ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ ಪೇಟೆಯಲ್ಲಿ ದಿಡೀರ್ ಭೂಕುಸಿತ; ಟ್ರಾನ್ಸ್ಫಾರ್ಮರ್ ಧರೆಗೆ ಬಿದ್ದು ತಪ್ಪಿದ ಭಾರಿ ಅನಾಹುತ!

Twitter
Facebook
LinkedIn
WhatsApp
ಸುಳ್ಯ ಪೇಟೆಯಲ್ಲಿ ದಿಡೀರ್ ಭೂಕುಸಿತ; ಟ್ರಾನ್ಸ್ಫಾರ್ಮರ್ ಧರೆಗೆ ಬಿದ್ದು ತಪ್ಪಿದ ಭಾರಿ ಅನಾಹುತ!

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ (Sullia) ಶುಕ್ರವಾರ ರಾತ್ರಿ ಏಕಾಏಕಿ ಭೂಕುಸಿತ (Landslide) ಸಂಭವಿಸಿದ್ದು, ಭಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ಸುಳ್ಯ ಪೇಟೆಯಲ್ಲಿರುವ ‘ಪರಿವಾರಕಾನ ಉಡುಪಿ ಗಾರ್ಡನ್’ ಹೋಟೆಲ್ ಬಳಿ ಭೂಕುಸಿತ ಸಂಭವಿಸಿದೆ. ಭೂಕುಸಿತವಾದ ಪಕ್ಕದಲ್ಲೇ ವಿದ್ಯುತ್ ಟ್ರಾನ್ಸ್​ಫಾರ್ಮರ್ ಇತ್ತು. ಭುಕುಸಿತವಾದ ಬೆನ್ನಲ್ಲೇ ಟ್ರಾನ್ಸ್​ಫಾರ್ಮರ್ ಧರಾಶಾಯಿಯಾಗಿದೆ. ಅದೃಷ್ಟವಶಾತ್ ವಿದ್ಯುತ್ ಕಂಬ ಹಾಗೂ ಟ್ರಾನ್ಸ್​ಫಾರ್ಮರ್ ಬೀಳುವ ಸಂದರ್ಭ ಪವರ್ ಕಟ್ ಆಗಿದ್ದ ಕಾರಣ ದುರಂತ ತಪ್ಪಿದೆ.

ದಿಢೀರ್ ಭೂಕುಸಿತವಾಗಿದ್ದರಿಂದ ಸುಳ್ಯದ ಜನತೆ ಬೆಚ್ಚಿ ಬಿದ್ದಿದೆ. ಘಟನಾ ಸ್ಥಳಕ್ಕೆ ಮೆಸ್ಕಾ ಸಿಬ್ಬಂದಿಗಳು ಆಗಮಿಸಿ ವಿದ್ಯುತ್ ಕಂಬ ತೆರವುಗೊಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ, ಭೂಕುಸಿತ ಉಂಟಾದ ಭಾಗಕ್ಕೆ ಯಾರೂ ಹೋಗದಂತೆ ತಡೆದಿದ್ದಾರೆ.

ಈ ಮಧ್ಯೆ, ಸುಳ್ಯವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಶುಕ್ರವಾರ ಮಳೆಯಾಗಿದೆ.

ನೆರೆಯ ಕೊಡಗು ಜಿಲ್ಲೆಯಲ್ಲಿಯೂ ಶುಕ್ರವಾರ ಸಂಜೆ ಹಾಗೂ ರಾತ್ರಿ ಭಾರೀ ಮಳೆಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ಸುತ್ತಮುತ್ತ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದೆ. ಮಡಿಕೇರಿ‌ ನಗರ, ಮೇಕೇರಿ, ಕಗ್ಗೋಡ್ಲು, ತಾಳತ್ಮನೆ ಸುತ್ತಮುತ್ತ ಮಳೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ