ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಗಸ್ಟ್​ ತಿಂಗಳಲ್ಲಿ ಮತ್ತೆ ಪಿಯು ಪರೀಕ್ಷೆ?

Twitter
Facebook
LinkedIn
WhatsApp
ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದಲ್ಲಿ ನಾನು ಬೆಂಬಲ ನೀಡುತ್ತೇನೆ : ಹೆಚ್‌ಡಿಡಿ

ಬೆಂಗಳೂರು: ಕೊರೋನಾ ಮಹಾಮಾರಿ ಹಿನ್ನೆಲೆ, ಶಿಕ್ಷಣ ಇಲಾಖೆ ಈ ವರ್ಷ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಪಾಸ್ ಮಾಡಿತ್ತು. ಫಲಿತಾಂಶಕ್ಕೆ ಎಸ್​ಎಸ್​ಎಲ್​ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿತ್ತು.
ಅದರಂತೆ ಜು.20ರಂದು ದ್ವಿತೀಯ ಪಿಯು ಫಲಿತಾಂಶವನ್ನು ಪ್ರಕಟ ಮಾಡಲಾಗಿತ್ತು. ರಿಸಲ್ಟ್​ ನೀಡುವ ಮುನ್ನವೇ ಪಿಯು ಬೋರ್ಡ್​ ವಿದ್ಯಾರ್ಥಿಗಳಿಗೆ ಸೂಚನೆಯೊಂದನ್ನು ನೀಡಿತ್ತು. ಈ ಫಲಿತಾಂಶವನ್ನು ತಿರಸ್ಕರಿಸುವ ವಿದ್ಯಾರ್ಥಿಗಳಿಗೆ ಆಗಸ್ಟ್​ ತಿಂಗಳಲ್ಲಿ ಮತ್ತೆ ಪರೀಕ್ಷೆ ನಡೆಸಲಾಗುತ್ತದೆ. ಒಂದು ವೇಳೆ ಅಲ್ಲಿ ಅಂಕಗಳು ಕಡಿಮೆ ಬಂದರೆ, ಮತ್ತೆ ಅವರಿಗೆ ಹಳೆ ಫಲಿತಾಂಶ ನೀಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು.

ಈಗ ಬರೋಬ್ಬರಿ 878 ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ನೀಡಿದ ಫಲಿತಾಂಶವನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ಇವರಿಗೆ ಇದೇ ಆಗಸ್ಟ್ 19ರಂದು ಪಿಯುಸಿ ಪರೀಕ್ಷೆಯನ್ನು ನಡೆಸಲು ಪಿಯು ಬೋರ್ಡ್​ ನಿರ್ಧಾರ ಮಾಡಿದೆ. ಈ ವಿದ್ಯಾರ್ಥಿಗಳು ಪರೀಕ್ಷೆ ಬರೆದ ಬಳಿಕ ಆ ಫಲಿತಾಂಶವೂ ಸಮಾಧಾನ ತಂದಿಲ್ಲ ಎಂದರೆ, ಮತ್ತೆ ಹಳೇ ಫಲಿತಾಂಶ ಸಿಗುವುದಿಲ್ಲ.
ಶಿಕ್ಷಣ ಇಲಾಖೆ ಸುಮಾರು 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪಾಸ್ ಮಾಡಿತ್ತು. ಇದೀಗ 878 ವಿದ್ಯಾರ್ಥಿಗಳು ಫಲಿತಾಂಶ ಸಮಾಧಾನ ತಂದಿಲ್ಲ ಎಂದು ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ಬಳ್ಳಾರಿ ಜಿಲ್ಲೆಯೊಂದರಲ್ಲೇ 221 ವಿದ್ಯಾರ್ಥಿಗಳು ಪಿಯು ಫಲಿತಾಂಶವವನ್ನು ತಿರಸ್ಕಾರ ಮಾಡಿದ್ದಾರೆ.

ಜಿಲ್ಲೆಯ 221 ಫ್ರೆಶರ್​ ಹಾಗೂ 16 ರಿಪೀಟರ್ಸ್ ವಿದ್ಯಾರ್ಥಿಗಳು ಪಿಯು ಫಲಿತಾಂಶವನ್ನು ತಿರಸ್ಕರಿಸಿದ್ದಾರೆ. ಇದರಲ್ಲಿ ಕೊಟ್ಟೂರು ಇಂದು ಪಿಯು ಕಾಲೇಜಿನ 104 ವಿದ್ಯಾರ್ಥಿಗಳು ಫಲಿತಾಂಶ ಸಮಾಧಾನ ತಂದಿಲ್ಲ ಎಂದು ತಿರಸ್ಕಾರ ಮಾಡಿದ್ದಾರೆ. 

ಪಿಯು ಬೋರ್ಡ್ ನೀಡಿದ ಅಂಕಗಳಿಗೆ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮಗೆ SSLC, 1st PUC ಅಂಕ ಕಡಿಮೆ ಇದೆ. ಹೀಗಾಗಿ ಪರೀಕ್ಷೆ ಬರೆದೇ ಇನ್ನೂ ಹೆಚ್ಚಿನ ಅಂಕ ಪಡೆಯುವ ಕಾರಣದಿಂದ ಫಲಿತಾಂಶ ತಿರಸ್ಕರಿಸಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಕೊರೋನಾ ಹಿನ್ನೆಲೆ ಈ ವರ್ಷ ಪರೀಕ್ಷೆ ನಡೆದಿಲ್ಲ. ಮೂರು ವರುಷದ ಅಂಕ ಪರಿಗಣಿಸಿ ಫಲಿತಾಂಶ ನೀಡಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು