ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಾಲಕಿ ಮೇಲೆ ಅತ್ಯಾಚಾರ- ಶಿಕ್ಷಕ ಅರೆಸ್ಟ್!

Twitter
Facebook
LinkedIn
WhatsApp
ಬಾಲಕಿ ಮೇಲೆ ಅತ್ಯಾಚಾರ- ಶಿಕ್ಷಕ ಅರೆಸ್ಟ್!

ದಾವಣಗೆರೆ: ಜಿಲ್ಲೆಯಲ್ಲಿ ನಾಗರಿಕರು ತಲೆತಗ್ಗಿಸುವ ಘಟನೆ ನಡೆದುಹೋಗಿದೆ. ಗುರುವಿನ ಸ್ಥಾನದಲ್ಲಿ ನಿಂತು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡ್ಬೇಕಾಗಿದ್ದ ಶಿಕ್ಷಕನೋರ್ವ ವಿದ್ಯಾರ್ಥಿನಿಯ ( minor student) ಮೇಲೆ ಶಾಲೆಯಲ್ಲೇ ನಿರಂತರ ಅತ್ಯಾಚಾರ ಎಸಗಿ ಪೊಲೀಸರ ಅತಿಥಿಯಾಗಿದ್ದಾನೆ. ದಾವಣಗೆರೆ ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಯೊಂದರಲ್ಲಿ ಈ ದುರ್ಘಟನೆ ನಡೆದಿದೆ. ಈ ಘಟನೆ ನಡೆದು ವಾರದ ಬಳಿಕವೇ ವಿದ್ಯಾರ್ಥಿ ತನ್ನ ಪೋಷಕರ ಬಳಿ ಹೇಳಿಕೊಂಡ ಬಳಿಕವೇ ಈ ವಿಚಾರ ಬೆಳಕಿಗೆ ಬಂದಿದೆ.

ಪೋಷಕರು ಪೊಲೀಸರಿಗೆ ವಿಷಯ ತಿಳಿಸಿದ ಬೆನ್ನಲ್ಲೇ ಮಹಿಳಾ ಠಾಣೆಯ ಪೊಲೀಸರು ಅಪ್ರಾಪ್ತ ಬಾಲಕಿ ಹೇಳಿಕೆ ಪಡೆದು ಶಾಲೆಯಲ್ಲಿದ್ದ ಶಿಕ್ಷಕನನ್ನು ಬಂಧಿಸಿ ( Protection of Children from Sexual Offences Act -POCSO) ಜೈಲಿಗಟ್ಟಿದ್ದಾರೆ. ಈ ಘಟನೆಯಿಂದ ದಾವಣಗೆರೆ ಜಿಲ್ಲೆಯ ನಾಗರಿಕರು ಹಾಗು ಶಿಕ್ಷಕ ವರ್ಗ ತಲೆತಗ್ಗಿಸುವಂತಾಗಿದೆ. ಇನ್ನು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಈ ಘಟನೆಯಿಂದ ಹಿಂದೇಟು ಹಾಕುವಂತಾಗಿದೆ.

ಬಾಲಕಿ ಅನಾರೋಗ್ಯಕ್ಕೀಡಾದಾಗ ಘಟನೆ ಬೆಳಕಿಗೆ…

ಅಪ್ರಾಪ್ತ ಬಾಲಕಿ ಮೇಲೆ ರಾಕ್ಷಸ ಕೃತ್ಯ ಎಸಗಿರುವ ಶಿಕ್ಷಕನನ್ನ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು ಒಂದು ವಾರದ ಬಳಿಕವೇ ಅದು ಬೆಳಕಿಗೆ ಬಂದಿದೆ. ಅತ್ಯಾಚಾರ ಎಸಗಿದ ಕೆಲದಿನಗಳ ಬಳಿಕ ಅಪ್ರಾಪ್ತ ವಯಸಿನ ಬಾಲಕಿ ಅನಾರೋಗ್ಯಕ್ಕೀಡಾಗಿದ್ದಾಳೆ. ಅದ್ರೂ ಕೂಡ ಶಿಕ್ಷಕನ ಬೆದರಿಕೆಗೆ ಹೆದರಿ ಬಾಲಕಿ ಈ ವಿಚಾರ ಪೋಷಕರ ಬಳಿ ಬಾಯಿ ಬಿಟ್ಟಿಲ್ಲ. ಅದ್ರೇ ಅನಾರೋಗ್ಯಕ್ಕೀಡಾದ ಮಗುವಿಗೆ ಚಿಕಿತ್ಸೆ ಕೊಡಿಸಲು ಪೋಷಕರು ಸರ್ಕಾರಿ ಆಸ್ಪತ್ರೆಗೆ ತೆರಳಿದಾಗ ಅಲ್ಲಿನ ವೈದ್ಯರು ಈ ಸೂಕ್ಷ್ಮ ಘಟನೆಯನ್ನು ಬಾಲಕಿಯ ಪೋಷಕರಿಗೆ ತಿಳಿಸಿದ್ದಾರೆ.

ಬಳಿಕ ಬಾಲಕಿಯಿಂದ ಪೋಷಕರು ಮಾಹಿತಿ ಪಡೆದಿದ್ದಾರೆ. ಶಿಕ್ಷಕನ ಕುಕೃತ್ಯದ ಬಗ್ಗೆ ಪೋಷಕರಿಗೆ ಬಾಲಕಿ ಮಾಹಿತಿ ನೀಡಿದ್ದಾಳೆ. ತಡಮಾಡದೆ ಪೋಷಕರು ಹಾಗು ವೈದ್ಯರು ಮಹಿಳಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಿಂದ ಆರೋಪಿ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳಿಸಿದ್ದೇವೆ ಎಂದು ಮಹಿಳಾ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​​​​ ನೂರ್ ಅಹ್ಮದ್ ಮಾಹಿತಿ ನೀಡಿದ್ದಾರೆ.

ಮಹಿಳಾ ಠಾಣೆ ಪಿಐ ಹೇಳಿದ್ದೇನು…!

ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಮಹಿಳಾ ಠಾಣೆಯ ಪಿಐ ನೂರ್ ಅಹ್ಮದ್ (Police Inspector Noor Ahmed) ರವರು ಘಟನೆಗೆ ಸಂಬಂಧಿಸಿದಂತೆ ಬಾಲಕಿ ಹೇಳಿಕೆ ಪಡೆದು ಶಿಕ್ಷಕನನ್ನು ಬಂಧಿಸಿದ್ದೇವೆ, ಪೋಷಕರು ದೂರು ಸಲ್ಲಿಸಿದ್ದರಿಂದ ಎಫ್ಐಆರ್ ದಾಖಲಿಸಿಕೊಂಡು ಶಾಲೆಯಿಂದಲೇ ಶಿಕ್ಷಕನನ್ನು ಬಂಧಿಸಿದ್ದೇವೆ, ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ, ತನಿಖೆ ಮುಂದುವರೆದಿದೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist