ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ- ಕಾಂಗ್ರೆಸ್ ಪೋಸ್ಟರ್ ವಾರ್..!

Twitter
Facebook
LinkedIn
WhatsApp
ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ- ಕಾಂಗ್ರೆಸ್ ಪೋಸ್ಟರ್ ವಾರ್..!

ನವದೆಹಲಿ, ಅಕ್ಟೋಬರ್‌ 05: ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಪೋಸ್ಟರ್‌ ವಾರ್‌ ಶುರುವಾಗಿದ್ದು, ಕಾಂಗ್ರೆಸ್ ಯುವನಾಯಕ ಹಾಗೂ ಸಂಸದ ರಾಹುಲ್ ಗಾಂಧಿಯವರನ್ನ ರಾವಣನಿಗೆ ಹೋಲಿಸಿ ಬಿಜೆಪಿ ಕಟುವಾಗಿ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ರಾಹುಲ್ ಗಾಂಧಿ ನವಯುಗದ ರಾವಣ ಎಂದು ಟೀಕಿಸಿರುವ ಪೋಸ್ಟರ್ ಹಂಚಿಕೊಂಡಿದೆ. ‘ರಾಹುಲ್ ಗಾಂಧಿಯವರು ರಾಕ್ಷಸರ ರಾಜ ರಾವಣನ ‘ನವ ಯುಗದ’ ಅವತಾರವೆಂದು ಚಿತ್ರಿಸುವ ಪೋಸ್ಟರ್ ಅನ್ನು ಬಿಜೆಪಿ ಟ್ವೀಟ್‌ ನಲ್ಲಿ ಹಂಚಿಕೊಂಡಿದ್ದು, ಇದೀಗ ವಿವಾದವನ್ನು ಹುಟ್ಟುಹಾಕಿದೆ. ನವ ಯುಗದ ರಾವಣ ಇಲ್ಲಿದ್ದಾನೆ. ಅವನು ದುಷ್ಟ, ಧರ್ಮ ವಿರೋಧಿ, ರಾಮ ವಿರೋಧಿ ಮತ್ತು ಅವನ ಗುರಿ ಭಾರತವನ್ನು ನಾಶಮಾಡುವುದು ಎಂದು ಬಿಜೆಪಿ ಕುಟುಕಿದೆ.

ಇನ್ನೂ ಫಿಲ್ಮಿ ಸ್ಟೈಲ್‍ನಲ್ಲಿ ಪೋಸ್ಟರ್ ರೂಪಿಸಿರುವ ಬಿಜೆಪಿ, ಚಿತ್ರದ ಟೈಟಲ್‍ಗೆ ‘Ravan, a Congress party production, directed by George Soros’ ಎಂದು ಬರೆದುಕೊಂಡಿದೆ. ಇನ್ನೂ ಬಿಜೆಪಿಯ ಈ ಪೋಸ್ಟರ್‌ ಗೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇತ್ತ ಕಾಂಗ್ರೆಸ್‌ ದೊಡ್ಡ ಸುಳ್ಳುಗಾರ” ಎಂಬ ಶೀರ್ಷಿಕೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ಟ್ವೀಟ್‌ ನಲ್ಲಿ ಪೋಸ್ಟ್ ಮಾಡಿದೆ. ಶೀಘ್ರದಲ್ಲೇ ಚುನಾವಣಾ ರ್ಯಾಲಿ ಬರಲಿದೆ ಎಂದು ಕಾಂಗ್ರೆಸ್‌ ಟ್ವೀಟ್ ನಲ್ಲಿ ಹೇಳಿದೆ.

ನವಯುಗದ ರಾವಣ ಎಂದು ಸಂಸದ ರಾಹುಲ್‌ ಗಾಂಧಿ ಕುರಿತು ಬಿಜೆಪಿ ಪೋಸ್ಟ್‌ ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಿ.ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿಯವರನ್ನು ಬಿಜೆಪಿ ರಾವಣನಿಗೆ ಹೋಲಿಸಿದ ನಾಚಿಕೆಗೇಡಿನ ಗ್ರಾಫಿಕ್ ಅನ್ನು ಖಂಡಿಸಲು ಯಾವುದೇ ಪದಗಳಿಲ್ಲ. ಬಿಜೆಪಿಯ ಕೆಟ್ಟ ಉದ್ದೇಶಗಳು ಸ್ಪಷ್ಟವಾಗಿವೆ, ತನ್ನ ಅಜ್ಜಿ ಮತ್ತು ತಂದೆಯನ್ನು ಹತ್ಯೆಗಳಿಂದ ಕಳೆದುಕೊಂಡಿರುವ ಅವನನ್ನು ಅವರು ಕೊಲ್ಲಲು ಬಯಸುತ್ತಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯವರು ತಮ್ಮ ಕೆಟ್ಟ ರಾಜಕೀಯದಿಂದ ರಾಹುಲ್ ಅವರ SPG ರಕ್ಷಣೆಯನ್ನು ಹಿಂತೆಗೆದುಕೊಂಡರು. ಅವರನ್ನು ಅವರ ಸುರಕ್ಷಿತ ನಿವಾಸದಿಂದ ಹೊರಹಾಕಿದ ನಂತರ, ವಿನಂತಿಸಿದ ಮತ್ತೊಂದು ಮನೆಯನ್ನು ಅವರು ಮಂಜೂರು ಮಾಡಲಿಲ್ಲ. ಇದೆಲ್ಲವೂ ತಮ್ಮ ಉಗ್ರ ಟೀಕಾಕಾರರ ಬಾಯಿ ಮುಚ್ಚಿಸಲು ಬಿಜೆಪಿ ಮಾಡುತ್ತಿರುವ ಯೋಜಿತ ಪಿತೂರಿಯನ್ನು ಸೂಚಿಸುತ್ತದೆ. ಅವರ ದ್ವೇಷ ತುಂಬಿದ ಸಿದ್ಧಾಂತದ ತಿರುಳನ್ನು ಇದು ತಿಳಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.

https://x.com/BJP4India/status/1709819569450471817?s=20

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ