ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೇಗ ಹೋಗಿ ಎಂದು ಹೇಳಿದಕ್ಕೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ; ಐವರ ವಿರುದ್ಧ ಎಫ್​ಐಆರ್!

Twitter
Facebook
LinkedIn
WhatsApp
ಬೇಗ ಹೋಗಿ ಎಂದು ಹೇಳಿದಕ್ಕೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ; ಐವರ ವಿರುದ್ಧ ಎಫ್​ಐಆರ್!

ಮೈಸೂರು, ಅ.21: ಅರಮನೆ ನಗರಿ ಮೈಸೂರಿನಲ್ಲಿ ದಸರಾ (Mysuru Dasara) ಸಂಭ್ರಮ ಮನೆ ಮಾಡಿದೆ. ರಾಜ್ಯ, ಹೊರ ರಾಜ್ಯದಿಂದೆಲ್ಲ ಸಾವಿರಾರು ಪ್ರವಾಸಿಗರು ಆಗಮಿಸಿ ಮೈಸೂರಿನ ಅಂದವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇದರ ನಡುವೆ ಅಹಿತಕರ ಘಟನೆಯೊಂದು ನಡೆದಿದೆ. ಬೇಗ ಹೋಗಿ ಎಂದು ಹೇಳಿದಕ್ಕೆ ದಸರಾ ನೋಡಲು ಬಂದವರು ಪೊಲೀಸರ (Mysuru Police) ಮೇಲೆಯೇ ಹಲ್ಲೆ ನಡೆಸಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ವೈ.ರಾಜು, ಅರುಣ್ ಕೌಶಿಕ್ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ಬೆಂಗಳೂರಿನ ಐವರ ಮೇಲೆ ಎಫ್​ಐಆರ್ ದಾಖಲಾಗಿದೆ.

ಮೈಸೂರಿನ ಹಾರ್ಡಿಂಗ್ ಸರ್ಕಲ್ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ವೈ.ರಾಜು, ಅರುಣ್ ಕೌಶಿಕ್ ಅವರು ರಸ್ತೆಯಲ್ಲಿ ಜನಸಂದಣಿ ನಿಯಂತ್ರಿಸಲು ಜನರನ್ನು ಬೇಗ ಹೋಗುವಂತೆ ಹೇಳುತ್ತಿದ್ದರು. ಟ್ರಾಫಿಕ್​ ಜಾಮ್ ಆಗುತ್ತೆ ಮುಂದೆ ಹೋಗಿ. ಬೇಗ ಹೋಗಿ ಎಂದಿದ್ದಕ್ಕೆ ಐವರು ಸೇರಿಕೊಂಡು ಪೊಲೀಸರ ಮೇಲೆಯೇ ದೌರ್ಜನ್ಯ ಎಸಗಿದ್ದಾರೆ. ಘಟನೆ ಸಂಬಂದ ದಸರಾ ವೀಕ್ಷಣೆಗೆ ಬಂದಿದ್ದ ಬೆಂಗಳೂರು ಮೂಲದ ಉಮೇಶ್, ಹರೀಶ್, ಧ್ರುವ, ಲತಾ, ಗಾನವಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಬೈಕ್ ಕಳ್ಳತನ ಮಾಡ್ತಿದ್ದ ಆರೋಪಿಗಳ ಬಂಧನ

ಇನ್ನು ಮತ್ತೊಂದೆಡೆ ಬೆಂಗಳೂರಿನ ಪೂರ್ವ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಬೈಕ್ ಕಳ್ಳತನ ಮಾಡ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 50 ಲಕ್ಷಕ್ಕೂ ಹೆಚ್ಚು ಮೌಲ್ಯದ 60 ಬೈಕ್​ಗಳನ್ನ ಜಪ್ತಿ ಮಾಡಲಾಗಿದೆ.

ರಾಮಮೂರ್ತಿ ನಗರ, ಕಮರ್ಷಿಯಲ್ ಸ್ಟ್ರೀಟ್, ಹೆಣ್ಣೂರು ಪೊಲೀಸರು ಮೂರು ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳ್ಳರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಕಾನೂನು ಸಂಘರ್ಷಕ್ಕೆ ಒಳಗಾದ ನಾಲ್ವರು ಬಾಲಕರನ್ನು ಬಂಧಿಸಿದ್ದಾರೆ. ಬಂಧಿತರಿಂದ 27 ಬೈಕ್​ಗಳನ್ನು ಜಪ್ತಿ ಮಾಡಲಾಗಿದೆ. ಹೆಣ್ಣೂರು ಪೊಲೀಸರು ಮುಬಾರಕ್ ಎಂಬಾತನನ್ನ ಬಂಧಿಸಿ 9ಬೈಕ್ ಜಪ್ತಿ ಮಾಡಿದ್ದಾರೆ. ರಾಮಮೂರ್ತಿ ನಗರ ಪೊಲೀಸರು ಸೈಯದ್ ರಿಜ್ವಾನ್, ಮೊಹಮ್ಮದ್ ಸಲ್ಮಾನ್ ಎಂಬ ಇಬ್ಬರನ್ನ ಬಂಧಿಸಿ 16 ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ. ಪೂರ್ವ ವಿಭಾಗದಲ್ಲಿ ಇತ್ತೀಚೆಗೆ ದ್ವಿಚಕ್ರ ವಾಹನ ಕಳ್ಳತನ ಹೆಚ್ಚಾಗಿತ್ತು. ಈ ಬೆನ್ನಲ್ಲೇ ಸ್ಪೆಷಲ್ ಡ್ರೈವ್ ಮಾಡಿ ಹಲವರನ್ನು ಬಂಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist