾಗಿ ಪ್ರಯಾಣಿಕರಿಗೆ ತೊಂದರೆ ಆಗಬಾರದೆಂದು ಕೆಎಸ್​ಆರ್​ಟಿಸಿ ಹೊಸ ಪ್ರಯೋಗಕ್ಕಿಳಿದಿದೆ. ಇನ್ಮುಂದೆ ಕರ್ನಾಟಕದ ಸರ್ಕಾರಿ ಬಸ್​ಗಳಲ್ಲಿ UPI ಬಳಸಿ ಟಿಕೆಟ್ ಖರೀದಿಸಬಹುದು.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC)ದಲ್ಲಿ ಯುಪಿಐ ಆಧಾರಿತ ಪಾವತಿಯ ಪ್ರಾಯೋಗಿಕ ಹಂತ ನಡೆಯುತ್ತಿದೆ. ಪ್ರಯಾಣಿಕರು ಟಿಕೆಟ್ ಖರೀದಿಸುವಾಗ ಚಿಲ್ಲರೆ ಸಮಸ್ಯೆ ಹಾಗೂ ಹಾರ್ಡ್​ ಕ್ಯಾಶ್ ಸಮಸ್ಯೆಗಳನ್ನು ಎದುರಿಸುತ್ತಾರೆ. ಹೀಗಾಗಿ ಪ್ರಯಾಣಿಕರಿಗೆ ಗೊಂದಲ ಅಥವಾ ತೊಂದರೆ-ಮುಕ್ತ ಅನುಭವ ನೀಡಲು NWKRTC ಯುಪಿಐ ಪೇಮೆಂಟ್​ಗೆ ಚಾಲನೆ ಕೊಟ್ಟಿದೆ. ಇನ್ನು ಎಲ್ಲಾ KSRTC ಬಸ್‌ಗಳಲ್ಲಿಯೂ ಯುಪಿಐ ಆಧಾರಿತ ಪಾವತಿಯನ್ನು ಪರಿಚಯಿಸಲು ಸಿದ್ಧತೆ ನಡೆದಿದೆ. NWKRTC ಪ್ರಾಯೋಗಿಕ ಹಂತದಲ್ಲಿ ಎದುರಾಗುವ ಗೊಂದಲ ಸಮಸ್ಯೆಗಳನ್ನು ಬಗೆಹರಿಸಿ ಉಳಿದ ರಸ್ತೆ ಸಾರಿಗೆಗಳಲ್ಲಿ ಯುಪಿಐ ಪೇಮೆಂಟ್ ಅಳವಡಿಸಲು ಸಿದ್ಧತೆ ನಡೆದಿದೆ.

NWKRTCಯಲ್ಲಿ ಶುಕ್ರವಾರ ಪ್ರಾರಂಭಿಸಲಾದ ಪ್ರಾಯೋಗಿಕ ಚಾಲನೆಯಲ್ಲಿ, ಪ್ರಯಾಣಿಕರು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಟಿಕೆಟ್ ಹಣವನ್ನು ಪಾವತಿಸುತ್ತಿದ್ದಾರೆ. ಈ ಹಿಂದೆ ಅನೇಕ ಬಾರಿ ಅನೇಕ ಪ್ರಯಾಣಿಕರು ಬಸ್​ಗಳಲ್ಲಿ ಆನ್ಲೈಲ್ ಪೇಮೆಂಟ್​ ಸೇವೆ ಪರಿಚಯಿಸಲು ಬಸ್ ನಿಗಮಗಳಿಗೆ ಡಿಮ್ಯಾಂಡ್ ಮಾಡಿದ್ದರು. ಕಳಪೆ ಇಂಟರ್ನೆಟ್ ಸಂಪರ್ಕ ಮತ್ತು ಇತರ ತಾಂತ್ರಿಕ ದೋಷಗಳಿಂದ ಇದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಸದ್ಯ ಈಗ ಈ ಸಮಸ್ಯೆಗೆ ಪರಿಹಾರ ಸಿಕ್ಕಿದೆ.

ಪರ್ಸ್​ನಲ್ಲಿ ಹಾರ್ಡ್ ಕ್ಯಾಶ್ ಇಲ್ಲದ ಕಾರಣ ಟಿಕೆಟ್ ಖರೀದಿಸಿಲ್ಲ ಎಂದು ಬಸ್ ಹತ್ತಿದ್ದ ಪ್ರಯಾಣಿಕರನ್ನು ರಸ್ತೆ ಮಧ್ಯೆಯೇ ಇಳಿಸಿ ಹೋದ ನಿದರ್ಶನಗಳು ಅನೇಕ. ತಳ್ಳುಗಾಡಿ, ತರಕಾರಿ ಮಾರಾಟಗಾರರು ಅಥವಾ ರಸ್ತೆಬದಿಯ ಪಾನಿ ಪುರಿ ಅಂಗಡಿಯವನ ಬಳಿಯೂ ಫೋನ್ ಪೇ, ಗೂಗಲ್ ಪೇ ಇರುತ್ತೆ. ಆದ್ರೆ ಸರ್ಕಾರಿ ಬಸ್​ಗಳಲ್ಲಿ ಮಾತ್ರ ಈ ಸೌಲಭ್ಯವಿರಲಿಲ್ಲ. ಸದ್ಯ ಈಗ ಈ ಬಗ್ಗೆ ಸಾರಿಗೆ ನಿಗಮ ತಲೆ ಕೆಡಿಸಿಕೊಂಡಿದ್ದು ಪ್ರಯೋಗಿಕ ಹಂತವನ್ನು ಆರಂಭಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist