ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜೆಡಿಎಸ್ ಜೊತೆ ಮೈತ್ರಿ ಖಚಿತ ಪಡಿಸಿದ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬೊಮ್ಮಾಯಿ ; ಜೆಡಿಎಸ್ ಗೆ ಎಷ್ಟು ಸೀಟು?

Twitter
Facebook
LinkedIn
WhatsApp
ಜೆಡಿಎಸ್ ಜೊತೆ ಮೈತ್ರಿ ಖಚಿತ ಪಡಿಸಿದ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬೊಮ್ಮಾಯಿ ; ಜೆಡಿಎಸ್ ಗೆ ಎಷ್ಟು ಸೀಟು?

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಆದ್ರೆ, ಕೆಲ ಕಾರಣಾಂತರಗಳಿಂದ ದಳಪತಿಗಳು ಮೈತ್ರಿಯಿಂದ ಒಂದೆಜ್ಜೆ ಹಿಂದಿಟ್ಟಿದ್ದರು. ಇದೀಗ ಮತ್ತೆ ಬಿಜೆಪಿ- ಜೆಡಿಎಸ್ ಮೈತ್ರಿ ಮತ್ತೆ ಮುನ್ನಲೆಗೆ ಬಂದಿದ್ದು, ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಪಕ್ಕಾಗಿದೆ. ಹೌದು… ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆ ಎದುರಿಸುವುದು ಖಚಿತವಾಗಿದೆ. ಈ ಬಗ್ಗೆ ಸ್ವತಃ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ  ಹಾಗೂ ಬಸವರಾಜ ಬೊಮ್ಮಾಯಿ ಖಚಿತಪಡಿಸಿದ್ದಾರೆ. ಇನ್ನು ಈ ಮೈತ್ರಿ ಸುದ್ದಿ ಬೊಮ್ಮಾಯಿ-ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಅಮಿತ್​ ರವಾನಿಸಿದ ಮಾಹಿತಿಯನ್ನು ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಇಂದು (ಸೆಪ್ಟೆಂಬರ್ 08) ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜೆಡಿಎಸ್​ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು, ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮಾಹಿತಿ ರವಾನಿಸಿದ್ದು, JDS ಜೊತೆಗಿನ ಮೈತ್ರಿ ಪಕ್ಷಕ್ಕೆ ಸಹಕಾರಿಯಾಗಲಿದೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಈ ಮೈತ್ರಿ ಮಾತುಕತೆ ಬಹಳ ಅವಶ್ಯಕ, ಮಹತ್ವದ್ದಾಗಿದೆ. ಈ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಒಂದಾಗುವುದು ಮುಖ್ಯವಾಗಿತ್ತು. ಹೀಗಾಗಿ ನಾವು ಒಗ್ಗಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಮೈತ್ರಿ ಸ್ಥಾನಗಳ ಹಂಚಿಕೆ ಬಗ್ಗೆ ಮುಂದೆ ತೀರ್ಮಾನ ಆಗಲಿದೆ. ನಮ್ಮ ಹೈಕಮಾಂಡ್ ಇದರ ತೀರ್ಮಾನ ಮಾಡಲಿದೆ ಎಂದು ಹೇಳಿದರು.

 4 ಸೀಟಿಗೆ ಓಕೆ ಎಂದ ಅಮಿತ್ ಶಾ

ಹಾಸನ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ತಮಗೆ ಕೊಡಿ ಎಂದು ದೇವೇಗೌಡ್ರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಆದ್ರೆ, ಇದಕ್ಕೆ ಅಮಿತ್‌ ಶಾ ಸದ್ಯಕ್ಕೆ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಮಂಡ್ಯವನ್ನು ಬಿಟ್ಟು ಇನ್ನುಳಿದ ನಾಲ್ಕು ಕ್ಷೇತ್ರಗಳನ್ನು ನೀಡಲು ಶಾ ಗ್ರೀನ್​ ಸಿಗ್ನಲ್​ ನೀಡಿದ್ದು, ಇನ್ನೊಂದು ಸೀಟಿನ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸೋಣ ಎಂದಿದ್ದಾರೆ ಎಂದು ತಿಳಿದುಬಂದಿದೆ

ಇದರೊಂದಿಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಪಕ್ಕಾ ಆದಂತಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಜಂಟಿಯಾಗಿ ಕಣಕ್ಕಳಿಯಲಿವೆ. ಆದ್ರೆ, ಸೀಟು ಹಂಚಿಕೆ ಬಗ್ಗೆ ಚರ್ಚೆಯಾಗಿದೆ ಆದರೂ ಇನ್ನೂ ಫೈನಲ್ ಆಗಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist