BMTC ಬಸ್ನಲ್ಲಿ ರಾತ್ರಿ ಪ್ರಯಾಣದ ಹೆಚ್ಚುವರಿ ಟಿಕೆಟ್ ಶುಲ್ಕ ರದ್ದು!
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಪ್ರಯಾಣಿಸುವ ಪ್ರಾಯಣಿಕರಿಗೆ ಸಾಮಾನ್ಯ ದರಕ್ಕಿಂತ 1.5 ಪಟ್ಟು ಹೆಚ್ಚು ಹಣ ಪಡೆಯುತ್ತಿತ್ತು. ಆದರೆ ಶೀಘ್ರದಲ್ಲೇ ಇದನ್ನು ರದ್ದುಪಡಿಸಲಾಗುವುದು ಎಂದು ಸಾರಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದರು. ಇನ್ನು ಸೆಪ್ಟೆಂಬರ್ 25ಕ್ಕೆ ಬಿಎಂಟಿಸಿ ಆರಂಭವಾಗಿ 25 ವರ್ಷ ಪೂರೈಸಲಿದೆ. ಈ ರಜತ ಮಹೋತ್ಸವ ದಿನದಂದೇ ‘ನಮ್ಮ ಬಿಎಂಟಿಸಿ (Namma BMTC)’ ಬಸ್ ಟ್ರ್ಯಾಕಿಂಗ್ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಸೋಮವಾರ ನಗರದ ಕಲಾಸಿಪಾಳ್ಯ ಬಸ್ ನಿಲ್ದಾಣವನ್ನು ಪರಿಶೀಲಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು ಈ ಆ್ಯಪ್ ಮೂಲಕ ಪ್ರಯಾಣಿಕರು ಬಿಎಂಟಿಸಿ ಬಸ್ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ. ಮತ್ತು ಈ ಆ್ಯಪ್ನಲ್ಲಿ ಪ್ರಯಾಣದ ಟಿಕೆಟ್ ಕೂಡ ಕೊಂಡುಕೊಳ್ಳಬಹುದಾಗಿದೆ ಎಂದರು.
“ಈ ಆ್ಯಪ್ ಅನ್ನು ಆ್ಯಪ್ ಅನ್ನು 2022 ರ ಡಿಸೆಂಬರ್ನಲ್ಲಿ ಮತ್ತು ನಂತರ 2023 ರ ಜನವರಿ ಮತ್ತು ಮಾರ್ಚ್ನಲ್ಲಿ ಪ್ರಾರಂಭಿಸಲು ನಿರೀಕ್ಷಿಸಲಾಗಿತ್ತು. ಆದರೆ ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳನ್ನು ಸರಿಪಡಿಸಿ ಅನಾವರಣಗೊಳಿಸಲು ವಿಳಂಬವಾಯಿತು.”
ಇತ್ತೀಚಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKSRTC) ಬಸ್ಗಳಲ್ಲಿ ಯುಪಿಐ ಮೂಲಕ ಟಿಕೆಟ್ ಕೊಂಡುಕೊಳ್ಳುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಗಿದೆ. ಇದು ಯಶಸ್ವಿಯಾದರೇ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳಲ್ಲೂ ಪರಿಚಯಿಸಲಾಗುವುದು ಎಂದು ತಿಳಿಸಿದರು.
ದೇಶದ ಮೊದಲ ಭೂಗತ ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಥಾಪನೆ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ದೇಶದ ಮೊದಲ ಭೂಗತ ವಿದ್ಯುತ್ ಪರಿವರ್ತಕ (Transformer) ಕೇಂದ್ರವನ್ನು ಮಂಗಳವಾರ ಇಂಧನ ಸಚಿವ ಕೆ.ಜೆ.ಜಾರ್ಜ್ (KJ George) ಉದ್ಘಾಟಿಸಿದರು. ಮಲ್ಲೇಶ್ವರಂನ 15ನೇ ಅಡ್ಡರಸ್ತೆಯಲ್ಲಿ ಬೆಸ್ಕಾಂ (BESCOM) ಹಾಗೂ ಬಿಬಿಎಂಪಿ (BBMP) ಸಹಭಾಗಿತ್ವದಲ್ಲಿ 1.98 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಇದು 500 ಕೆ.ವಿ.ಎ ಸಾಮರ್ಥ್ಯದ ಟ್ರಾನ್ಸ್ಫಾರ್ಮ ಇದಾಗಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಮಾತ್ರ ವಿದ್ಯುತ್ ಪರಿವರ್ತಕ ಭೂಗತ ಕೇಂದ್ರಗಳಿವೆ. ಅಲ್ಲಿನ ಸರ್ಕಾರಗಳು ಸಾರ್ವಜನಿಕರ ಅನುಕೂಲತೆ ಮತ್ತು ಸುರಕ್ಷತೆ ಗಮನದಲ್ಲಿಟ್ಟುಕೊಂಡು ಈ ಕೇಂದ್ರಗಳನ್ನು ನಿರ್ಮಾಣ ಮಾಡಿವೆ. ಇದೀಗ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ದೇಶದಲ್ಲಿ ಮೊದಲ ಬಾರಿಗೆ ಭೂಗತ ವಿದ್ಯುತ್ ಪರಿವರ್ತಕ ಕೇಂದ್ರ ಸ್ಥಾಪಿಸಲಾಗಿದೆ.
ಜನರ ಸುರಕ್ಷತೆ ಹಾಗೂ ಅನುಕೂಲದ ದೃಷ್ಟಿಯಿಂದ ಭೂಮಿಯ ಕೆಳಭಾಗದಲ್ಲಿ ಕೊಠಡಿಯನ್ನು ನಿರ್ಮಿಸಿ ಅದರಲ್ಲಿ, 30 ಎಂಎಂನ ಸಿಮೆಂಟ್ ಕಟ್ಟೆ ನಿರ್ಮಿಸಿ ಅದರ ಮೇಲೆ ವಿದ್ಯುತ್ ಟ್ರಾನ್ಸ್ ಫಾರ್ಮ್ರಗಳನ್ನು ಅಳವಡಿಸಲಾಗುತ್ತದೆ. ಸದ್ಯ ಮಲ್ಲೇಶ್ವರಂನಲ್ಲಿ ಸ್ಥಾಪಿಸಿರುವ ಈ ಕೇಂದ್ರದಲ್ಲಿ ರಸ್ತೆಯ ಮೇಲೈನಿಂದ 10 ಅಡಿ ಆಳದಲ್ಲಿ ಪರಿವರ್ತಕ ಅಳವಡಿಸಲಾಗಿದೆ. ಬೆಸ್ಕಾಂನಿಂದ ವಿದ್ಯುತ್ ಸಂಬಂಧಿತ ಕಾಮಗಾರಿ ಹಾಗೂ ಬಿಬಿಎಂಪಿಯಿಂದ ಸಿವಿಲ್ ಕಾಮಗಾರಿಗಳನ್ನು ಮಾಡಲಾಗಿದೆ. ಈ ಕೇಂದ್ರವು 500 ಕೆವಿಎ ಸಾಮರ್ಥ್ಯದ ತೈಲರಹಿತ ಟ್ರಾನ್ಸ್ಫಾರ್ಮರ್, 8 ವೇ ಸಾಲಿಡ್ ಸೈಟ್ ರಿಂಗ್ ಮೇನ್ ಯೂನಿಟ್, 5-ವೇ ಎಲ್.ಟಿ ವಿತರಣಾ ಪೆಟ್ಟಿಗೆ, ಯುಪಿಎಸ್, ವಾಟರ್ ಪಂಪ್ ಮತ್ತು ಹವಾ ನಿಯಂತ್ರಣ ವ್ಯವಸ್ಥೆ ಇದೆ. ಸಿವಿಲ್ ಕಾಮಗಾರಿಗೆ ಬಿಬಿಎಂಪಿ 64 ಲಕ್ಷ ರೂ. ನೀಡಿದೆ. 365 ದಿನಗಳಲ್ಲಿ ಯೋಜನೆ ಪೂರ್ಣಗೊಂಡಿದೆ ಎಂದು ಬೆಸ್ಕಾಂ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದುರಸ್ತಿ ವೇಳೆ ಒಳ ಹೋಗಲು ವ್ಯವಸ್ಥೆ ಇದೆ. ಈ ಚೇಂಬರ್ ನೀರಿನ ಸಂಪ್ ರೀತಿ ಇದ್ದು, ನಾಲ್ಕೂ ಕಡೆ ಕಾಂಕ್ರೀಟ್ ಗೋಡೆಯಿಂದ ಮುಚ್ಚಲಾಗಿದೆ. ಇದರಿಂದ ಈ ಕೇಂದ್ರದ ಮೇಲೆ ಪಾದಚಾರಿಗಳು ಸಂಚರಿಸುವುದರಿಂದ ಸಮಸ್ಯೆ ಆಗಲ್ಲ, ಒಂದು ವೇಳೆ ಟ್ರಾನ್ಸ್ ಫಾರ್ಮರ್ ಸ್ಫೋಟದಂತಹ ಘಟನೆ ನಡೆದರೂ ಕೇಂದ್ರದ ಮೇಲ್ಬಾಗದಲ್ಲಿ ಯಾವುದೇ ಅವಘಡ ಆಗುವುದಿಲ್ಲ. ವಿದ್ಯುತ್ ಅವಘಡ, ವಿದ್ಯುತ್ ವ್ಯತ್ಯಯ ತಡೆಯಲು ಸಹಕಾರಿಯಾಗಲಿದೆ.